AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್

Nenapirali Prem: ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾನಲ್ಲಿ ನೆನಪಿರಲಿ ಪ್ರೇಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದು ಅವರ ಹುಟ್ಟುಹಬ್ಬಕ್ಕೆ ಅವರನ್ನು ಒಳಗೊಂಡ ಮಾಸ್ ಪೋಸ್ಟರ್ ಬಿಡುಗಡೆ ಆಗಿದೆ. ಆದರೆ ಈ ಪೋಸ್ಟರ್ ಬಗ್ಗೆ ನಟಿ ಶ್ರುತಿ ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಪ್ರೇಮ್ ಈ ವಿವಾದ ಕುರಿತು ಸ್ಪಂದಿಸಿದ್ದಾರೆ.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್
Nenapirali Prem
ಮಂಜುನಾಥ ಸಿ.
|

Updated on: Apr 19, 2025 | 8:55 AM

Share

ನೆನಪಿರಲಿ ಪ್ರೇಮ್ (Nenapirali Prem) ಹುಟ್ಟುಹಬ್ಬದಂದು ಅವರ ನಟನೆಯ ಹೊಸ ಸಿನಿಮಾ ಪೋಸ್ಟರ್ ಒಂದು ಬಿಡುಗಡೆ ಆಗಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಈ ಸಿನಿಮಾನಲ್ಲಿ ನಟ ನೆನಪಿರಲಿ ಪ್ರೇಮ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಪ್ರೇಮ್ ಅವರ ಹುಟ್ಟುಹಬ್ಬದಂದು ಪ್ರೇಮ್ ಅವರನ್ನು ಒಳಗೊಂಡ ಸಿನಿಮಾದ ಮಾಸ್ ಪೋಸ್ಟರ್ ಬಿಡುಗಡೆ ಆಯ್ತು. ಆದರೆ ಈ ಪೋಸ್ಟರ್ ಈಗ ವಿವಾದಕ್ಕೆ ಕಾರಣವಾಗಿದೆ.

ಸಿಗಾರ್ ಸೇರುತ್ತಿರುವ ನೆನಪಿರಲಿ ಪ್ರೇಮ್ ಕೈಯಲ್ಲಿ ಒಬ್ಬ ರಾಜಕಾರಣಿಯ ಚಿತ್ರವನ್ನು ಹಿಡಿದುಕೊಂಡು ಅದಕ್ಕೆ ಸಿಗಾರಿನಿಂದ ಬೆಂಕಿ ನೀಡುತ್ತಿರುವ ಚಿತ್ರ ಪೋಸ್ಟರ್​ನಲ್ಲಿದೆ. ನೆನಪಿರಲಿ ಪ್ರೇಮ್ ಹಿಡಿದುಕೊಂಡಿರುವ ರಾಜಕಾರಣಿಯ ಚಿತ್ರ ನಟ ರಮೇಶ್ ಇಂದಿರಾ ಅವರದ್ದಾಗಿದೆ. ಆದರೆ ಈ ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದು, ಸಿನಿಮಾ ತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿರುವ ರಮೇಶ್ ಇಂದಿರಾ ಅವರ ಚಿತ್ರ ಅಸಲಿಗೆ ‘ಭೀಮಾ’ ಸಿನಿಮಾದ್ದಾಗಿದೆ. ಆದರೆ ರಮೇಶ್ ಇಂದಿರಾ ಆಗಲಿ, ‘ಭೀಮಾ’ ಸಿನಿಮಾದ ನಿರ್ದೇಶಕ, ನಿರ್ಮಾಪಕರ ಅನುಮತಿಗಳನ್ನು ಪಡೆಯದೆ ‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿ ಅವರ ಫೋಟೊ ಅನ್ನು ಬಳಸಲಾಗಿದೆ. ಅದೂ ಪೋಸ್ಟರ್ ಅನ್ನು ಬಳಸಿರುವುದು ಮಾತ್ರವೇ ಅಲ್ಲದೆ ವಿಲನ್ ರೀತಿ ತೋರಿಸಲಾಗಿದೆ.

ಇದನ್ನೂ ಓದಿ:ನೆನಪಿರಲಿ ಪ್ರೇಮ್ ಪುತ್ರಿಯ ಮುದ್ದಾದ ಡ್ಯಾನ್ಸ್ ವಿಡಿಯೋ ನೋಡಿ

ಶ್ರುತಿ ನಾಯ್ಡು ಅವರು ರಮೇಶ್ ಇಂದಿರಾ ಅವರ ಪತ್ನಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಈ ಚಿತ್ರ ತಂಡದವರು ತುಂಬಾ ಅನೈತಿಕವಾಗಿ ನಡೆದುಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್‌ನಲ್ಲಿ ಪತ್ರಿಕೆಯ ಕಟಿಂಗ್‌ನಲ್ಲಿರುವ ನಟನ ಅನುಮತಿ ಪಡೆಯದೇ ಇರುವುದು ಸರಿಯಲ್ಲ’ ಎಂದು ಹೇಳಿದ್ದಾರೆ. ರಮೇಶ್ ಇಂದಿಯಾ ‘ಸ್ಪಾರ್ಕ್’ ಸಿನಿಮಾದಲ್ಲಿ ನಟಿಸಲಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ, ಅಲ್ಲದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ನೆನಪಿರಲಿ ಪ್ರೇಮ್, ‘ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ, ನಮ್ ನಿರ್ದೇಶಕರ ಜೊತೆ ಮಾತಾಡ್ತಿನಿ, ವಿಷಯ ಏನು ಅಂತಾ ತಿಳ್ಕೊಂಡು ಆ ಬಳಿಕ ಪ್ರತಿಕ್ರಿಯೆ ನೀಡುತ್ತೀನಿ, ನಾನು ಬರ್ತ್ ಡೇಯಲ್ಲಿ ಬ್ಯುಸಿ ಇದ್ದ ಕಾರಣ ಡೈರೆಕ್ಟರ್ ಜೊತೆನೂ ಮಾತಾಡೋಕೆ ಆಗಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!