AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ

‘ಕಾಟೇರ’, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ನಟಿಸಿರುವ ಮಾಸ್ಟರ್ ರೋಹಿತ್​ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದ್ದು, ಮಾಸ್ಟರ್ ರೋಹಿತ್​ಗೆ ತೀವ್ರ ಗಾಯಗಳಾಗಿವೆ. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ
ಮಂಜುನಾಥ ಸಿ.
|

Updated on:Nov 17, 2024 | 12:12 PM

Share

ಬ್ಲಾಕ್ ಬಸ್ಟರ್ ಸಿನಿಮಾ ‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ನಟನೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದಿರುವ ಮಾಸ್ಟರ್ ರೋಹಿತ್​ಗೆ ನಿನ್ನೆ ಅಪಘಾತವಾಗಿದೆ. ಪಾಂಡವಪುರದಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ, ಈ ಭೀಕರ ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಒಬ್ಬ ಉಪನ್ಯಾಸಕ ಹಾಗೂ ರೋಹಿತ್​ರ ಗೆಳೆಯ KA11 N 4173 ಸಂಖ್ಯೆಯ ಕಾರಿನಲ್ಲಿ ಪಾಂಡವಪುರದಿಂದ ಶ್ರೀರಂಗಪಟ್ಟಣದ ಆರಾಧನಾ ಶಾಲೆಗೆ ಹೋಗುತ್ತಿದ್ದರು. ಈ ವೇಳೆಯಲ್ಲಿ ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಮುಖಾ-ಮುಖಿ ಡಿಕ್ಕಿ ಆಗಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ:ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

ಅದರಲ್ಲೂ ರೋಹಿತ್​ಗೆ ತೀವ್ರ ಪೆಟ್ಟಾಗಿದ್ದು, ರೋಹಿತ್​ರ ವಸಡು ಒಡೆದು ಹೋಗಿದೆ. ಹಾಗೂ ಅವರ ತಲೆ ಬುರುಡೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್​ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ರೋಹಿತ್​ರ ಗೆಳೆಯ ಹಾಗೂ ಉಪನ್ಯಾಸಕರಿಗೂ ತೀವ್ರ ಪೆಟ್ಟಾಗಿದೆ.

ಮಾಸ್ಟರ್ ರೋಹಿತ್, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಹ ದೊರಕಿತು. ಕಳೆದ ವರ್ಷ ಬಿಡುಗಡೆ ಆದ ‘ಕಾಟೇರ’ ಸಿನಿಮಾದಲ್ಲಿ ರೋಹಿತ್ ನಟಿಸಿದ್ದರು. ಆ ಸಿನಿಮಾದಲ್ಲಿಯೂ ರೋಹಿತ್ ಅದ್ಭುತವಾಗಿ ನಟಿಸಿದ್ದರು. ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ದರ್ಶನ್, ರೋಹಿತ್ ಅವರ ನಟನೆಯನ್ನು ಕೊಂಡಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sun, 17 November 24

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ