AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್

Nenapirali Prem: ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾನಲ್ಲಿ ನೆನಪಿರಲಿ ಪ್ರೇಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದು ಅವರ ಹುಟ್ಟುಹಬ್ಬಕ್ಕೆ ಅವರನ್ನು ಒಳಗೊಂಡ ಮಾಸ್ ಪೋಸ್ಟರ್ ಬಿಡುಗಡೆ ಆಗಿದೆ. ಆದರೆ ಈ ಪೋಸ್ಟರ್ ಬಗ್ಗೆ ನಟಿ ಶ್ರುತಿ ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಪ್ರೇಮ್ ಈ ವಿವಾದ ಕುರಿತು ಸ್ಪಂದಿಸಿದ್ದಾರೆ.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್
Nenapirali Prem
Follow us
ಮಂಜುನಾಥ ಸಿ.
|

Updated on: Apr 19, 2025 | 8:55 AM

ನೆನಪಿರಲಿ ಪ್ರೇಮ್ (Nenapirali Prem) ಹುಟ್ಟುಹಬ್ಬದಂದು ಅವರ ನಟನೆಯ ಹೊಸ ಸಿನಿಮಾ ಪೋಸ್ಟರ್ ಒಂದು ಬಿಡುಗಡೆ ಆಗಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಈ ಸಿನಿಮಾನಲ್ಲಿ ನಟ ನೆನಪಿರಲಿ ಪ್ರೇಮ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಪ್ರೇಮ್ ಅವರ ಹುಟ್ಟುಹಬ್ಬದಂದು ಪ್ರೇಮ್ ಅವರನ್ನು ಒಳಗೊಂಡ ಸಿನಿಮಾದ ಮಾಸ್ ಪೋಸ್ಟರ್ ಬಿಡುಗಡೆ ಆಯ್ತು. ಆದರೆ ಈ ಪೋಸ್ಟರ್ ಈಗ ವಿವಾದಕ್ಕೆ ಕಾರಣವಾಗಿದೆ.

ಸಿಗಾರ್ ಸೇರುತ್ತಿರುವ ನೆನಪಿರಲಿ ಪ್ರೇಮ್ ಕೈಯಲ್ಲಿ ಒಬ್ಬ ರಾಜಕಾರಣಿಯ ಚಿತ್ರವನ್ನು ಹಿಡಿದುಕೊಂಡು ಅದಕ್ಕೆ ಸಿಗಾರಿನಿಂದ ಬೆಂಕಿ ನೀಡುತ್ತಿರುವ ಚಿತ್ರ ಪೋಸ್ಟರ್​ನಲ್ಲಿದೆ. ನೆನಪಿರಲಿ ಪ್ರೇಮ್ ಹಿಡಿದುಕೊಂಡಿರುವ ರಾಜಕಾರಣಿಯ ಚಿತ್ರ ನಟ ರಮೇಶ್ ಇಂದಿರಾ ಅವರದ್ದಾಗಿದೆ. ಆದರೆ ಈ ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದು, ಸಿನಿಮಾ ತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿರುವ ರಮೇಶ್ ಇಂದಿರಾ ಅವರ ಚಿತ್ರ ಅಸಲಿಗೆ ‘ಭೀಮಾ’ ಸಿನಿಮಾದ್ದಾಗಿದೆ. ಆದರೆ ರಮೇಶ್ ಇಂದಿರಾ ಆಗಲಿ, ‘ಭೀಮಾ’ ಸಿನಿಮಾದ ನಿರ್ದೇಶಕ, ನಿರ್ಮಾಪಕರ ಅನುಮತಿಗಳನ್ನು ಪಡೆಯದೆ ‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿ ಅವರ ಫೋಟೊ ಅನ್ನು ಬಳಸಲಾಗಿದೆ. ಅದೂ ಪೋಸ್ಟರ್ ಅನ್ನು ಬಳಸಿರುವುದು ಮಾತ್ರವೇ ಅಲ್ಲದೆ ವಿಲನ್ ರೀತಿ ತೋರಿಸಲಾಗಿದೆ.

ಇದನ್ನೂ ಓದಿ:ನೆನಪಿರಲಿ ಪ್ರೇಮ್ ಪುತ್ರಿಯ ಮುದ್ದಾದ ಡ್ಯಾನ್ಸ್ ವಿಡಿಯೋ ನೋಡಿ

ಶ್ರುತಿ ನಾಯ್ಡು ಅವರು ರಮೇಶ್ ಇಂದಿರಾ ಅವರ ಪತ್ನಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಈ ಚಿತ್ರ ತಂಡದವರು ತುಂಬಾ ಅನೈತಿಕವಾಗಿ ನಡೆದುಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್‌ನಲ್ಲಿ ಪತ್ರಿಕೆಯ ಕಟಿಂಗ್‌ನಲ್ಲಿರುವ ನಟನ ಅನುಮತಿ ಪಡೆಯದೇ ಇರುವುದು ಸರಿಯಲ್ಲ’ ಎಂದು ಹೇಳಿದ್ದಾರೆ. ರಮೇಶ್ ಇಂದಿಯಾ ‘ಸ್ಪಾರ್ಕ್’ ಸಿನಿಮಾದಲ್ಲಿ ನಟಿಸಲಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ, ಅಲ್ಲದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ನೆನಪಿರಲಿ ಪ್ರೇಮ್, ‘ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ, ನಮ್ ನಿರ್ದೇಶಕರ ಜೊತೆ ಮಾತಾಡ್ತಿನಿ, ವಿಷಯ ಏನು ಅಂತಾ ತಿಳ್ಕೊಂಡು ಆ ಬಳಿಕ ಪ್ರತಿಕ್ರಿಯೆ ನೀಡುತ್ತೀನಿ, ನಾನು ಬರ್ತ್ ಡೇಯಲ್ಲಿ ಬ್ಯುಸಿ ಇದ್ದ ಕಾರಣ ಡೈರೆಕ್ಟರ್ ಜೊತೆನೂ ಮಾತಾಡೋಕೆ ಆಗಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ