ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

ಗಣೇಶ್​ ನಟನೆಯ ‘ಮುಂಗಾರು ಮಳೆ 2’ ಚಿತ್ರದ ಮೂಲಕ ನೇಹಾ ಶೆಟ್ಟಿ ಕನ್ನಡದಲ್ಲಿ ಹೆಸರು ಮಾಡಿದರು. ಅವರು ತೆಲುಗು ಇಂಡಸ್ಟ್ರಿಯಲ್ಲೂ ಕೆಲಸ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ
ನೇಹಾ-ಅಲ್ಲು ಅರ್ಜುನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 06, 2022 | 6:16 PM

ನಟ ಅಲ್ಲು ಅರ್ಜುನ್​ (Allu Arjun) ಅವರ ಜತೆ ತೆರೆ ಹಂಚಿಕೊಳ್ಳುವ ಅವಕಾಶಕ್ಕಾಗಿ ಸಾಕಷ್ಟು ಜನರು ಕಾಯುತ್ತಿರುತ್ತಾರೆ. ಅವರ ಜತೆ ನಟಿಸಿದರೆ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ಸಿಗುತ್ತದೆ. ಮಂಗಳೂರು ಮೂಲದ ಪೂಜಾ ಹೆಗ್ಡೆ (Pooja Hegde), ಕೊಡಗಿನ ರಶ್ಮಿಕಾ ಮಂದಣ್ಣ ಈಗಾಗಲೇ ಅಲ್ಲು ಅರ್ಜುನ್​ ಜತೆ ತೆರೆಹಂಚಿಕೊಂಡಿದ್ದಾರೆ. ಇಬ್ಬರಿಗೂ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈಗ ಮಂಗಳೂರಿನ ನೇಹಾ ಶೆಟ್ಟಿ (Neha Shetty)ಕೂಡ ಅಲ್ಲು ಜತೆ ತೆರೆ ಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ. ಹಾಗಾದರೆ ಯಾವುದು ಆ ಸಿನಿಮಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗಣೇಶ್​ ನಟನೆಯ ‘ಮುಂಗಾರು ಮಳೆ 2’ ಚಿತ್ರದ ಮೂಲಕ ನೇಹಾ ಶೆಟ್ಟಿ ಕನ್ನಡದಲ್ಲಿ ಹೆಸರು ಮಾಡಿದರು. ಅವರು ತೆಲುಗು ಇಂಡಸ್ಟ್ರಿಯಲ್ಲೂ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಖತ್​ ಚ್ಯೂಸಿ ಆಗಿದ್ದಾರೆ. ಅವರು ಈಗ ಬನ್ನಿ ಜತೆ ತೆರೆ ಹಂಚಿಕೊಂಡಿದ್ದಾರೆ. ಹಾಗಂತ ಇದು ಸಿನಿಮಾದಲ್ಲಿ ಅಲ್ಲ, ಬದಲಿಗೆ ಜೊಮ್ಯಾಟೋ ಜಾಹೀರಾತಿನಲ್ಲಿ.

ಅಲ್ಲು ಅರ್ಜುನ್​ ಅವರ ಜತೆಗೆ ಫುಡ್​ ಡೆಲಿವರಿ ಸಂಸ್ಥೆ ಜೊಮ್ಯಾಟೋ ಕೈ ಜೋಡಿಸಿದೆ. ಇದರ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ನೇಹಾ  ಶೆಟ್ಟಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ನೇಹಾ ಶೆಟ್ಟಿ ಅವರು ಗುಲಾಬಿ ಹೂವನ್ನು ಹಿಡಿದು ನಿಂತಿರುತ್ತಾರೆ. ಈ ಸಂದರ್ಭದಲ್ಲಿ ಅವರ ಬಳಿ ನಾಲ್ಕೈದು ಮಂದಿ ಬರುತ್ತಾರೆ. ಈ ವೇಳೆ ಬೈಕ್​ನಲ್ಲಿ ಬರುವ ಅಲ್ಲು ಅರ್ಜುನ್​ ಎಲ್ಲರಿಗೂ ಹೊಡೆಯುತ್ತಾರೆ.

ವಿವಾದ ಸೃಷ್ಟಿಸಿದ್ದ ಜೊಮ್ಯಾಟೋ ಜಾಹೀರಾತು..

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ. ‘ಪುಷ್ಪ’ ಸಿನಿಮಾದ ಥೀಮ್​ ಇಟ್ಟುಕೊಂಡು ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಸೂಪರ್ ಹಿಟ್​ ‘ಪುಷ್ಪ’ ಸಿನಿಮಾದಲ್ಲಿ ಫೈಟಿಂಗ್​ ವೇಳೆ ಕೆಲ ಸ್ಲೋ ಮೋಷನ್​ ದೃಶ್ಯಗಳು ಬಂದಿದ್ದವು. ಇದು ಕೇವಲ ‘ಪುಷ್ಪ’ ಸಿನಿಮಾಗೆ ಮಾತ್ರ ಸೀಮಿತವಾಗಿಲ್ಲ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನ ಸಾಕಷ್ಟು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ಮಾದರಿಯ ತಂತ್ರ ಬಳಕೆ ಮಾಡಿಕೊಳ್ಳಾಗಿದೆ. ಈಗ ಬಂದಿರುವ ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ವ್ಯಂಗ್ಯವಾಡಲಾಗಿತ್ತು.

ಜೊಮ್ಯಾಟೋ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ತೆಲುಗು ನಟ ಸುಬ್ಬರಾಜು ನಡುವೆ ಫೈಟ್​ ನಡೆಯುತ್ತಿರುತ್ತದೆ. ಈ ಫೈಟ್​ನಲ್ಲಿ ಸುಬ್ಬರಾಜುಗೆ ಅಲ್ಲು ಅರ್ಜುನ್​ ಹೊಡೆಯುತ್ತಾರೆ. ಆಗ ಸುಬ್ಬರಾಜು ಅವರು ಸ್ಲೋಮೋಷನ್​ನಲ್ಲಿ ಕೆಳಗೆ ಬಿದ್ದಂತೆ ತೋರಿಸಲಾಗಿತ್ತು. ‘ಬನ್ನಿ ನನ್ನನ್ನು ಬೇಗ ಬೀಳಿಸು. ನನಗೆ ಮಟನ್​ ಕರ್ರಿ ತಿನ್ನಬೇಕು. ನಾನು ಬೀಳುವ ವೇಳೆಗೆ ರೆಸ್ಟೋರೆಂಟ್​ ಕ್ಲೋಸ್​ ಮಾಡುತ್ತಾರೆ’ ಎಂದಿದ್ದರು ಸುಬ್ಬರಾಜು. ಇದಕ್ಕೆ ಉತ್ತರಿಸಿರುವ ಅಲ್ಲು ಅರ್ಜುನ್​, ‘ಇದು ದಕ್ಷಿಣ ಭಾರತ ಸಿನಿಮಾ. ನಾವು ಮಾಡೋದೆ ಹೀಗೆ’ ಎಂದಿದ್ದರು.

ಇದನ್ನೂ ಓದಿ: ‘ಅರ್ಜುನ್ ರೆಡ್ಡಿ, ಗೀತ ಗೋವಿಂದಂ..’; ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ 5 ಚಿತ್ರಗಳು ಸೂಪರ್​ಹಿಟ್! ಇಲ್ಲಿದೆ ಕುತೂಹಲಕರ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ