AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತ ‘ಡೊಳ್ಳು’ ಚಿತ್ರದ ಮೊದಲ ಹಾಡು ರಿಲೀಸ್​ ಮಾಡಿದ ಡಾಲಿ ಧನಂಜಯ್​

Dollu Kannada Movie: ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಬಳಿಕ ‘ಡೊಳ್ಳು’ ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ಸಾಗರ್​ ಪುರಾಣಿಕ್​ ನಿರ್ದೇಶನದ ಈ ಚಿತ್ರಕ್ಕೆ, ಪವನ್​ ಒಡೆಯರ್​ ಬಂಡವಾಳ ಹೂಡಿದ್ದಾರೆ.

‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತ ‘ಡೊಳ್ಳು’ ಚಿತ್ರದ ಮೊದಲ ಹಾಡು ರಿಲೀಸ್​ ಮಾಡಿದ ಡಾಲಿ ಧನಂಜಯ್​
‘ಡೊಳ್ಳು’ ಚಿತ್ರತಂಡದ ಜೊತೆ ಡಾಲಿ ಧನಂಜಯ್
TV9 Web
| Updated By: ಮದನ್​ ಕುಮಾರ್​|

Updated on:Aug 18, 2022 | 2:49 PM

Share

‘ಗೂಗ್ಲಿ’, ‘ರಣವಿಕ್ರಮ’ ಮುಂತಾದ ಸಿನಿಮಾಗಳಿಂದ ಯಶಸ್ಸು ಕಂಡ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್  (Pawan Wadeyar) ನಿರ್ಮಾಪಕನಾಗಿಯೂ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಮೊದಲ ಬಾರಿಗೆ ಅವರ ನಿರ್ಮಾಣದಲ್ಲಿ ‘ಡೊಳ್ಳು’ ಸಿನಿಮಾ ಮೂಡಿಬಂದಿದೆ. ಹಲವು ಕಾರಣಗಳಿಂದ ಈ ಚಿತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಕಥಾವಸ್ತು ಭಿನ್ನವಾಗಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಗಳಿಸಿರುವುದು ‘ಡೊಳ್ಳು’ (Dollu Movie) ಚಿತ್ರದ ಹೆಚ್ಚುಗಾರಿಕೆ. ಮೆಚ್ಚುಗೆ ಜೊತೆಗೆ ಅನೇಕ ಪ್ರಶಸ್ತಿಗಳನ್ನು ಕೂಡ ಈ ಚಿತ್ರ ಬಾಚಿಕೊಂಡಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ‘ಅತ್ಯುತ್ತಮ ಕನ್ನಡ ಸಿನಿಮಾ’ ಪ್ರಶಸ್ತಿಗೆ ‘ಡೊಳ್ಳು’ ಪಾತ್ರವಾಗಿದೆ. ಈಗ ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಡಾಲಿ ಧನಂಜಯ್​ (Daali Dhananjay) ಅವರು ಸಾಂಗ್​ ರಿಲೀಸ್​ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಬಳಿಕ ‘ಡೊಳ್ಳು’ ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ಈ ಚಿತ್ರಕ್ಕೆ ಸಾಗರ್​ ಪುರಾಣಿಕ್​ ನಿರ್ದೇಶನ ಮಾಡಿದ್ದಾರೆ. ಕಾರ್ತಿಕ್ ಮಹೇಶ್ ಅವರು ನಾಯಕನಾಗಿ ನಟಿಸಿದ್ದು, ನಿಧಿ ಹೆಗ್ಡೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಆನಂದ್​ ಆಡಿಯೋ ಮೂಲಕ ‘ಡೊಳ್ಳು’ ಚಿತ್ರದ ಹಾಡು ‘ಮಯಾನಗರಿ..’ ಹೊರಬಂದಿದೆ. ‘ಡಾಲಿ’ ಧನಂಜಯ್ ಅವರ ಈ ಹಾಡನ್ನು ಬಿಡುಗಡೆ ಮಾಡಿದ್ದೂ ಅಲ್ಲದೇ, ತಾವು ಬೆಂಗಳೂರಿಗೆ ಬಂದ ಮೊದಲ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಕೆಲಸ ಹುಡುಕಿಕೊಂಡು ಹಳ್ಳಿಯಿಂದ ಬೆಂಗಳೂರಿಗೆ ಬರುವ ನಾಯಕನ ಕಣ್ಣಿನಲ್ಲಿ ಕಾಣುವ ‘ಮಯಾನಗರಿ..’ ಸೊಬಗನ್ನು ಈ ಹಾಡು ವಿವರಿಸುತ್ತದೆ. ಈ ಗೀತೆಗೆ ಪ್ರದ್ಯುಮ್ನ ನರಹಳ್ಳಿ ಸಾಹಿತ್ಯ ಬರೆದಿದ್ದಾರೆ. ಅನಂತ್ ಕಾಮನ್ ಸಂಗೀತ ಸಂಯೋಜನೆ ಮಾಡಿದ್ದು, ನಿರ್ದೇಶಕ ಸಾಗರ್ ಪುರಾಣಿಕ್ ಅವರೇ ಧ್ವನಿ ನೀಡಿದ್ದಾರೆ. ಈ ಗೀತೆ ಮೂಲಕ ಅವರು ಗಾಯಕರಾಗಿಯೂ ಹೊಸ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ
Image
National Award: ರಾಷ್ಟ್ರ ಪ್ರಶಸ್ತಿ ಪಡೆದ ಕರುನಾಡ ಸಿನಿಮಾಗಳು; ಹೆಮ್ಮೆ ತಂದ ಡೊಳ್ಳು, ತಲೆದಂಡ, ಜೀಟಿಗೆ, ನಾದದ ನವನೀತ
Image
68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ
Image
ಆಶಿಕಾ ರಂಗನಾಥ್​ ಮುದ್ದಾಗಿ ಕಾಣೋಕೆ ಪವನ್​ ಒಡೆಯರ್​ ಪತ್ನಿ ಅಪೇಕ್ಷಾ ಕಾರಣ; ಏನಿದು ಸಮಾಚಾರ?
Image
ನಿರ್ದೇಶಕ ಪವನ್​ ಒಡೆಯರ್ ಎರಡನೇ ಪತ್ನಿ ಯಾರು? ‘ರೇಮೋ’ ವೇದಿಕೆ ಮೇಲೆ ​ಮಸ್ತ್​ ಮಾತು

ಒಡೆಯರ್ ಮೂವೀಸ್ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ ಈ ಸಿನಿಮಾದಲ್ಲಿ ಜನಪದ ಕಲೆಯಾದ ಡೊಳ್ಳಿನ ಕುರಿತಾದ ಕಥೆ ಇದೆ. ನಿರ್ದೇಶಕ ಸಾಗರ್​ ಪುರಾಣಿಕ್​ ಕಟ್ಟಿಕೊಟ್ಟಿರುವ ಈ ಸಿನಿಮಾದಲ್ಲಿ ಕಾರ್ತಿಕ್​ ಮಹೇಶ್​ ಮತ್ತು ನಿಧಿ ಹೆಗ್ಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾವಿದರು ನಟಿಸಿದ್ದಾರೆ. ಶ್ರೀನಿಧಿ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಅಭಿಲಾಷ್ ಕಲಾಥಿ ಛಾಯಾಗ್ರಹಣ ಮಾಡಿದ್ದಾರೆ.

ಪ್ರಶಸ್ತಿ ಪಡೆಯುವ ಸಿನಿಮಾಗಳು ಚಿತ್ರೋತ್ಸವಕ್ಕಷ್ಟೇ ಸೀಮಿತ ಎಂಬ ಮಾತಿದೆ. ಆದರೆ ‘ಡೊಳ್ಳು’ ಚಿತ್ರ ಹಾಗಲ್ಲ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಆಗಸ್ಟ್​ 26ರಂದು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Thu, 18 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ