AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್

Nagthihalli Chandrashekhar: ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರುಳ್ಳ ಆರ್​ಎಸ್​ಎಸ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿತ್ತು, ಈ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್
ನಾಗತಿಹಳ್ಳಿ ಚಂದ್ರಶೇಖರ್
Follow us
ಮಂಜುನಾಥ ಸಿ.
|

Updated on: Jun 30, 2023 | 6:57 PM

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekhar), ಆರ್​ಎಸ್​ಎಸ್ (RSS) ಆಯೋಜಿಸಿರುವ ಕಾರ್ಯಕ್ರಮವೊಂದರ ಅಧ್ಯಕ್ಷೆ ವಹಿಸಿರುವ ಮಾಹಿತಿ ಒಳಗೊಂಡ ಆಹ್ವಾನ ಪತ್ರಿಕೆ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಾ ಎಡ-ಬಲ ಚರ್ಚೆಗೆ ನಾಂದಿ ಹಾಡಿತ್ತು. ಧರ್ಮ ಸಾಮರಸ್ಯದ ಪರ, ದ್ವೇಷ ರಾಜಕಾರಣದ ವಿರೋಧಿಯಾಗಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ಧರ್ಮ ದ್ವೇಷದ ಮೂಲ ಎಂದು ಆರೋಪಿಸಲಾಗುವ ಆರ್​ಎಸ್​ಎಸ್​ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಹಲವರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಕೆಲವರಂತೂ ನಾಗತಿಹಳ್ಳಿಯವರು ‘ಒಳ ಬಲಪಂಥೀಯ’ ಎಂದು ಟೀಕಿಸಿದ್ದರು. ಆದರೆ ಆ ಎಲ್ಲದಕ್ಕೂ ನಾಗತಿಹಳ್ಳಿ ಸ್ಪಷ್ಟನೆ ನೀಡಿದ್ದಾರೆ.

”ಈ (ಆರ್​ಎಸ್​ಎಸ್) ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ:‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಈ ಆಹ್ವಾನ ಪತ್ರಿಕೆ ಇಟ್ಟುಕೊಂಡು ತಮ್ಮನ್ನು ಟೀಕಿಸಿದವರ ಬಗ್ಗೆ ”ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು” ಎಂದಿದ್ದಾರೆ ನಾಗತಿಹಳ್ಳಿ ಚಂದ್ರಶೇಖರ್.

ನಾಗತಿಹಳ್ಳಿ ಅವರು ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆಂದು ತಿಳಿಸಿ ಹಲವರು ಟೀಕಿಸಿದ್ದಂತೆಯೇ, ಈಗ ಹೋಗದೇ ಇರುವ ಬಗ್ಗೆಯೂ ಹಲವರು ಪ್ರಶ್ನೆ ಮಾಡಿದ್ದಾರೆ. ನಾಗತಿಹಳ್ಳಿ ಅವರ ಸ್ಪಷ್ಟನೆಯ ಪೋಸ್ಟ್​ಗೆ ಹಲವರು ಕೆಮೆಂಟ್​ ಮಾಡಿದ್ದು, ”ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಏಕೆ ಹೋಗುತ್ತಿಲ್ಲ ತಿಳಿಸಿ ಎಂದಿದ್ದಾರೆ. ಒಂದೊಮ್ಮೆ ಚಿತ್ರೀಕರಣದಲ್ಲಿ ಇಲ್ಲದೇ ಇರದಿದ್ದರೆ ಹೋಗುತ್ತಿದ್ದಿರಾ? ಆರ್​ಎಸ್​ಎಸ್​ ಬಗ್ಗೆ ನಿಲುವೇನು? ಎಂಬಿತ್ಯಾದಿ ಪ್ರಶ್ನೆಗಳನ್ನು ಮೇಷ್ಟ್ರ ಮುಂದುರಿಸಿದ್ದಾರೆ. ಕೆಲವರು ನಿಂದನೆ, ಕೆಟ್ಟ ವ್ಯಂಗ್ಯವನ್ನೂ ಮಾಡಿದ್ದಾರೆ. ಇನ್ನು ಕೆಲವರು ನಾಗತಿಹಳ್ಳಿ ಅವರ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಹಿಂಸೆ, ದ್ವೇಷ, ಅಸಮಾನತೆ, ಕೋಮು ರಾಜಕಾರಣವನ್ನು ವಿರೋಧಿಸುತ್ತಾ ಬಂದಿದ್ದಾರೆ. ಈ ಬಗ್ಗೆ ಹಲವು ಬಾರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಪಲ್ಟಿಯಾದ ಟ್ಯಾಂಕರ್ ಚಾಲಕನಿಗೆ ಸಹಾಯ ಮಾಡೋದು ಬಿಟ್ಟು ಎಣ್ಣೆ ಬಾಚಿಕೊಂಡ ಜನ!
ಪಲ್ಟಿಯಾದ ಟ್ಯಾಂಕರ್ ಚಾಲಕನಿಗೆ ಸಹಾಯ ಮಾಡೋದು ಬಿಟ್ಟು ಎಣ್ಣೆ ಬಾಚಿಕೊಂಡ ಜನ!
ವಿರಾಟ್​ರಂತೆ ಕಾಣುವ ಹ್ಯಾರಿ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಖ್ಯಾತ
ವಿರಾಟ್​ರಂತೆ ಕಾಣುವ ಹ್ಯಾರಿ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಖ್ಯಾತ