‘ಬಿಗ್ ಬಾಸ್​’ ಮನೆಯಲ್ಲೂ ಸದ್ದು ಮಾಡಿದ ‘ನವಗ್ರಹ’ ರೀ-ರಿಲೀಸ್ ವಿಚಾರ

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಈ ಬಾರಿ ಹೊರಗಿನ ಸುದ್ದಿಗಳು ಸ್ಪರ್ಧಿಗಳಿಗೆ ತಲುಪುತ್ತಿವೆ. 'ನವಗ್ರಹ' ಸಿನಿಮಾ ನವೆಂಬರ್ 8 ರಂದು ಮರು ಬಿಡುಗಡೆಯಾಗುತ್ತಿದೆ ಎಂಬ ಸುದ್ದಿ ಸ್ಪರ್ಧಿ ಧರ್ಮ ಕೀರ್ತಿರಾಜ್ ಅವರಿಗೆ ತಿಳಿದಿದೆ. ಈ ವಿಚಾರ ಕೇಳಿ ಅವರು ಸಂತೋಷಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ನಟಿಸಿದ್ದರು. ಸೃಜನ್ ಲೋಕೇಶ್ ಅವರು ಬಿಗ್ ಬಾಸ್ ಮನೆಗೆ ಭೇಟಿ ನೀಡಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

‘ಬಿಗ್ ಬಾಸ್​’ ಮನೆಯಲ್ಲೂ ಸದ್ದು ಮಾಡಿದ ‘ನವಗ್ರಹ’ ರೀ-ರಿಲೀಸ್ ವಿಚಾರ
ನವಗ್ರಹ-ಸುದೀಪ್
Follow us
|

Updated on: Oct 28, 2024 | 1:06 PM

ಬಿಗ್ ಬಾಸ್ ಮನೆಯಲ್ಲಿ ಈ ಮೊದಲು ಹೊರಗಿನ ವಿಚಾರಗಳ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿರಲಿಲ್ಲ. ಆದರೆ, ಈ ಬಾರಿಯ ಸೀಸನ್​​ನಲ್ಲಿ ಹಾಗಿಲ್ಲ. ಹೊರಗಿನ ವಿಚಾರಗಳ ಮಾಹಿತಿ ಬಿಗ್ ಬಾಸ್ ಕಡೆಯಿಂದಲೇ ಸಿಗುತ್ತಿದೆ. ಸುದೀಪ್ ತಾಯಿ ನಿಧನ ವಾರ್ತೆ, ಸ್ಪರ್ಧಿಗಳ ಬಗ್ಗೆ ಹೊರಗಿನ ಜನಗಿರುವ ಅಭಿಪ್ರಾಯ ಎಲ್ಲವೂ ಗೊತ್ತಾಗುತ್ತಿದೆ. ಅದೇ ರೀತಿ ‘ನವಗ್ರಹ’ ಸಿನಿಮಾದ ರೀ-ರಿಲೀಸ್ ವಿಚಾರವೂ ಸದ್ದು ಮಾಡುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್​, ಸೃಜನ್ ಲೋಕೇಶ್ ಮೊದಲಾದವರು ನಟಿಸಿರೋ ‘ನವಗ್ರಹ’ ಸಿನಿಮಾ 2008ರ ನವೆಂಬರ್ 7ರಂದು ರಿಲೀಸ್ ಆಯಿತು. ದಿನಕರ್ ತುಗುದೀಪ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಈಗ ನವೆಂಬರ್ 8ರಂದು ರೀ-ರಿಲೀಸ್ ಆಗುತ್ತಿದೆ. ಮೈಸೂರಿನ ಅಂಬಾರಿ ಕದಿಯೋ ಕಥೆಯನ್ನು ಈ ಚಿತ್ರ ಹೊಂದಿದೆ. ಗೆಂಡೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸೃಜನ್ ಲೋಕೇಶ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿ ಧರ್ಮ ಕೀರ್ತಿರಾಜ್ ಇದ್ದಾರೆ. ಅವರು ‘ನವಗ್ರಹ’ ಚಿತ್ರದಲ್ಲಿ ವಿಕ್ಕಿ ಹೆಸರಿನ ಪಾತ್ರ ಮಾಡಿದ್ದರು. ಸೃಜನ್ ಅವರು ದೊಡ್ಮನೆ ಒಳಗೆ ಬಂದಿದ್ದನ್ನು ನೋಡಿ ಧರ್ಮಗೆ ಖುಷಿ ಆಗಿದೆ. ಸೃಜನ್ ಅವರು ಬಿಗ್ ಬಾಸ್​ಗೆ ಅತಿಥಿಯಾಗಿ ಬರುತ್ತಿದ್ದಂತೆ ಯಾರ ಯಾರ ಪರಿಚಯ ಇದೆ ಎಂಬುದನ್ನು ಹೇಳಿದರು. ಅದೇ ರೀತಿ ಧರ್ಮ ಬಳಿ ವಿಶೇಷ ಸುದ್ದಿ ಇರೋದಾಗಿ ಹೇಳಿದರು.

ಇದನ್ನೂ ಓದಿ: ನವೆಂಬರ್​ 8ಕ್ಕೆ ನವಗ್ರಹ ಸಿನಿಮಾ ಮರು ಬಿಡುಗಡೆ; ದರ್ಶನ್ ಅಭಿಮಾನಿಗಳಿಗೆ ಹಬ್ಬ

‘ಧರ್ಮ ಒಂದು ಗುಡ್​ ನ್ಯೂಸ್ ಇದೆ. ನವಗ್ರಹ ಸಿನಿಮಾ ಮತ್ತೆ ರಿಲೀಸ್ ಆಗುತ್ತಿದೆ’ ಎಂದು ಸೃಜನ್ ಹೇಳಿದರು. ಇದನ್ನು ಕೇಳಿ ‘ಯಾವಾಗ’ ಎಂದು ಪ್ರಶ್ನೆ ಮಾಡಿದರು ಧರ್ಮ. ‘ನವೆಂಬರ್ 8’ ಎಂದು ಸೃಜನ್ ಉತ್ತರ ಕೊಟ್ಟರು. ಇದನ್ನು ಕೇಳಿ ಧರ್ಮ ಅವರು ಸಖತ್ ಖುಷಿಪಟ್ಟರು. ಈ ಮೂಲಕ ದೊಡ್ಮನೆ ಒಳಗೂ ಬಿಗ್ ಬಾಸ್ ವಿಚಾರ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.