AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾತಿಚರಾಮಿ’ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ; ಸಿಂಪಲ್​ ಆಗಿ ನಡೆಯಿತು ಎಂಗೇಜ್​ಮೆಂಟ್​

ಕೊರೊನಾ ವೈರಸ್​ ಲಾಕ್​ಡೌನ್​ ನಿಯಮಾವಳಿ ಅನುಸಾರ ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ನೆರವೇರಿದೆ. ಕುಟುಂಬದವರು, ಆಪ್ತರು, ಸ್ನೇಹಿತರು ಸೇರಿ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

‘ನಾತಿಚರಾಮಿ’ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ; ಸಿಂಪಲ್​ ಆಗಿ ನಡೆಯಿತು ಎಂಗೇಜ್​ಮೆಂಟ್​
ನಾತಿಚರಾಮಿ’ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ;
TV9 Web
| Edited By: |

Updated on: Jul 04, 2021 | 5:12 PM

Share

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾನುವಾರ (ಜು.4) ಅವರು ಅಖಿಲಾ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಕೊರೊನಾ ವೈರಸ್​ ಲಾಕ್​ಡೌನ್​ ನಿಯಮಾವಳಿ ಅನುಸಾರ ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ನೆರವೇರಿದೆ. ಕುಟುಂಬದವರು, ಆಪ್ತರು, ಸ್ನೇಹಿತರು ಸೇರಿ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಆಗಸ್ಟ್​ 15ರಂದು ಮಂಸೋರೆ-ಅಖಿಲಾ ಬಾಳಬಂಧನಕ್ಕೆ ಒಳಗಾಗಲಿದ್ದಾರೆ.

‘ಹರಿವು’, ‘ನಾತಿಚರಾಮಿ’ ಮತ್ತು ‘ಆಕ್ಟ್​ 1978’ ಚಿತ್ರಗಳಿಗೆ ನಿರ್ದೇಶನ ಮಾಡಿದವರು ಮಂಸೋರೆ. ಈ ಪೈಕಿ ಹರಿವು ಮತ್ತು ನಾತಿಚರಾಮಿ ಚಿತ್ರಗಳಲ್ಲಿ ಸಂಚಾರಿ ವಿಜಯ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಈ ಎರಡೂ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿತ್ತು. ‘ಆಕ್ಟ್​ 1978’ ಚಿತ್ರದಲ್ಲೂ ಸಂಚಾರಿ ವಿಜಯ್​ ಒಂದು ಪಾತ್ರ ಮಾಡಿದ್ದರು. ಈಗ ಮಂಸೋರೆ ಅವರು ರಾಣಿ ಅಕ್ಕಬ್ಬನ ಕುರಿತು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಅದರ ನಡುವೆಯೇ ಮದುವೆ ಎಂಬ ಹೊಸ ಅಧ್ಯಾಯ ಆರಂಭಿಸುತ್ತಿದ್ದಾರೆ.

ಮಂಸೋರೆ ಮಾಡಿರುವುದು ಮೂರೇ ಸಿನಿಮಾಗಳಾದರೂ ಕೂಡ ಆ ಚಿತ್ರಗಳ ಸಾಧನೆ ದೊಡ್ಡದು. 2014ರಲ್ಲಿ ಬಂದ ‘ಹರಿವು’ ಹಾಗೂ 2018ರಲ್ಲಿ ಬಿಡುಗಡೆಯಾದ ‘ನಾತಿಚರಾಮಿ’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ‘ನಾತಿಚರಾಮಿ’ ಸಿನಿಮಾದ ಹಾಡಿಗೆ ಮಂಸೋರೆ ಅವರಿ ‘ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ’ ಪಡೆದುಕೊಂಡರು. ಅಲ್ಲದೆ, ಇತರೆ ಮೂರು ವಿಭಾಗಗಳಲ್ಲಿ ಆ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗೌರವ ಸಿಕ್ಕಿತ್ತು. ಆ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಕೂಡ ಒಲಿದು ಬಂದಿತ್ತು.

ಕಳೆದ ವರ್ಷ ಲಾಕ್​ ಡೌನ್​ ಬಳಿಕ ಬಿಡುಗಡೆಯಾದ ‘ಆಕ್ಟ್ 1978’ ಚಿತ್ರಕ್ಕೆ ಇಡೀ ಸ್ಯಾಂಡಲ್​ವುಡ್​ ಮೆಚ್ಚುಗೆ ಸೂಚಿಸಿದ್ದು ವಿಶೇಷ. ಹಂಸಲೇಖ, ದರ್ಶನ್​ ಮುಂತಾದ ಸೆಲೆಬ್ರಿಟಿಗಳು ಮಂಸೋರೆ ಮತ್ತು ತಂಡಕ್ಕೆ ಭೇಷ್​ ಎಂದಿದ್ದರು. ಬಾಕ್ಸ್​ ಆಫೀಸ್​ನಲ್ಲಿ ಕೆಲವು ಸಿಕ್ಕಿದ್ದು ಮಾತ್ರವಲ್ಲದೆ, ವಿಮರ್ಶಕರಿಂದಲೂ ಈ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. ರಾಣಿ ಅಬ್ಬಕ್ಕನ ಕುರಿದ ಸಿನಿಮಾ ಮಾತ್ರವಲ್ಲದೆ, ಮತ್ತೊಂದು ಹೊಸ ಚಿತ್ರ ಘೋಷಿಸಲು ಕೂಡ ಮಂಸೋರೆ ಪ್ಲ್ಯಾನ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್​; ಕರ್ನಾಟಕದಲ್ಲಿ ಬಾಗಿಲು ಮುಚ್ಚಲಿವೆ 150 ಚಿತ್ರಮಂದಿರಗಳು

ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’; ಭಾಷಾಪ್ರೇಮದ ಜೊತೆ ಒಂದು ಪ್ರೇಮಕಥೆ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!