AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ninasam Sathish: ನಟ ನೀನಾಸಂ ಸತೀಶ್​ ಅವರಿಗೆ ಮಾತೃ ವಿಯೋಗ

ಸ್ಯಾಂಡಲ್​ವುಡ್ ನಟ ನೀನಾಸಂ ಸತೀಶ್​ಗೆ ಮಾತೃ ವಿಯೋಗವಾಗಿದೆ. ಅವರ ತಾಯಿ ಚಿಕ್ಕ ತಾಯಮ್ಮ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

Ninasam Sathish: ನಟ ನೀನಾಸಂ ಸತೀಶ್​ ಅವರಿಗೆ ಮಾತೃ ವಿಯೋಗ
ತಮ್ಮ ತಾಯಿಯವರೊಂದಿಗೆ ನೀನಾಸಂ ಸತೀಶ್ (ಸಂಗ್ರಹ ಚಿತ್ರ)
TV9 Web
| Updated By: shivaprasad.hs|

Updated on:Oct 01, 2021 | 2:36 PM

Share

ಸ್ಯಾಂಡಲ್​ವುಡ್ ನಟ ನೀನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರ್​.ಆರ್​.ನಗರದಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ಅವರು ನಿಧನ ಹೊಂದಿದ್ದಾರೆ.

‘ನಾನು ಇಂದು ಏನಾಗಿದ್ದೇನೋ ಅದಕ್ಕೆ ತಾಯಿಯೇ ಕಾರಣ’ ಎಂದು ಅಮ್ಮನ ಕುರಿತು ಪ್ರೀತಿಯಿಂದ ನುಡಿದಿದ್ದ ಸತೀಶ್: ಇತ್ತೀಚೆಗೆ ಟಿವಿ9ನೊಂದಿಗೆ ಮಾತನಾಡುತ್ತಾ ಸತೀಶ್ ತಮ್ಮ ತಾಯಿಯ ಕುರಿತು ಮಾತನಾಡಿದ್ದರು. ಆಗ ‘‘ಅಮ್ಮ ಅಂದರೆ ನನಗೆ ಶಕ್ತಿ ಇದ್ದಂತೆ. ನನಗೆ ಆತ್ಮ ವಿಶ್ವಾಸ ನೀಡಿದ್ದೇ ಅವರು. ನನಗೆ ಮೂರು ವರ್ಷವಿದ್ದಾಗ ತಂದೆ ತೀರಿಕೊಂಡಿದ್ದರು. ಆಗಿನಿಂದ ಅಮ್ಮನೇ ನನಗೆ ಎಲ್ಲಾ. ಬಡತನದಲ್ಲಿಯೂ ಅವರು ನನ್ನನ್ನು ಬೆಳೆಸಿದ್ದರು. ನಾವು ಎಂಟು ಜನ ಮಕ್ಕಳು. ಎಲ್ಲರನ್ನೂ  ಸಾಕಿ, ಬದುಕಿನ ಬಗ್ಗೆ ಪ್ರೀತಿ, ಶಿಸ್ತನ್ನು ಕಲಿಸಿದವರು ನಮ್ಮ ತಾಯಿ. ನಾನು ಇಂದು ಏನಾಗಿದ್ದೇನೋ ಅದಕ್ಕೆ ನನ್ನ ತಾಯಿಯೇ ಕಾರಣ. ಅಮ್ಮ ಎಂದರೆ ನನಗೆ ತಂದೆ-  ತಾಯಿ ಎಲ್ಲಾ’’ ಎಂದು ನುಡಿದಿದ್ದರು.

Neenasam Sathish with his mother

ನೀನಾಸಂ ಸತೀಶ್ ಬದುಕಿಗೆ ಸ್ಫೂರ್ತಿ ತುಂಬಿ, ಇಂದು ಚಿತ್ರರಂಗದಲ್ಲಿ ತಮ್ಮ ವಿಶೇಷ ಪ್ರತಿಭೆಯಿಂದ ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದ ಅವರ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಮದ್ದೂರಿನ ಯಲದಹಳ್ಳಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಟೆಕ್ಕಿ ಸಾವಿಗೆ 2.82 ಕೋಟಿ ಪರಿಹಾರ ನೀಡದೆ ಸತಾಯಿಸಿದ ಸಾರಿಗೆ ಇಲಾಖೆ: ಬಸ್ ಜಪ್ತಿ ಮಾಡಿದ ಕೋರ್ಟ್​​ ಸಿಬ್ಬಂದಿ!

Published On - 12:55 pm, Fri, 1 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!