ಒಂದು ಪಕ್ಷ ಚುನಾವಣೆ ಟಿಕೆಟ್ ಆಫರ್ ಮಾಡಿತ್ತು, ಆದರೆ ಪ್ರಸ್ತುತ ರಾಜಕೀಯ ಭೀಕರ: ನಾಗತಿಹಳ್ಳಿ ಚಂದ್ರಶೇಖರ್

Nagathihalli Chandrashekhar: ನಿರ್ದೇಶಕ, ಲೇಖಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ರಾಜಕೀಯ ಪಕ್ಷವೊಂದು ಚುನಾವಣೆ ಟಿಕೆಟ್ ಆಫರ್ ನೀಡಿತ್ತು.

ಒಂದು ಪಕ್ಷ ಚುನಾವಣೆ ಟಿಕೆಟ್ ಆಫರ್ ಮಾಡಿತ್ತು, ಆದರೆ ಪ್ರಸ್ತುತ ರಾಜಕೀಯ ಭೀಕರ: ನಾಗತಿಹಳ್ಳಿ ಚಂದ್ರಶೇಖರ್
ನಾಗತಿಹಳ್ಳಿ ಚಂದ್ರಶೇಖರ್
Follow us
|

Updated on: Apr 15, 2023 | 7:17 PM

ಕರ್ನಾಟಕದಲ್ಲಿ ಚುನಾವಣೆ (Karnataka Assembly Election 2023) ಗಾಳಿ ಜೋರಾಗಿ ಬೀಸುತ್ತಿದ್ದು ಮೂರು ಪ್ರಮುಖ ಪಕ್ಷಗಳು ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿವೆ, ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಷ್ಟೆ ಬಾಕಿ ಇದೆ. ತಮ್ಮ-ತಮ್ಮ ಪಕ್ಷದ ಪರವಾಗಿ ತಾರಾ ಪ್ರಚಾರಕರನ್ನು ಸೆಳೆಯುವ ತಂತ್ರವೂ ನಡೆಯುತ್ತಿದೆ. ಜನಪ್ರಿಯರನ್ನು ಹುಡುಕಿ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ. ಇದರ ಭಾಗವಾಗಿಯೇ ಜನಪ್ರಿಯ ಸಿನಿಮಾ ನಿರ್ದೇಶಕ, ಲೇಖಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekhar) ಅವರಿಗೆ ರಾಜಕೀಯ ಪಕ್ಷವೊಂದು ಚುನಾವಣಾ ಟಿಕೆಟ್ ನೀಡುವುದಾಗಿ ಹೇಳಿತ್ತಂತೆ ಆದರೆ ನಾಗತಿಹಳ್ಳಿ ಚಂದ್ರಶೇಖರ್ ಅವರು ಟಿಕೆಟ್ ನಿರಾಕರಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ನಾಗತಿಹಳ್ಳಿ ಚಂದ್ರಶೇಖರ್, ”ನನಗೂ ಒಂದು ಪಕ್ಷದಿಂದ ಚುನಾವಣಾ ಟಿಕೆಟ್ ಕೊಡುವುದಕ್ಕೆ ಬಂದಿದ್ದರು, ನಮ್ಮೂರಿನಲ್ಲಿ ನಾನು ಮಾಡಿದ ಕೆಲಸ ನೋಡಿ ಮೆಚ್ಚಿ ಟಿಕೆಟ್ ನೀಡುವುದಾಗಿ ಹೇಳಿದರು. ಆದರೆ ಅದನ್ನು ನಾನು ನಿರಾಕರಿಸಿದ್ದೇನೆ, ಎಚ್ಚೆತ್ತ ಪ್ರಜೆಗಳಿಗಾಗಿ ಮಾಡಬೇಕಾದ ಕೆಲಸ ಬಹಳ ಇದೆ, ಚುನಾವಣೆ ಅಲ್ಲದೇ ಬೇರೆ ಬೇರೆ ಕೆಲಸಗಳಿವೆ, ಪ್ರಸ್ತುತ ರಾಜಕಾರಣ ನಾವು ಹತ್ತಿರ ಪ್ರವೇಶಿಸದಷ್ಟು ತುಂಬಾ ಭೀಕರವಾಗಿದೆ ಹಣ ಮತ್ತು ಜಾತಿ ಪ್ರಬಲವಾದ ಶಕ್ತಿ ಆಗಿವೆ, ಆ ಎರಡನ್ನೂ ಬಳಸದೇ ಇರುವ ಪರಿಸರ ಬಂದರೆ ನಮ್ಮಂಥವರು ಚುನಾವಣೆಗೆ ಬರಬಹುದು” ಎಂದಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿ ನಾವು ಮತದಾರರಷ್ಟೇ. ನಿಷ್ಠೆಯಿಂದ ಮತದಾನ ಮಾಡುವೆ. ಯಾವುದೇ ಪಕ್ಷ ಅಥವಾ ಅಭ್ಯರ್ಥಿಯ ಹಿಂದೆ ಹೋಗುವುದಿಲ್ಲ. ಯಾರದೇ ಪ್ರಚಾರ ಮಾಡುವುದಿಲ್ಲ, ಚಲನಚಿತ್ರ ಕ್ಷೇತ್ರದಲ್ಲಿ ಕೆಲವರು ಪ್ರಚಾರ, ಚುನಾವಣೆ ಸ್ಪರ್ಧೆಗೆ ಹೋಗುತ್ತಿದ್ದಾರೆ, ನಾನು ಅದರಿಂದ ದೂರ. ದೇಶಕ್ಕೆ‌ ಒಳ್ಳೆಯ ಪ್ರಜಾಪ್ರಭುತ್ವ ಬರಬೇಕಿದೆ, ಅದಕ್ಕಾಗಿ ಪ್ರಜ್ಞಾವಂತರ ಮತದಾರರ ತಯಾರಿ ಮಾಡಬೇಕಿದೆ, ಸಾಂಸ್ಕೃತಿಕ ರೂಪದಲ್ಲಿ ನಾನು ಕೆಲಸ ಮಾಡುತ್ತಿರುವೆ, ಅದೇ ಸಾಕು, ನೇರವಾದ ಚುನಾವಣೆಗೆ ಧುಮುಕುವುದು ಯಾಕೆ ಬೇಕು? ಅದಕ್ಕಾಗಿಯೇ ವೃತ್ತಿವಂತ ರಾಜಕಾರಣಿಗಳು ಇದಾರಲ್ವಾ? ಎಂದು ನಾಗತಿಹಳ್ಳಿ ಚಂದ್ರಶೇಖರ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ರಾಜ್​ಕುಮಾರ್​ಗೆ ಆ ಸಿನಿಮಾ ಕಥೆ ಹೇಳಿದಾಗ ಅತ್ತಿದ್ರು’; ನಾಗತಿಹಳ್ಳಿ ಚಂದ್ರಶೇಖರ್

”ನಂಜುಡಸ್ವಾಮಿಯವರು ರೈತ ಸಂಘ, ಲಂಕೇಶ್ ಪತ್ರಿಕಾ ರಂಗದಲ್ಲಿದ್ದರು, ಇವರಿಬ್ಬರು ತಮ್ಮ ರಂಗದ ಮೂಲಕ ರಾಜಕಾರಣಕ್ಕೆ ಹೊಸ ಕಾಯಕಲ್ಪ ಮಾಡಲು ಹೊರಟಿದ್ದರು ಸಹಜವಾಗಿ ನಮ್ಮಥರಹದ ಬರಹಗಾರರು ಅವರೊಂದಿಗೆ ಗುರುತಿಸಿಕೊಳ್ಳುತ್ತಿದ್ದೆವು, ಆದರೆ ಪ್ರಸ್ತುತ ರಾಜಕಾರಣದಲ್ಲಿ ಅಂತಹ ಯಾವ ಛಾಯೆಯೂ ಇಲ್ಲ, ಆ ತರಹದ ನಾಯಕತ್ವವೇ ಈಗಿಲ್ಲ, ಈಗಿನ ರಾಜಕಾರಣದಲ್ಲಿ ಸಾಂಸ್ಕೃತಿಕ ಶೂನ್ಯತೆ ಇದೆ ಹಾಗಾಗಿ ಈಗಿನ ಚುನಾವಣೆಯಲ್ಲಿ ಕೃತಕ ಸಿದ್ಧಾಂತಗಳನ್ನು ಜನರ ಮೇಲೆ ಹೇರಲಾಗುತ್ತಿದೆ, ಜನರಿಗೆ ಬೇಡವಿಲ್ಲದ ಮಾತು, ವಿದ್ಯಮಾನಗಳು ನಡೆಯುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು ನಾಗತಿಹಳ್ಳಿ ಚಂದ್ರಶೇಖರ್.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ತಮ್ಮ ಊರು ನಾಗತಿಹಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಕೆಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​