AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗವಲ್ಲಿ ಬಂಗಲೆ’ ಸಿನಿಮಾದ ಪೋಸ್ಟರ್, ಟೀಸರ್ ಬಿಡುಗಡೆ; ಫೆ.28ರಂದು ತೆರೆಗೆ

ಫೆಬ್ರವರಿ 28ರಂದು ‘ನಾಗವಲ್ಲಿ ಬಂಗಲೆ’ ಸಿನಿಮಾ ಬಿಡುಗಡೆ ಆಗಲಿದೆ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ 6 ಮುಖ್ಯ ಪಾತ್ರಗಳು ಈ ಸಿನಿಮಾದಲ್ಲಿ ಇವೆ. ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆ ಮಾಡಲಾಗಿದೆ. ತೇಜಸ್ವಿನಿ, ಸಿಮ್ರಾನ್, ರೂಪಶ್ರೀ, ಮಾನಸಾ, ಸುಷ್ಮಾ, ಶ್ವೇತಾ, ರಂಜಿತಾ, ಯಶ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಾಗವಲ್ಲಿ ಬಂಗಲೆ’ ಸಿನಿಮಾದ ಪೋಸ್ಟರ್, ಟೀಸರ್ ಬಿಡುಗಡೆ; ಫೆ.28ರಂದು ತೆರೆಗೆ
Nagavalli Bangale Team
ಮದನ್​ ಕುಮಾರ್​
|

Updated on: Jan 29, 2025 | 10:53 PM

Share

ನಾಗವಲ್ಲಿ ಎಂಬ ಹೆಸರು ಕೇಳಿದರೆ ಸಾಕು ಹಾರರ್​ಪ್ರಿಯರ ಕಿವಿ ಚುರುಕಾಗುತ್ತದೆ. ಹಾರರ್​ ಸಿನಿಮಾ ಲೋಕದಲ್ಲಿ ಆ ಪರಿ ಕ್ರೇಜ್ ಸೃಷ್ಟಿ ಮಾಡಿರುವ ಪಾತ್ರ ಅದು. ಈಗ ‘ನಾಗವಲ್ಲಿ ಬಂಗಲೆ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಟೈಟಲ್ ಹೀಗಿರುವಾಗ ಸಿನಿಮಾದ ಕಥಾವಸ್ತು ಯಾವ ರೀತಿ ಇರಲಿದೆ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಹೌದು, ಈ ಬಾರಿ ಕೂಡ ಪ್ರೇಕ್ಷಕರರನ್ನು ಭಯ ಬೀಳುಸುವ ಪ್ರಯತ್ನವನ್ನು ಈ ಸಿನಿಮಾ ಮೂಲಕ ಮಾಡಲು ಹೊರಟಿದೆ ಹೊಸ ತಂಡ.

ಇತ್ತೀಚೆಗೆ ‘ನಾಗವಲ್ಲಿ ಬಂಗಲೆ’ ಸಿನಿಮಾ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶಾಸಕ ಕೆ. ಗೋಪಾಲಯ್ಯ ಮತ್ತು ಲಹರಿ ವೇಲು ಅವರು ಟೀಸರ್, ಪೋಸ್ಟರ್ ಬಿಡುಗಡೆ ಮಾಡಿದರು. ಬಳಿಕ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಕೂಡ ಈ ವೇಳೆ ಹಾಜರಿದ್ದರು. ಈ ಸಿನಿಮಾವನ್ನು ಫೆಬ್ರವರಿ 28 ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ: ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

ಕವಿ ರಾಜೇಶ್ ಅವರು ‘ನಾಗವಲ್ಲಿ ಬಂಗಲೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಪ್ರತಿನಿಧಿಸುವ 6 ಪಾತ್ರಗಳಿವೆ. ಆರು ಹುಡುಗಿಯರು ಈ ಪಾತ್ರಗಳನ್ನು ನಿಭಾಯಿಸಿದ್ದಾರೆ. ನಾಗವಲ್ಲಿ ಪಾತ್ರದಲ್ಲಿ ‌ತೇಜಸ್ವಿನಿ ನಟಿಸಿದ್ದಾರೆ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಪಾತ್ರಗಳಿಗೆ ಸಿಮ್ರಾನ್, ಮಾನಸಾ, ರೂಪಶ್ರೀ, ಸುಷ್ಮಾ, ರಂಜಿತಾ, ಶ್ವೇತಾ ಅವರು ಬಣ್ಣ ಹಚ್ಚಿದ್ದಾರೆ.

‌ ಈ ಸಿನಿಮಾದಲ್ಲಿ ನಾಯಕನಾಗಿ ಯಶ್ ನಟಿಸಿದ್ದಾರೆ. ತ್ರಿಭುವನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಆರು ಪಾತ್ರಗಳು ‘ನಾಗವಲ್ಲಿ ಬಂಗಲೆ’ಯನ್ನು ಪ್ರವೇಶಿಸಿದಾಗ ಏನೆಲ್ಲ ಘಟನೆಗಳು ನಡೆಯುತ್ತವೆ ಎಂಬುದೇ ಸಿನಿಮಾದ ಸಾರಾಂಶ ಎಂದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಜೆ.ಎಂ. ಪ್ರಹ್ಲಾದ್ ಅವರು ಮಾಹಿತಿ ನೀಡಿದ್ದಾರೆ. ‘ಹಂಸ ವಿಷನ್ಸ್’ ಮೂಲಕ ನೆ.ಲ. ಮಹೇಶ್ ಮತ್ತು ನೇವಿ ಮಂಜು ಅವರು ಸಿನಿಮಾವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?