AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನೆ ಯುವರಾಣಿ’ ಮೀರಾ ಹೊಸ ಚಿತ್ರದ ಬಗ್ಗೆ ರಕ್ಷಿತ್​ ಶೆಟ್ಟಿ ನೀಡಿದ್ರು ಬ್ರೇಕಿಂಗ್​​ ನ್ಯೂಸ್​; ಇದಕ್ಕೆ ವಿಹಾನ್​ ಹೀರೋ

Rakshit Shetty | Paramvah Studios: ವಿಹಾನ್​ ಮತ್ತು ಅಂಕಿತಾ ಅಮರ್​ ಅವರ ಪ್ರತ್ಯೇಕ ಪೋಸ್ಟರ್​ಗಳನ್ನು ರಕ್ಷಿತ್​ ಶೆಟ್ಟಿ ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಅವರು ಹೊಸ ಸುದ್ದಿ ನೀಡಿದ್ದಾರೆ.

‘ನಮ್ಮನೆ ಯುವರಾಣಿ’ ಮೀರಾ ಹೊಸ ಚಿತ್ರದ ಬಗ್ಗೆ ರಕ್ಷಿತ್​ ಶೆಟ್ಟಿ ನೀಡಿದ್ರು ಬ್ರೇಕಿಂಗ್​​ ನ್ಯೂಸ್​; ಇದಕ್ಕೆ ವಿಹಾನ್​ ಹೀರೋ
ಅಂಕಿತಾ ಅಮರ್, ರಕ್ಷಿತ್ ಶೆಟ್ಟಿ, ವಿಹಾನ್
TV9 Web
| Edited By: |

Updated on: Jul 17, 2022 | 1:20 PM

Share

ಕಿರುತೆರೆ ಕಲಾವಿದರ ಮುಂದಿನ ನಿಲ್ದಾಣವೇ ಹಿರಿತೆರೆ. ಧಾರಾವಾಹಿಗಳಲ್ಲಿ ಮಿಂಚಿದ ಅನೇಕ ನಟ-ನಟಿಯರು ನಂತರ ಚಿತ್ರರಂಗಕ್ಕೆ ಕಾಲಿಟ್ಟು ದೊಡ್ಡ ಹೆಸರು ಮಾಡಿದ ಉದಾಹರಣೆ ಸಾಕಷ್ಟಿದೆ. ರಚಿತಾ ರಾಮ್, ಯಶ್​, ರಾಧಿಕಾ ಪಂಡಿತ್, ಶಾರುಖ್​ ಖಾನ್​ ಮುಂತಾದವರೆಲ್ಲ ಇದೇ ಹಾದಿಯಲ್ಲಿ ಸಾಗಿ ಬಂದವರು. ಈಗ ಕಿರುತೆರೆ ನಟಿ ಅಂಕಿತಾ​ ಅಮರ್​ (Ankita Amar) ಅವರು ಕೂಡ ಸಿನಿಮಾ ಕ್ಷೇತ್ರದಲ್ಲಿ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ನಮ್ಮನೆ ಯುವರಾಣಿ’ ಧಾರಾವಾಹಿಯಲ್ಲಿ ಮೀರಾ ಪಾತ್ರ ಮಾಡಿ ಫೇಮಸ್​ ಆದ ಅಂಕಿತಾ ಅವರ ಹೊಸ ಸಿನಿಮಾ ಬಗ್ಗೆ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಈ ಚಿತ್ರಕ್ಕೆ ‘ಪಂಚತಂತ್ರ’ ಖ್ಯಾತಿಯ ನಟ ವಿಹಾನ್​ (Vihaan) ಅವರು ಹೀರೋ. ಅಂಕಿತಾ ಅಮರ್ ಮತ್ತು ವಿಹಾನ್​​ ಜೋಡಿಯಾಗಿ ನಟಿಸಲಿರುವ ಈ ಸಿನಿಮಾವನ್ನು ರಕ್ಷಿತ್​ ಶೆಟ್ಟಿ (Rakshit Shetty) ನಿರ್ಮಾಣ ಮಾಡಲಿದ್ದಾರೆ. ಅವರ ಒಡೆತನದ ಪರಂವಾ ಸ್ಟುಡಿಯೋಸ್​ ಮೂಲಕ ಈ ಚಿತ್ರಕ್ಕೆ ಬಂಡವಾಳ ಹೂಡಲಾಗುತ್ತಿದೆ.

ನಟ ಮತ್ತು ನಿರ್ದೇಶಕನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ರಕ್ಷಿತ್​ ಶೆಟ್ಟಿ ಅವರು ಬ್ಯುಸಿ ಆಗಿದ್ದಾರೆ. ಅವರ ನಿರ್ಮಾಣದಲ್ಲಿ ಗಮನಾರ್ಹ ಸಿನಿಮಾಗಳು ಮೂಡಿಬರುತ್ತಿವೆ. ‘777 ಚಾರ್ಲಿ’ ಚಿತ್ರದ ಗೆಲುವಿನ ಬಳಿಕ ಅವರು ಹೊಸ ಸಿನಿಮಾದ ನಿರ್ಮಾಣದತ್ತ ಗಮನ ಹರಿಸಿದ್ದಾರೆ. ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುವವರು ಯಾರು ಎಂಬುದನ್ನು ರಕ್ಷಿತ್ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ವಿಹಾನ್​ ಮತ್ತು ಅಂಕಿತಾ ಅಮರ್​ ಅವರ ಪ್ರತ್ಯೇಕ ಪೋಸ್ಟರ್​ಗಳನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ.

‘ಪಂಚತಂತ್ರ’ ಸಿನಿಮಾ ತೆರೆಕಂಡ ಬಳಿಕ ನಟ ವಿಹಾನ್​ ಅವರು ಯಾವುದೇ ಚಿತ್ರ ಒಪ್ಪಿಕೊಂಡಿರಲಿಲ್ಲ. ಈಗ ಅವರು ಈ ಹೊಸ ಸಿನಿಮಾ ಮೂಲಕ ಮತ್ತೆ ಸುದ್ದಿ ಆಗಿದ್ದಾರೆ. ರಕ್ಷಿತ್​ ಶೆಟ್ಟಿ ಅವರ ಟೀಮ್​ನಲ್ಲಿ ಗುರುತಿಸಿಕೊಂಡಿರುವ ಚಂದ್ರಜಿತ್​ ಬೆಳ್ಳಿಯಪ್ಪ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಚಾಲ್ತಿಯಲ್ಲಿವೆ. ಆಗಸ್ಟ್​ನಲ್ಲಿ ಚಿತ್ರದ ಶೀರ್ಷಿಕೆ ಅನೌನ್ಸ್​ ಆಗಲಿದ್ದು, ಸೆಪ್ಟೆಂಬರ್​ನಲ್ಲಿ ಶೂಟಿಂಗ್​ ಶುರುವಾಗಲಿದೆ.

ಇದನ್ನೂ ಓದಿ
Image
ಕಿರುತೆರೆ ನಟಿ ಪೂರ್ಣಿಮಾಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ; ಖಾಸಗಿ ಹಾಸ್ಪಿಟಲ್​ ಬೇಡ ಅಂದಿದ್ದಕ್ಕೆ ಕಾರಣ ಏನು?
Image
ಮನೆಯಲ್ಲೇ ಸಿಕ್ತು ಖ್ಯಾತ ಕಿರುತೆರೆ ನಟಿಯ ಶವ; ಬಾಯ್​ಫ್ರೆಂಡ್ ಮೇಲೆ ಮೂಡಿತು ಅನುಮಾನ
Image
Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು
Image
ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಅಮೆರಿಕಾದ ನ್ಯೂಯಾರ್ಕ್‌ ಫಿಲ್ಮ್​ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್‌ ಸೆಲ್ವರಾಜನ್‌ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ಗಗನ್‌ ಬದೇರಿಯಾ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ