AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

ಗಣೇಶ್​ ನಟನೆಯ ‘ಮುಂಗಾರು ಮಳೆ 2’ ಚಿತ್ರದ ಮೂಲಕ ನೇಹಾ ಶೆಟ್ಟಿ ಕನ್ನಡದಲ್ಲಿ ಹೆಸರು ಮಾಡಿದರು. ಅವರು ತೆಲುಗು ಇಂಡಸ್ಟ್ರಿಯಲ್ಲೂ ಕೆಲಸ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ
ನೇಹಾ-ಅಲ್ಲು ಅರ್ಜುನ್
TV9 Web
| Edited By: |

Updated on: Mar 06, 2022 | 6:16 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರ ಜತೆ ತೆರೆ ಹಂಚಿಕೊಳ್ಳುವ ಅವಕಾಶಕ್ಕಾಗಿ ಸಾಕಷ್ಟು ಜನರು ಕಾಯುತ್ತಿರುತ್ತಾರೆ. ಅವರ ಜತೆ ನಟಿಸಿದರೆ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ಸಿಗುತ್ತದೆ. ಮಂಗಳೂರು ಮೂಲದ ಪೂಜಾ ಹೆಗ್ಡೆ (Pooja Hegde), ಕೊಡಗಿನ ರಶ್ಮಿಕಾ ಮಂದಣ್ಣ ಈಗಾಗಲೇ ಅಲ್ಲು ಅರ್ಜುನ್​ ಜತೆ ತೆರೆಹಂಚಿಕೊಂಡಿದ್ದಾರೆ. ಇಬ್ಬರಿಗೂ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈಗ ಮಂಗಳೂರಿನ ನೇಹಾ ಶೆಟ್ಟಿ (Neha Shetty)ಕೂಡ ಅಲ್ಲು ಜತೆ ತೆರೆ ಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ. ಹಾಗಾದರೆ ಯಾವುದು ಆ ಸಿನಿಮಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗಣೇಶ್​ ನಟನೆಯ ‘ಮುಂಗಾರು ಮಳೆ 2’ ಚಿತ್ರದ ಮೂಲಕ ನೇಹಾ ಶೆಟ್ಟಿ ಕನ್ನಡದಲ್ಲಿ ಹೆಸರು ಮಾಡಿದರು. ಅವರು ತೆಲುಗು ಇಂಡಸ್ಟ್ರಿಯಲ್ಲೂ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಖತ್​ ಚ್ಯೂಸಿ ಆಗಿದ್ದಾರೆ. ಅವರು ಈಗ ಬನ್ನಿ ಜತೆ ತೆರೆ ಹಂಚಿಕೊಂಡಿದ್ದಾರೆ. ಹಾಗಂತ ಇದು ಸಿನಿಮಾದಲ್ಲಿ ಅಲ್ಲ, ಬದಲಿಗೆ ಜೊಮ್ಯಾಟೋ ಜಾಹೀರಾತಿನಲ್ಲಿ.

ಅಲ್ಲು ಅರ್ಜುನ್​ ಅವರ ಜತೆಗೆ ಫುಡ್​ ಡೆಲಿವರಿ ಸಂಸ್ಥೆ ಜೊಮ್ಯಾಟೋ ಕೈ ಜೋಡಿಸಿದೆ. ಇದರ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ನೇಹಾ  ಶೆಟ್ಟಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ನೇಹಾ ಶೆಟ್ಟಿ ಅವರು ಗುಲಾಬಿ ಹೂವನ್ನು ಹಿಡಿದು ನಿಂತಿರುತ್ತಾರೆ. ಈ ಸಂದರ್ಭದಲ್ಲಿ ಅವರ ಬಳಿ ನಾಲ್ಕೈದು ಮಂದಿ ಬರುತ್ತಾರೆ. ಈ ವೇಳೆ ಬೈಕ್​ನಲ್ಲಿ ಬರುವ ಅಲ್ಲು ಅರ್ಜುನ್​ ಎಲ್ಲರಿಗೂ ಹೊಡೆಯುತ್ತಾರೆ.

ವಿವಾದ ಸೃಷ್ಟಿಸಿದ್ದ ಜೊಮ್ಯಾಟೋ ಜಾಹೀರಾತು..

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ. ‘ಪುಷ್ಪ’ ಸಿನಿಮಾದ ಥೀಮ್​ ಇಟ್ಟುಕೊಂಡು ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಸೂಪರ್ ಹಿಟ್​ ‘ಪುಷ್ಪ’ ಸಿನಿಮಾದಲ್ಲಿ ಫೈಟಿಂಗ್​ ವೇಳೆ ಕೆಲ ಸ್ಲೋ ಮೋಷನ್​ ದೃಶ್ಯಗಳು ಬಂದಿದ್ದವು. ಇದು ಕೇವಲ ‘ಪುಷ್ಪ’ ಸಿನಿಮಾಗೆ ಮಾತ್ರ ಸೀಮಿತವಾಗಿಲ್ಲ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನ ಸಾಕಷ್ಟು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ಮಾದರಿಯ ತಂತ್ರ ಬಳಕೆ ಮಾಡಿಕೊಳ್ಳಾಗಿದೆ. ಈಗ ಬಂದಿರುವ ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ವ್ಯಂಗ್ಯವಾಡಲಾಗಿತ್ತು.

ಜೊಮ್ಯಾಟೋ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ತೆಲುಗು ನಟ ಸುಬ್ಬರಾಜು ನಡುವೆ ಫೈಟ್​ ನಡೆಯುತ್ತಿರುತ್ತದೆ. ಈ ಫೈಟ್​ನಲ್ಲಿ ಸುಬ್ಬರಾಜುಗೆ ಅಲ್ಲು ಅರ್ಜುನ್​ ಹೊಡೆಯುತ್ತಾರೆ. ಆಗ ಸುಬ್ಬರಾಜು ಅವರು ಸ್ಲೋಮೋಷನ್​ನಲ್ಲಿ ಕೆಳಗೆ ಬಿದ್ದಂತೆ ತೋರಿಸಲಾಗಿತ್ತು. ‘ಬನ್ನಿ ನನ್ನನ್ನು ಬೇಗ ಬೀಳಿಸು. ನನಗೆ ಮಟನ್​ ಕರ್ರಿ ತಿನ್ನಬೇಕು. ನಾನು ಬೀಳುವ ವೇಳೆಗೆ ರೆಸ್ಟೋರೆಂಟ್​ ಕ್ಲೋಸ್​ ಮಾಡುತ್ತಾರೆ’ ಎಂದಿದ್ದರು ಸುಬ್ಬರಾಜು. ಇದಕ್ಕೆ ಉತ್ತರಿಸಿರುವ ಅಲ್ಲು ಅರ್ಜುನ್​, ‘ಇದು ದಕ್ಷಿಣ ಭಾರತ ಸಿನಿಮಾ. ನಾವು ಮಾಡೋದೆ ಹೀಗೆ’ ಎಂದಿದ್ದರು.

ಇದನ್ನೂ ಓದಿ: ‘ಅರ್ಜುನ್ ರೆಡ್ಡಿ, ಗೀತ ಗೋವಿಂದಂ..’; ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ 5 ಚಿತ್ರಗಳು ಸೂಪರ್​ಹಿಟ್! ಇಲ್ಲಿದೆ ಕುತೂಹಲಕರ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ