AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೀಗ ಅನಾಥೆ, ನನಗೆ ಯಾರೂ ಇಲ್ಲ’; ತಾಯಿ ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಭಾವುಕ ಮಾತು

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

‘ನಾನೀಗ ಅನಾಥೆ, ನನಗೆ ಯಾರೂ ಇಲ್ಲ’; ತಾಯಿ ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಭಾವುಕ ಮಾತು
ವಿಜಯಲಕ್ಷ್ಮಿ
TV9 Web
| Edited By: |

Updated on:Oct 01, 2021 | 4:06 PM

Share

‘ತಾಯಿಯನ್ನು ಕಳೆದುಕೊಂಡ ನಂತರ ನನಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಆಗ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್​ ಅವರು ನನ್ನ ಸಹಾಯಕ್ಕೆ ಬಂದರು’ ಎಂದು ನಾಗಮಂಡಲ ನಟಿ ವಿಜಯಲಕ್ಷ್ಮಿ ಹೇಳಿದ್ದಾರೆ

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಗೆ ಕೊವಿಡ್​ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಇದರಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅವರು ತಾಯಿಯನ್ನು ಕಳೆದುಕೊಂಡಿದ್ದರು.

ಈ ಬೆನ್ನಲ್ಲೇ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ವಿಜಯಲಕ್ಷ್ಮಿ, ‘ನಂಗೆ ಯಾರೂ ಇಲ್ಲ. ನಾನೀಗ ಅನಾಥೆ. ನನಗೆ ಚಿತ್ರರಂಗವೇ ಕುಟುಂಬ. ನನ್ನ ಅಮ್ಮ ಸತ್ತ ನಂತರ ಪ್ರೇಮಕ್ಕನಿಗೆ ಕರೆ ಮಾಡಿ ಹೇಳಿದೆ. ಅವರು ಬಾ.ಮಾ. ಹರೀಶ್​ ನಂಬರ್ ಕೊಟ್ರು. ಕರೆ ಮಾಡಿದ ತಕ್ಷಣ ಹರೀಶಣ್ಣ ಸಹಾಯಕ್ಕೆ ಬಂದ್ರು. ನಾನು ಆಗ ಹೆಣದ ಮುಂದೆ ಕೂತು ಅಳ್ತಾ ಇದ್ದೆ. ಅಮ್ಮನ ಶವವನ್ನು ಸುಟ್ಟು, ಶ್ರೀರಂಗಪಟ್ಟಣದಲ್ಲಿ ಬೂದಿ ಬಿಟ್ಟು ಬಂದಿದ್ದೇವೆ. ಇದೆಲ್ಲದಕ್ಕೂ ಬಾ.ಮಾ. ಹರೀಶ್​ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಧನ್ಯವಾದ’ ಎಂದರು.

‘​ಶಿವಣ್ಣ, ಪುನೀತ್​ ರಾಜ್​ಕುಮಾರ್​, ಹುಚ್ಚಾ ವೆಂಕಟ್​ ಎಲ್ಲರೂ ಮಾತನಾಡಿದ್ದಾರೆ. ನನಗೆ ಆನೇಕಲ್ಲಲ್ಲಿ ಫ್ರೀ ಆಗಿ ಮನೆ ಕೊಡೋಕೆ ಒಬ್ಬರು ಮುಂದೆ ಬಂದಿದ್ದಾರೆ. ಆದ್ರೆ ಅಲ್ಲಿಗೆ ನಾನು ಹೋಗಲ್ಲ. ಸಿನಿಮಾ ಕೆಲಸ ಇರೋದು ಬೆಂಗಳೂರಿನಲ್ಲಿ. ಅಲ್ಲಿಗೆ ಹೋಗಿ ನಾನೇನು ಮಾಡಲಿ? ಎಂದು ಪ್ರಶ್ನೆ ಮಾಡಿದ್ದಾರೆ ಅವರು.

ಇದನ್ನೂ ಓದಿ: ‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ

‘ನಾಗಮಂಡಲ’ ವಿಜಯಲಕ್ಷ್ಮಿಗೆ ಮುಗಿಯದ ಸಂಕಷ್ಟ; ತಾಯಿಯನ್ನು ಕಳೆದುಕೊಂಡ ನಟಿ

Published On - 4:03 pm, Fri, 1 October 21

Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ