AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಭಿನ್ನ ಸಿನಿಮಾ ಮೂಲಕ ಬಂದ ನವೀನ್ ಶಂಕರ್, ಟೀಸರ್ ಬಿಡುಗಡೆ

Naveen Shankar: ನವೀನ್ ಶಂಕರ್ ಭಿನ್ನ ಸಿನಿಮಾಗಳನ್ನು, ಕತೆಗಳನ್ನು ಆಯ್ದುಕೊಂಡು ಪರಿಪೂರ್ಣ ನಟನಾಗಿ ಬೆಳೆಯುವ ಹಾದಿಯಲ್ಲಿದ್ದಾರೆ. ‘ಗುಲ್ಟು’, ‘ಧರಣಿ ಮಂಡಲ ಮಧ್ಯದೊಳಗೆ’ ಸೇರಿದಂತೆ ಹಲವು ಭಿನ್ನ ರೀತಿಯ ಸಿನಿಮಾಗಳಲ್ಲಿ ನಟಿಸಿರುವ ನವೀನ್ ‘ನೋಡಿದವರು ಏನಂತಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.

ಮತ್ತೊಂದು ಭಿನ್ನ ಸಿನಿಮಾ ಮೂಲಕ ಬಂದ ನವೀನ್ ಶಂಕರ್, ಟೀಸರ್ ಬಿಡುಗಡೆ
Naveen Shankar
ಮಂಜುನಾಥ ಸಿ.
|

Updated on: Dec 21, 2024 | 9:44 AM

Share

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ನವೀನ್ ಶಂಕರ್. ಅವರು ಭಿನ್ನ ಸಿನಿಮಾಗಳನ್ನು, ಕತೆಗಳನ್ನು ಆಯ್ದುಕೊಂಡು ಪರಿಪೂರ್ಣ ನಟನಾಗಿ ಬೆಳೆಯುವ ಹಾದಿಯಲ್ಲಿದ್ದಾರೆ. ‘ಗುಲ್ಟು’, ‘ಧರಣಿ ಮಂಡಲ ಮಧ್ಯದೊಳಗೆ’ ಆ ಬಳಿಕ ‘ಹೊಯ್ಸಳ’ ಸಿನಿಮಾದಲ್ಲಿ ವಿಲನ್ ಹೀಗೆ ಭಿನ್ನ ರೀತಿಯ ಸಿನಿಮಾ ಹಾಗೂ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಲೇ ಬಂದಿರುವ ನವೀನ್ ಶಂಕರ್ ಇದೀಗ ‘ನೋಡಿದವರು ಏನಂತಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೀನ್ ಈ ವರೆಗೆ ಮಾಡಿರುವ ಸಿನಿಮಾಗಳಿಗಿಂತಲೂ ಭಿನ್ನವಾಗಿ ಇರಲಿದೆ ಈ ಸಿನಿಮಾ.

‘ನೋಡಿದವರು ಏನಂತಾರೆ’ ಸಿನಿಮಾದ ಟೀಸರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಟೀಸರ್ ಗಮನ ಸೆಳೆಯುತ್ತಿದೆ. ಪ್ರೀತಿ, ನಗು, ಅಳು, ಭಾವನಾತ್ಮಕ ಅಂಶಗಳ ಮಿಶ್ರಣವೇ ಟೀಸರ್​ನಲ್ಲಿದೆ. ‘ನೋಡಿದವರು ಏನಂತಾರೆ’ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರವನ್ನು ನಾಗೇಶ್ ಗೋಪಾಲ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಅಪೂರ್ವ ಭಾರದ್ವಾಜ್ ನಾಯಕಿಯಾಗಿ ನಟಿಸಿದ್ದಾರೆ. ‘ಹೊಯ್ಸಳ’, ‘ಕ್ಷೇತ್ರಪತಿ’ ಮತ್ತು ‘ಸಲಾರ್’ ಸಿನಿಮಾಗಳಲ್ಲಿ ರಗಡ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್, ಈ ಚಿತ್ರದಲ್ಲಿ ಕೊಂಚ ವಿಭಿನ್ನವಾಗಿ ಕಾಣಿಸಲಿದ್ದಾರೆ.

ಇದನ್ನೂ ಓದಿ:‘ಸಂಕ್ರಾಂತಿ ರೇಸ್​’ಗೆ ಕನ್ನಡ ಸಿನಿಮಾ ಎಂಟ್ರಿ

ಮಯೂರೆಶ್ ಅಧಿಕಾರಿ ಅವರು ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ, ಮನು ಶೆಡಗಾರ್ ಸಿನಿಮಾದ ಎಡಿಟ್ ಮಾಡಿದ್ದಾರೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ಖ್ಯಾತ ಲೇಖಕ ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಒಂದು ಹಾಡಿಗೆ ಲೈಲಾ ಸಾಹಿತ್ಯ ಬರೆದಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಅವರುಗಳು ಸಿನಿಮಾದ ಹಾಡುಗಳನ್ನು ಹಾಡಿದ್ದಾರೆ. ಜನವರಿ 31, 2025 ರಂದು ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ. ಪ್ರೇಕ್ಷಕರಿಗೆ ಈ ಸಿನಿಮಾ ಯಾವ ರೀತಿಯ ಅನುಭವ ನೀಡಲಿದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು