AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ಇಂದು (ಏ.16) ಹೃದಯಾಘಾತದಿಂದ ನಿಧನರಾದ ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ದ್ವಾರಕೀಶ್​ ನಿಧನಕ್ಕೆ ಟ್ವಿಟರ್​ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್​ ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ರಜನಿಕಾಂತ್​, ಪ್ರಕಾಶ್​ ರಾಜ್​ ಮುಂತಾದವರು ಕೂಡ ದ್ವಾರಕೀಶ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?
ದ್ವಾರಕೀಶ್​, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on:Apr 16, 2024 | 11:17 PM

Share

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಟ ದ್ವಾರಕೀಶ್​ (Dwarakish) ಅವರು ಇಂದು (ಏಪ್ರಿಲ್​ 16) ನಿಧನರಾಗಿದ್ದು ನೋವಿನ ಸಂಗತಿ. ಹೃದಯಾಘಾತದಿಂದ 81ನೇ ವಯಸ್ಸಿನಲ್ಲಿ ಮೃತರಾದ ದ್ವಾರಕೀಶ್​ ಅವರಿಗೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ರಾಜಕಾರಣಿಗಳು ದ್ವಾರಕೀಶ್​ ನಿಧನಕ್ಕೆ (Dwarakish Death) ಕಂಬನಿ ಮಿಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಎಕ್ಸ್​ (ಟ್ವಿಟರ್​) ಖಾತೆಯ ಮೂಲಕ ದ್ವಾರಕೀಶ್​ ಅವರಿಗೆ ಮೋದಿ ನಮನ ಸಲ್ಲಿಸಿದ್ದಾರೆ.

‘ದಶಕಗಳ ಕಾಲ ಮರೆಯಲಾಗದ ಅಭಿನಯ ಮತ್ತು ಭಿನ್ನವಾದ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ದ್ವಾರಕೀಶ್​ ಅವರು ನೀಡಿದ ಕೊಡುಗೆ ಅಪಾರ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ, ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗವನ್ನು ಅವರು ಬೆಳೆಸಿದರು. ಅವರ ನಿಧನದಿಂದ ದುಃಖ ಆಗಿದೆ. ಅದ್ಭುತವಾದ ಅವರ ಸಿನಿಮಾ ಪಯಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಸಂತಾಪಗಳು’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ನಟ ಪ್ರಕಾಶ್​ ರಾಜ್​ ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕನ್ನಡದ ಕುಳ್ಳ ದ್ವಾರಕೀಶ್​

‘ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್. ಅಪಾರ ಜೀವನ ಪ್ರೀತಿಯ.. ಚಿಲುಮೆ.. ಕನ್ನಡ ಚಿತ್ರರಂಗವನ್ನು ತನ್ನ ಮಹತ್ವಾಕಾಂಕ್ಷೆಯಿಂದ ಶ್ರೀಮಂತಗೊಳಿಸಿದ ಕನಸುಗಾರ. ಇನ್ನು ನಮ್ಮೊಂದಿಗಿಲ್ಲ.. ಆದರೆ ಅವರ ಕೊಡುಗೆ ಚಿರಸ್ಮರಣೀಯ. ನಿಮ್ಮನ್ನು ಮಿಸ್​ ಮಾಡಿಕೊಳ್ಳುತ್ತೇವೆ ಚೀಫ್​. ಎಲ್ಲದಕ್ಕೂ ಧನ್ಯವಾದಗಳು’ ಎಂದು ಪ್ರಕಾಶ್​ ರಾಜ್ ಅವರು ಟ್ವೀಟ್​ ಮಾಡಿದ್ದಾರೆ.

ರಜನಿಕಾಂತ್​ ಪೋಸ್ಟ್​:

‘ನನ್ನ ಆತ್ಮೀಯ ಸ್ನೇಹಿತ ದ್ವಾರಕೀಶ್​ ಅಗಲಿಕೆಯಿಂದ ನನಗೆ ತೀವ್ರ ನೋವಾಗಿದೆ. ಹಾಸ್ಯ ನಟನಾಗಿ ದ್ವಾರಕೀಶ್​ ಅವರು ವೃತ್ತಿ ಜೀವನ ಪ್ರಾರಂಭಿಸಿದ್ದರು. ಬಳಿಕ ಬಹು ದೊಡ್ಡ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರಯ ಬೆಳೆದು ನಿಂತರು. ಆ ಎಲ್ಲ ಘಟನೆಗಳು ನನಗೆ ಈಗ ನೆನಪಾಗುತ್ತಿವೆ. ಅವರ ಕುಟುಂಬದವರಿಗೆ ಮತ್ತು ಆಪ್ತರಿಗೆ ನನ್ನ ಸಂತಾಪಗಳು’ ಎಂದು ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:14 pm, Tue, 16 April 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!