AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ವರಾಹ ರೂಪಂ’ ಹಾಡು ಕಾಪಿ ಎಂಬ ಆರೋಪ: ಕೇಸ್​ ಹಾಕಲು ನಿರ್ಧರಿಸಿದ ‘ನವರಸಂ’ ತಂಡ

Varaha Roopam Song copy: ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಈಗ ಕೃತಿಚೌರ್ಯದ ಆರೋಪದಲ್ಲಿ ‘ಕಾಂತಾರ’ ತಂಡಕ್ಕೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Kantara: ‘ವರಾಹ ರೂಪಂ’ ಹಾಡು ಕಾಪಿ ಎಂಬ ಆರೋಪ: ಕೇಸ್​ ಹಾಕಲು ನಿರ್ಧರಿಸಿದ ‘ನವರಸಂ’ ತಂಡ
ವರಾಹ ರೂಪಂ-ನವರಸಂ
TV9 Web
| Edited By: |

Updated on:Oct 25, 2022 | 7:49 AM

Share

ರಿಷಬ್​ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ (Kantara Movie) ಸಿನಿಮಾ ಮಾಡಿರುವ ಮೋಡಿ ಕಂಡು ಎಲ್ಲರಿಗೂ ಅಚ್ಚರಿ ಆಗುತ್ತಿದೆ. ಅಷ್ಟರಮಟ್ಟಿಗೆ ಈ ಚಿತ್ರ ಸೂಪರ್​ ಹಿಟ್​ ಆಗಿದೆ. ಈ ಚಿತ್ರದ ಹಾಡುಗಳು ಕೂಡ ಜನಮನ ಗೆದ್ದಿವೆ. ಅದರಲ್ಲೂ ‘ವರಾಹ ರೂಪಂ..’ ಗೀತೆಯನ್ನು ಕೇಳಿ ಜನರು ತಲೆದೂಗಿದ್ದಾರೆ. ಆದರೆ ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿದೆ. ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ (Ajaneesh Loknath) ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಕೇಸ್​ ಹಾಕಲು ನಿರ್ಧರಿಸಿದ್ದಾರೆ. ಇದಕ್ಕೆ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್​, ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಹಾಗೂ ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಸೃಷ್ಟಿ ಆಗಿದೆ.

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್​ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಈಗ ಕೇಸ್​ ಹಾಕಲು ನಿರ್ಧರಿಸಿದ್ದಾರೆ.

‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್​’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್​ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಸೋಶಿಯಲ್​ ಮೀಡಿಯಾದಲ್ಲಿ ತಿಳಿಸಿದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ಹಾಡಿನ ಹಕ್ಕುಗಳನ್ನು ಕುರಿತಂತೆ ಕಾಂತಾರ ತಂಡದವರು ನಮಗೆ ಯಾವುದೇ ಕ್ರಿಡಿಟ್​ ನೀಡಿಲ್ಲ ಹಾಗೂ ಈ ಹಾಡನ್ನು ತಮ್ಮ ಸ್ವಂತ ಸೃಷ್ಟಿ ಎಂಬಂತೆ ಪ್ರಚಾರ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ನಮಗೆ ಬೆಂಬಲ ನೀಡಬೇಕು ಎಂದು ನಮ್ಮ ಕೇಳುಗರಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ. ಮ್ಯೂಸಿಕ್​ ಕಾಪಿ ರೈಟ್​ ಉಳಿಸುವ ಬಗ್ಗೆ ಎಲ್ಲ ಸಂಗೀತ ಕಲಾವಿದರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಪೋಸ್ಟ್​ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:49 am, Tue, 25 October 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್