AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

Avane Srimannarayana: ಕೊರೊನಾ ವೈರಸ್​ ಹಿನ್ನೆಲೆಯಲ್ಲಿ 2019ರಲ್ಲಿ ಪ್ರಶಸ್ತಿ ಘೋಷಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಈಗ ಈ ಘೋಷಣೆಯನ್ನು ಮಾಡಲಾಗಿದೆ. 

National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ
ಅವನೇ ಶ್ರೀಮನ್ನಾರಾಯಣ
ರಾಜೇಶ್ ದುಗ್ಗುಮನೆ
|

Updated on:Mar 22, 2021 | 5:26 PM

Share

ರಕ್ಷಿತ್​ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಸಾಹಸ ನಿರ್ದೇಶನಕ್ಕೆ 2019ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿದೆ. ಚಿತ್ರಕ್ಕೆ ವಿಕ್ರಮಂ ಮೋರ್​ ಅವರು ಸಾಹಸ ನಿರ್ದೇಶನ ಮಾಡಿದ್ದರು. ಇನ್ನು ಬೆಸ್ಟ್​ ಬುಕ್​ ಆನ್​ ಸಿನಿಮಾ ವಿಭಾಗದಲ್ಲಿ ಎರಡನೇ ವಿಜೇತರಾಗಿ ಪಿ.ಆರ್ ರಾಮದಾಸ ನಾಯ್ಡು ಆಯ್ಕೆ ಆಗಿದ್ದಾರೆ. ಅವರು ‘ಜಾಗತಿಕಾ ಸಿನಿಮಾ’ ಹೆಸರಿನ ಪುಸ್ತಕ ಬರೆದಿದ್ದರು. ಕೊರೊನಾ ವೈರಸ್​ ಹಿನ್ನೆಲೆಯಲ್ಲಿ 2019ರಲ್ಲಿ ಪ್ರಶಸ್ತಿ ಘೋಷಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಈಗ ಈ ಘೋಷಣೆಯನ್ನು ಮಾಡಲಾಗಿದೆ. ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ‘ಅಕ್ಷಿ’ಗೆ ಲಭ್ಯವಾಗಿದೆ. 

ಅತ್ಯುತ್ತಮ ಸಿನಿಮಾ: ಮರಕ್ಕರ್: ಲೈನ್​ ಆಫ್​ ದಿ ಅರೇಬಿಯನ್​ ಸೀ

ಅತ್ಯುತ್ತಮ ನಟಿ:  ಕಂಗನಾ ರಣಾವತ್​ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಧನುಷ್​ (ಅಸುರನ್​) ಮನೋಜ್​ ಬಾಜಪಯ್​ (ಭೋನ್ಸ್​ಲೆ)

ಅತ್ಯುತ್ತಮ ನಿರ್ದೇಶನ: ಬಹತಾರ್​ ಹುರೈನ್​

ಅತ್ಯುತ್ತಮ ಪೋಷಕ ನಟ: ವಿಜಯ್​​ ಸೇತುಪತಿ (ಸೂಪರ್​ ಡಿಲಕ್ಸ್​)

ಅತ್ಯುತ್ತಮ ಪೋಷಕ ನಟಿ: ಪಲ್ಲವಿ ಜೋಶಿ (ದಿ ತಾಷ್ಕೆಂಟ್​ ಫೈಲ್ಸ್​)

ಅತ್ಯುತ್ತಮ ನೃತ್ಯ ನಿರ್ದೇಶನ: ಮಹರ್ಷಿ (ತೆಲುಗು)

ಅತ್ಯುತ್ತಮ ಜನಪ್ರಿಯ ಮನರಂಜನೆ ಸಿನಿಮಾ: ಮಹರ್ಷಿ (ತೆಲುಗು)

ಅತ್ಯುತ್ತಮ ಗೀತ ಸಾಹಿತ್ಯ: ಪ್ರಭಾವರ್ಮಾ-ಕೊಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶಕ: ಡಿ. ಇಮ್ಮಾನ್​-ವಿಶ್ವಾಸಮ್​ (ತಮಿಳ್​ )

ಅತ್ಯುತ್ತಮ ಸಂಕಲನ: ಜೆರ್ಸಿ (ತೆಲುಗು)

ಅತ್ಯುತ್ತಮ ಮೇಕಪ್​ ಆರ್ಟಿಸ್ಟ್​​: ರಂಜಿತ್​-ಹೆಲನ್​ (ಮಲಯಾಳಂ)

ಚೊಚ್ಚಲ ಅತ್ಯುತ್ತಮ ನಿರ್ದೇಶನ:ಮತ್ತುಕುಟ್ಟಿ ಹೆಲನ್​ (ಮಲಯಾಳಂ)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ಸಾಮಾಜಿಕ ಸಮಸ್ಯೆಗಳ ಕುರಿತ ಅತ್ಯುತ್ತಮ ಚಿತ್ರ: ಆನಂದಿ ಗೋಪಾಲ್​ (ಮರಾಠಿ)

ಅವನೇ ಶ್ರೀಮನ್ನಾರಾಯಣ ಸಿನಿಮಾ 2019ರಲ್ಲಿ ತೆರೆಗೆ ಬಂದಿತ್ತು. ರಕ್ಷಿತ್​ ಶೆಟ್ಟಿ ಹೀರೋ ಆಗಿ ಕಾಣಿಸಿಕೊಂಡಿದ್ದ ಈ ಚಿತ್ರದಲ್ಲಿ ನಾಯಕಿಯಾಗಿ ಶಾನ್ವಿ ಶ್ರೀವಾತ್ಸವ ಕಾಣಿಸಿಕೊಂಡಿದ್ದರು. ಸಚಿನ್​ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಚಿತ್ರ, ಬಾಕ್ಸ್​ ಆಫೀಸ್​ನಲ್ಲೂ ಉತ್ತರಮ ಗಳಿಕೆ ಮಾಡಿತ್ತು. ಸಂಪೂರ್ಣ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿತ್ತು. ಅದಕ್ಕೆ ತಕ್ಕಂತೆ ಆ್ಯಕ್ಷನ್​​ ದೃಶ್ಯಗಳನ್ನು ವಿಕ್ರಮಂ ಮೋರ್​ ಸಂಯೋಜಿಸಿದ್ದರು.

ಇದನ್ನೂ ಓದಿ: Grammys 2021: 28ನೇ ಬಾರಿ ಪ್ರಶಸ್ತಿಗೆ ಪಾತ್ರರಾಗಿ ದಾಖಲೆ ನಿರ್ಮಿಸಿದ ಅಮೆರಿಕದ ಗಾಯಕಿ ಬಿಯಾನ್ಸ್

 

Published On - 4:57 pm, Mon, 22 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ