AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ