AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ವಿಶೇಷ ಡ್ಯಾನ್ಸ್ ಮೂಲಕ ‘ಯುವ’ ತಂಡಕ್ಕೆ ಬೆಂಬಲ ಕೊಟ್ಟ ನಮ್ರತಾ-ಕಿಶನ್

ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿ ಬಂದಿದೆ. ಮಾರ್ಚ್ 29ರಂದು ಸಿನಿಮಾ ರಿಲೀಸ್ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾನ ನಿರ್ಮಾಣ ಮಾಡಿದೆ. ಯುವ ರಾಜ್​ಕುಮಾರ್ ಹಾಗೂ ಸಪ್ತಮಿ ಗೌಡ ಈ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ‘ಕವಿತೆ..’ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ. ಈ ಹಾಡಿಗೆ ನಮ್ರತಾ ಹಾಗೂ ಕಿಶನ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

Namratha Gowda: ವಿಶೇಷ ಡ್ಯಾನ್ಸ್ ಮೂಲಕ ‘ಯುವ’ ತಂಡಕ್ಕೆ ಬೆಂಬಲ ಕೊಟ್ಟ ನಮ್ರತಾ-ಕಿಶನ್
ನಮ್ರತಾ-ಕಿಶನ್
ರಾಜೇಶ್ ದುಗ್ಗುಮನೆ
|

Updated on:Mar 14, 2024 | 12:01 PM

Share

ನಮ್ರತಾ ಗೌಡ (Namratha Gowda) ಅವರ ಖ್ಯಾತಿ ಹೆಚ್ಚಾಗಿದೆ. ಇದಕ್ಕೆ ಕಾರಣ ಆಗಿದ್ದು ‘ಬಿಗ್ ಬಾಸ್ ಕನ್ನಡ ಸೀಸನ್ 10’. ಫಿನಾಲೆಗೂ ಮೊದಲು ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ತಮಗೆ ಸಿಕ್ಕ ಜನಪ್ರಿಯತೆ ನೋಡಿ ಅವರಿಗೆ ಖುಷಿಯಾಗಿದೆ. ಈಗ ಅವರು ‘ಯುವ’ ತಂಡವನ್ನು ಬೆಂಬಲಿಸಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ನಮ್ರತಾಗೆ ಕಿಶನ್ ಬಿಳಗಲಿ ಸಾಥ್ ನೀಡಿದ್ದಾರೆ.

ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿ ಬಂದಿದೆ. ಮಾರ್ಚ್ 29ರಂದು ಸಿನಿಮಾ ರಿಲೀಸ್ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾನ ನಿರ್ಮಾಣ ಮಾಡಿದೆ. ಯುವ ರಾಜ್​ಕುಮಾರ್ ಹಾಗೂ ಸಪ್ತಮಿ ಗೌಡ ಈ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಯುವಗೆ ಇದು ಮೊದಲ ಸಿನಿಮಾ. ಈ ಚಿತ್ರದ ‘ಕವಿತೆ..’ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ. ಈ ಹಾಡಿಗೆ ನಮ್ರತಾ ಹಾಗೂ ಕಿಶನ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ನಮ್ರತಾ ಡ್ಯಾನ್ಸ್ ವಿಡಿಯೋ

ಕಿಶನ್ ಹಾಗೂ ನಮ್ರತಾ ಇಬ್ಬರಿಗೂ ಹಾಡಿನ ಬಗ್ಗೆ ವಿಶೇಷ ಪ್ರೀತಿ ಇದೆ. ಇವರು ಒಟ್ಟಾಗಿ ಹೆಜ್ಜೆ ಹಾಕಿದರೆ ಎಲ್ಲರ ಗಮನ ಅತ್ತ ಹೋಗೋದು ಪಕ್ಕಾ. ಈಗ ಅವರ ಹೊಸ ಡ್ಯಾನ್ಸ್ ಗಮನ ಸೆಳೆದಿದೆ. ಈ ಡ್ಯಾನ್ಸ್​ಗೆ ಸಪ್ತಮಿ ಗೌಡ, ಹಿತಾ ಚಂದ್ರಶೇಖರ್ ಸೇರಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಮೊದಲು ಕೂಡ ಕಿಶನ್ ಹಾಗೂ ನಮ್ರತಾ ಗೌಡ ಕಾಂಬಿನೇಷನ್​ನಲ್ಲಿ ಹಲವು ಡ್ಯಾನ್ಸ್​ಗಳು ಮೂಡಿ ಬಂದಿದ್ದವು.

ಇದನ್ನೂ ಓದಿ: ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಕಿಶನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 7’ರಲ್ಲಿ ಸ್ಪರ್ಧಿ ಆಗಿದ್ದರು. ಅಲ್ಲಿಯೂ ಅವರು ಡ್ಯಾನ್ಸ್ ಮಾಡಿ ಎಲ್ಲರ ಗಮನ ಸೆಳೆದಿದ್ದರು. ಅವರು ಫಿನಾಲೆಯಲ್ಲಿ ಗೆಲ್ಲೋಕೆ ಅವರಿಗೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Thu, 14 March 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು