AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ

‘ಕಾಟೇರ’, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ನಟಿಸಿರುವ ಮಾಸ್ಟರ್ ರೋಹಿತ್​ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದ್ದು, ಮಾಸ್ಟರ್ ರೋಹಿತ್​ಗೆ ತೀವ್ರ ಗಾಯಗಳಾಗಿವೆ. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ
Follow us
ಮಂಜುನಾಥ ಸಿ.
|

Updated on:Nov 17, 2024 | 12:12 PM

ಬ್ಲಾಕ್ ಬಸ್ಟರ್ ಸಿನಿಮಾ ‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ನಟನೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದಿರುವ ಮಾಸ್ಟರ್ ರೋಹಿತ್​ಗೆ ನಿನ್ನೆ ಅಪಘಾತವಾಗಿದೆ. ಪಾಂಡವಪುರದಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ, ಈ ಭೀಕರ ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಒಬ್ಬ ಉಪನ್ಯಾಸಕ ಹಾಗೂ ರೋಹಿತ್​ರ ಗೆಳೆಯ KA11 N 4173 ಸಂಖ್ಯೆಯ ಕಾರಿನಲ್ಲಿ ಪಾಂಡವಪುರದಿಂದ ಶ್ರೀರಂಗಪಟ್ಟಣದ ಆರಾಧನಾ ಶಾಲೆಗೆ ಹೋಗುತ್ತಿದ್ದರು. ಈ ವೇಳೆಯಲ್ಲಿ ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಮುಖಾ-ಮುಖಿ ಡಿಕ್ಕಿ ಆಗಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ:ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

ಅದರಲ್ಲೂ ರೋಹಿತ್​ಗೆ ತೀವ್ರ ಪೆಟ್ಟಾಗಿದ್ದು, ರೋಹಿತ್​ರ ವಸಡು ಒಡೆದು ಹೋಗಿದೆ. ಹಾಗೂ ಅವರ ತಲೆ ಬುರುಡೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್​ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ರೋಹಿತ್​ರ ಗೆಳೆಯ ಹಾಗೂ ಉಪನ್ಯಾಸಕರಿಗೂ ತೀವ್ರ ಪೆಟ್ಟಾಗಿದೆ.

ಮಾಸ್ಟರ್ ರೋಹಿತ್, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಹ ದೊರಕಿತು. ಕಳೆದ ವರ್ಷ ಬಿಡುಗಡೆ ಆದ ‘ಕಾಟೇರ’ ಸಿನಿಮಾದಲ್ಲಿ ರೋಹಿತ್ ನಟಿಸಿದ್ದರು. ಆ ಸಿನಿಮಾದಲ್ಲಿಯೂ ರೋಹಿತ್ ಅದ್ಭುತವಾಗಿ ನಟಿಸಿದ್ದರು. ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ದರ್ಶನ್, ರೋಹಿತ್ ಅವರ ನಟನೆಯನ್ನು ಕೊಂಡಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sun, 17 November 24

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್