AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಭಿನ್ನ ಸಿನಿಮಾ ಮೂಲಕ ಬಂದ ನವೀನ್ ಶಂಕರ್, ಟೀಸರ್ ಬಿಡುಗಡೆ

Naveen Shankar: ನವೀನ್ ಶಂಕರ್ ಭಿನ್ನ ಸಿನಿಮಾಗಳನ್ನು, ಕತೆಗಳನ್ನು ಆಯ್ದುಕೊಂಡು ಪರಿಪೂರ್ಣ ನಟನಾಗಿ ಬೆಳೆಯುವ ಹಾದಿಯಲ್ಲಿದ್ದಾರೆ. ‘ಗುಲ್ಟು’, ‘ಧರಣಿ ಮಂಡಲ ಮಧ್ಯದೊಳಗೆ’ ಸೇರಿದಂತೆ ಹಲವು ಭಿನ್ನ ರೀತಿಯ ಸಿನಿಮಾಗಳಲ್ಲಿ ನಟಿಸಿರುವ ನವೀನ್ ‘ನೋಡಿದವರು ಏನಂತಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.

ಮತ್ತೊಂದು ಭಿನ್ನ ಸಿನಿಮಾ ಮೂಲಕ ಬಂದ ನವೀನ್ ಶಂಕರ್, ಟೀಸರ್ ಬಿಡುಗಡೆ
Naveen Shankar
ಮಂಜುನಾಥ ಸಿ.
|

Updated on: Dec 21, 2024 | 9:44 AM

Share

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ನವೀನ್ ಶಂಕರ್. ಅವರು ಭಿನ್ನ ಸಿನಿಮಾಗಳನ್ನು, ಕತೆಗಳನ್ನು ಆಯ್ದುಕೊಂಡು ಪರಿಪೂರ್ಣ ನಟನಾಗಿ ಬೆಳೆಯುವ ಹಾದಿಯಲ್ಲಿದ್ದಾರೆ. ‘ಗುಲ್ಟು’, ‘ಧರಣಿ ಮಂಡಲ ಮಧ್ಯದೊಳಗೆ’ ಆ ಬಳಿಕ ‘ಹೊಯ್ಸಳ’ ಸಿನಿಮಾದಲ್ಲಿ ವಿಲನ್ ಹೀಗೆ ಭಿನ್ನ ರೀತಿಯ ಸಿನಿಮಾ ಹಾಗೂ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಲೇ ಬಂದಿರುವ ನವೀನ್ ಶಂಕರ್ ಇದೀಗ ‘ನೋಡಿದವರು ಏನಂತಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೀನ್ ಈ ವರೆಗೆ ಮಾಡಿರುವ ಸಿನಿಮಾಗಳಿಗಿಂತಲೂ ಭಿನ್ನವಾಗಿ ಇರಲಿದೆ ಈ ಸಿನಿಮಾ.

‘ನೋಡಿದವರು ಏನಂತಾರೆ’ ಸಿನಿಮಾದ ಟೀಸರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಟೀಸರ್ ಗಮನ ಸೆಳೆಯುತ್ತಿದೆ. ಪ್ರೀತಿ, ನಗು, ಅಳು, ಭಾವನಾತ್ಮಕ ಅಂಶಗಳ ಮಿಶ್ರಣವೇ ಟೀಸರ್​ನಲ್ಲಿದೆ. ‘ನೋಡಿದವರು ಏನಂತಾರೆ’ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರವನ್ನು ನಾಗೇಶ್ ಗೋಪಾಲ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಅಪೂರ್ವ ಭಾರದ್ವಾಜ್ ನಾಯಕಿಯಾಗಿ ನಟಿಸಿದ್ದಾರೆ. ‘ಹೊಯ್ಸಳ’, ‘ಕ್ಷೇತ್ರಪತಿ’ ಮತ್ತು ‘ಸಲಾರ್’ ಸಿನಿಮಾಗಳಲ್ಲಿ ರಗಡ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್, ಈ ಚಿತ್ರದಲ್ಲಿ ಕೊಂಚ ವಿಭಿನ್ನವಾಗಿ ಕಾಣಿಸಲಿದ್ದಾರೆ.

ಇದನ್ನೂ ಓದಿ:‘ಸಂಕ್ರಾಂತಿ ರೇಸ್​’ಗೆ ಕನ್ನಡ ಸಿನಿಮಾ ಎಂಟ್ರಿ

ಮಯೂರೆಶ್ ಅಧಿಕಾರಿ ಅವರು ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ, ಮನು ಶೆಡಗಾರ್ ಸಿನಿಮಾದ ಎಡಿಟ್ ಮಾಡಿದ್ದಾರೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ಖ್ಯಾತ ಲೇಖಕ ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಒಂದು ಹಾಡಿಗೆ ಲೈಲಾ ಸಾಹಿತ್ಯ ಬರೆದಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಅವರುಗಳು ಸಿನಿಮಾದ ಹಾಡುಗಳನ್ನು ಹಾಡಿದ್ದಾರೆ. ಜನವರಿ 31, 2025 ರಂದು ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ. ಪ್ರೇಕ್ಷಕರಿಗೆ ಈ ಸಿನಿಮಾ ಯಾವ ರೀತಿಯ ಅನುಭವ ನೀಡಲಿದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು