AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ನಟ ನಾಗಭೂಷಣ್ , ವಧು ಯಾರು?

Nagabhushan Marriage: ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ನಾಗಭೂಷಣ್ ಅವರು ತಮ್ಮ ಬಹುಕಾಲದ ಗೆಳತಿಯೊಟ್ಟಿಗೆ ಇಂದು (ಜನವರಿ 28) ವಿವಾಹವಾಗಿದ್ದಾರೆ.

ಮದುವೆಯಾದ ನಟ ನಾಗಭೂಷಣ್ , ವಧು ಯಾರು?
ಮಂಜುನಾಥ ಸಿ.
|

Updated on: Jan 28, 2024 | 3:58 PM

Share

ಕನ್ನಡದ ಜನಪ್ರಿಯ ಹಾಸ್ಯ ನಟ ನಾಗಭೂಷಣ್ (Nagabhushan) ಇಂದು (ಜನವರಿ 28) ವಿವಾಹವಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಪೂಜಾ ಪ್ರಕಾಶ್ ಅವರೊಟ್ಟಿಗೆ ನಾಗಭೂಷಣ್ ಸಪ್ತಪದಿ ತುಳಿದಿದ್ದಾರೆ. ಇವರ ಮದುವೆ ಬೆಳಗಾವಿಯಲ್ಲಿ ನಡೆದಿದೆ. ಪೂಜಾ ಸಹ ಬೆಳಗಾವಿಯವರೇ ಆಗಿದ್ದಾರೆ. ಮದುವೆ ಬಳಿಕ ಆರತಕ್ಷತೆ ಫೆಬ್ರವರಿ 2ರಂದು ಮೈಸೂರಿನಲ್ಲಿ ನಡೆಯಲಿದೆ. ನಾಗಭೂಷಣ್ ಅವರ ವಿವಾಹಕ್ಕೆ ಅವರ ಆಪ್ತ ಗೆಳೆಯರಾದ ಡಾಲಿ ಧನಂಜಯ್, ವಾಸುಕಿ ವೈಭವ್, ನೀನಾಸಂ ಸತೀಶ್, ಅಮೃತಾ ಐಯ್ಯಂಗಾರ್, ನವೀನ್ ಇನ್ನೂ ಹಲವರು ಭಾಗವಹಿಸಿದ್ದರು.

ನಾಗಭೂಷಣ್ ವಿವಾಹವಾಗಿರುವ ಪೂಜಾ ಪ್ರಕಾಶ್ ಗ್ರಾಫಿಕಲ್ ಡಿಸೈನರ್ ಆಗಿದ್ದು ಹಲವು ಕಲಾವಿದರ ಚಿತ್ರಗಳನ್ನು ಭಿನ್ನವಾಗಿ ಚಿತ್ರಿಸಿದ್ದರು. ಈ ಜೋಡಿ ಕಳೆದ ಕೆಲವು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿತ್ತು ಎನ್ನಲಾಗಿದೆ. ಇದೀಗ ಹಿರಿಯರ ಒಪ್ಪಿಗೆ ಪಡೆದು ವಿವಾಹವಾಗಿದ್ದಾರೆ. ಚಿತ್ರರಂಗದ ಕೆಲವರಿಗಷ್ಟೆ ಮದುವೆಗೆ ಆಮಂತ್ರಣವನ್ನು ನೀಡಲಾಗಿತ್ತು. ಆದರೆ ಆರತಕ್ಷತೆಗೆ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:Daali Dhananjay: ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನಾಗಭೂಷಣ್, ಕಾಲೇಜು ದಿನಗಳಿಂದಲೂ ನಾಟಕಗಳಲ್ಲಿ ರುಚಿ ಹೊಂದಿರುವವರು. ಡಾಲಿ ಧನಂಜಯ್ ಜೊತೆ ಸೇರಿಕೊಂಡು ಕಾಲೇಜು ದಿನಗಳಲ್ಲಿ ಹಲವು ನಾಟಕಗಳಲ್ಲಿ ನಟಿಸಿದ್ದರು. ಬಳಿಕ ತಮ್ಮ ಗೆಳೆಯರೊಟ್ಟಿಗೆ ಸೇರಿಕೊಂಡು ಯೂಟ್ಯೂಬ್ ವಿಡಿಯೋ ಮಾಡುತ್ತಿದ್ದರು. ಅಲ್ಲಿಯೂ ವೈರಲ್ ಆದ ಬಳಿಕ ನಿಧಾನಕ್ಕೆ ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ನಾಗಭೂಷಣ್, ‘ಇಕ್ಕಟ್’ ಹಾಗೂ ಇತ್ತೀಚೆಗೆ ಬಿಡುಗಡೆ ಆದ ‘ಟಗರು ಪಲ್ಯ’ ಸಿನಿಮಾದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ‘ಹನಿಮೂನ್’ ಹೆಸರಿನ ವೆಬ್ ಸರಣಿಯಲ್ಲಿಯೂ ಸಹ ನಾಯಕನಾಗಿ ನಾಗಭೂಷಣ್ ನಟಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೆ ನಾಗಭೂಷಣ್, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದರು. ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿ ವೃದ್ಧರು ಅಸುನೀಗಿದ್ದರು. ಅಪಘಾತ ನಡೆದಾಗ ಗಾಯಾಳುಗಳನ್ನು ತಾವೇ ಆಸ್ಪತ್ರೆಗೆ ಸೇರಿಸಿದ್ದ ನಾಗಭೂಷಣ್ ಆ ಬಳಿಕ ತಾವೇ ಪೊಲೀಸ್ ಠಾಣೆಗೆ ಹೋಗಿ ನಡೆದ ಸಂಗತಿ ವಿವರಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ನಾಗಭೂಷಣ್ ಕಡೆಯಿಂದ ಯಾವುದೇ ನಿಯಮ ಉಲ್ಲಂಘನೆ ಆಗದೇ ಇದ್ದುದ್ದನ್ನು ಖಾತ್ರಿ ಪಡಿಸಿದರು. ನಾಗಭೂಷಣ್ ಮದ್ಯದ ಪ್ರಭಾವದಲ್ಲಿ ಗಾಡಿ ಚಲಾಯಿಸಿಲ್ಲ ಎಂದು ಸಹ ಹೇಳಿದ್ದರು.

ಆ ಘಟನೆ ಬಳಿಕ ಬಿಡುಗಡೆ ಆದ ‘ಟಗರು ಪಲ್ಯ’ ಸಿನಿಮಾ ಚಿತ್ರಮಂದಿರದಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಜಯ ಕಂಡಿತು. ಇದೀಗ ‘ವಿದ್ಯಾಪತಿ’ ಹೆಸರಿನ ಸಿನಿಮಾದಲ್ಲಿ ನಾಗಭೂಷಣ್ ನಾಯಕನಾಗಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು