AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ಇಂದು (ಏ.16) ಹೃದಯಾಘಾತದಿಂದ ನಿಧನರಾದ ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ದ್ವಾರಕೀಶ್​ ನಿಧನಕ್ಕೆ ಟ್ವಿಟರ್​ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್​ ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ರಜನಿಕಾಂತ್​, ಪ್ರಕಾಶ್​ ರಾಜ್​ ಮುಂತಾದವರು ಕೂಡ ದ್ವಾರಕೀಶ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?
ದ್ವಾರಕೀಶ್​, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on:Apr 16, 2024 | 11:17 PM

Share

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಟ ದ್ವಾರಕೀಶ್​ (Dwarakish) ಅವರು ಇಂದು (ಏಪ್ರಿಲ್​ 16) ನಿಧನರಾಗಿದ್ದು ನೋವಿನ ಸಂಗತಿ. ಹೃದಯಾಘಾತದಿಂದ 81ನೇ ವಯಸ್ಸಿನಲ್ಲಿ ಮೃತರಾದ ದ್ವಾರಕೀಶ್​ ಅವರಿಗೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ರಾಜಕಾರಣಿಗಳು ದ್ವಾರಕೀಶ್​ ನಿಧನಕ್ಕೆ (Dwarakish Death) ಕಂಬನಿ ಮಿಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಎಕ್ಸ್​ (ಟ್ವಿಟರ್​) ಖಾತೆಯ ಮೂಲಕ ದ್ವಾರಕೀಶ್​ ಅವರಿಗೆ ಮೋದಿ ನಮನ ಸಲ್ಲಿಸಿದ್ದಾರೆ.

‘ದಶಕಗಳ ಕಾಲ ಮರೆಯಲಾಗದ ಅಭಿನಯ ಮತ್ತು ಭಿನ್ನವಾದ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ದ್ವಾರಕೀಶ್​ ಅವರು ನೀಡಿದ ಕೊಡುಗೆ ಅಪಾರ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ, ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗವನ್ನು ಅವರು ಬೆಳೆಸಿದರು. ಅವರ ನಿಧನದಿಂದ ದುಃಖ ಆಗಿದೆ. ಅದ್ಭುತವಾದ ಅವರ ಸಿನಿಮಾ ಪಯಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಸಂತಾಪಗಳು’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ನಟ ಪ್ರಕಾಶ್​ ರಾಜ್​ ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕನ್ನಡದ ಕುಳ್ಳ ದ್ವಾರಕೀಶ್​

‘ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್. ಅಪಾರ ಜೀವನ ಪ್ರೀತಿಯ.. ಚಿಲುಮೆ.. ಕನ್ನಡ ಚಿತ್ರರಂಗವನ್ನು ತನ್ನ ಮಹತ್ವಾಕಾಂಕ್ಷೆಯಿಂದ ಶ್ರೀಮಂತಗೊಳಿಸಿದ ಕನಸುಗಾರ. ಇನ್ನು ನಮ್ಮೊಂದಿಗಿಲ್ಲ.. ಆದರೆ ಅವರ ಕೊಡುಗೆ ಚಿರಸ್ಮರಣೀಯ. ನಿಮ್ಮನ್ನು ಮಿಸ್​ ಮಾಡಿಕೊಳ್ಳುತ್ತೇವೆ ಚೀಫ್​. ಎಲ್ಲದಕ್ಕೂ ಧನ್ಯವಾದಗಳು’ ಎಂದು ಪ್ರಕಾಶ್​ ರಾಜ್ ಅವರು ಟ್ವೀಟ್​ ಮಾಡಿದ್ದಾರೆ.

ರಜನಿಕಾಂತ್​ ಪೋಸ್ಟ್​:

‘ನನ್ನ ಆತ್ಮೀಯ ಸ್ನೇಹಿತ ದ್ವಾರಕೀಶ್​ ಅಗಲಿಕೆಯಿಂದ ನನಗೆ ತೀವ್ರ ನೋವಾಗಿದೆ. ಹಾಸ್ಯ ನಟನಾಗಿ ದ್ವಾರಕೀಶ್​ ಅವರು ವೃತ್ತಿ ಜೀವನ ಪ್ರಾರಂಭಿಸಿದ್ದರು. ಬಳಿಕ ಬಹು ದೊಡ್ಡ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರಯ ಬೆಳೆದು ನಿಂತರು. ಆ ಎಲ್ಲ ಘಟನೆಗಳು ನನಗೆ ಈಗ ನೆನಪಾಗುತ್ತಿವೆ. ಅವರ ಕುಟುಂಬದವರಿಗೆ ಮತ್ತು ಆಪ್ತರಿಗೆ ನನ್ನ ಸಂತಾಪಗಳು’ ಎಂದು ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:14 pm, Tue, 16 April 24

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ