AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್

Nenapirali Prem: ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾನಲ್ಲಿ ನೆನಪಿರಲಿ ಪ್ರೇಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದು ಅವರ ಹುಟ್ಟುಹಬ್ಬಕ್ಕೆ ಅವರನ್ನು ಒಳಗೊಂಡ ಮಾಸ್ ಪೋಸ್ಟರ್ ಬಿಡುಗಡೆ ಆಗಿದೆ. ಆದರೆ ಈ ಪೋಸ್ಟರ್ ಬಗ್ಗೆ ನಟಿ ಶ್ರುತಿ ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಪ್ರೇಮ್ ಈ ವಿವಾದ ಕುರಿತು ಸ್ಪಂದಿಸಿದ್ದಾರೆ.

ಪೋಸ್ಟರ್ ವಿವಾದ, ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್
Nenapirali Prem
ಮಂಜುನಾಥ ಸಿ.
|

Updated on: Apr 19, 2025 | 8:55 AM

Share

ನೆನಪಿರಲಿ ಪ್ರೇಮ್ (Nenapirali Prem) ಹುಟ್ಟುಹಬ್ಬದಂದು ಅವರ ನಟನೆಯ ಹೊಸ ಸಿನಿಮಾ ಪೋಸ್ಟರ್ ಒಂದು ಬಿಡುಗಡೆ ಆಗಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟನೆಯ ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಈ ಸಿನಿಮಾನಲ್ಲಿ ನಟ ನೆನಪಿರಲಿ ಪ್ರೇಮ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಪ್ರೇಮ್ ಅವರ ಹುಟ್ಟುಹಬ್ಬದಂದು ಪ್ರೇಮ್ ಅವರನ್ನು ಒಳಗೊಂಡ ಸಿನಿಮಾದ ಮಾಸ್ ಪೋಸ್ಟರ್ ಬಿಡುಗಡೆ ಆಯ್ತು. ಆದರೆ ಈ ಪೋಸ್ಟರ್ ಈಗ ವಿವಾದಕ್ಕೆ ಕಾರಣವಾಗಿದೆ.

ಸಿಗಾರ್ ಸೇರುತ್ತಿರುವ ನೆನಪಿರಲಿ ಪ್ರೇಮ್ ಕೈಯಲ್ಲಿ ಒಬ್ಬ ರಾಜಕಾರಣಿಯ ಚಿತ್ರವನ್ನು ಹಿಡಿದುಕೊಂಡು ಅದಕ್ಕೆ ಸಿಗಾರಿನಿಂದ ಬೆಂಕಿ ನೀಡುತ್ತಿರುವ ಚಿತ್ರ ಪೋಸ್ಟರ್​ನಲ್ಲಿದೆ. ನೆನಪಿರಲಿ ಪ್ರೇಮ್ ಹಿಡಿದುಕೊಂಡಿರುವ ರಾಜಕಾರಣಿಯ ಚಿತ್ರ ನಟ ರಮೇಶ್ ಇಂದಿರಾ ಅವರದ್ದಾಗಿದೆ. ಆದರೆ ಈ ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದು, ಸಿನಿಮಾ ತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿರುವ ರಮೇಶ್ ಇಂದಿರಾ ಅವರ ಚಿತ್ರ ಅಸಲಿಗೆ ‘ಭೀಮಾ’ ಸಿನಿಮಾದ್ದಾಗಿದೆ. ಆದರೆ ರಮೇಶ್ ಇಂದಿರಾ ಆಗಲಿ, ‘ಭೀಮಾ’ ಸಿನಿಮಾದ ನಿರ್ದೇಶಕ, ನಿರ್ಮಾಪಕರ ಅನುಮತಿಗಳನ್ನು ಪಡೆಯದೆ ‘ಸ್ಪಾರ್ಕ್’ ಸಿನಿಮಾದ ಪೋಸ್ಟರ್​ನಲ್ಲಿ ಅವರ ಫೋಟೊ ಅನ್ನು ಬಳಸಲಾಗಿದೆ. ಅದೂ ಪೋಸ್ಟರ್ ಅನ್ನು ಬಳಸಿರುವುದು ಮಾತ್ರವೇ ಅಲ್ಲದೆ ವಿಲನ್ ರೀತಿ ತೋರಿಸಲಾಗಿದೆ.

ಇದನ್ನೂ ಓದಿ:ನೆನಪಿರಲಿ ಪ್ರೇಮ್ ಪುತ್ರಿಯ ಮುದ್ದಾದ ಡ್ಯಾನ್ಸ್ ವಿಡಿಯೋ ನೋಡಿ

ಶ್ರುತಿ ನಾಯ್ಡು ಅವರು ರಮೇಶ್ ಇಂದಿರಾ ಅವರ ಪತ್ನಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಈ ಚಿತ್ರ ತಂಡದವರು ತುಂಬಾ ಅನೈತಿಕವಾಗಿ ನಡೆದುಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್‌ನಲ್ಲಿ ಪತ್ರಿಕೆಯ ಕಟಿಂಗ್‌ನಲ್ಲಿರುವ ನಟನ ಅನುಮತಿ ಪಡೆಯದೇ ಇರುವುದು ಸರಿಯಲ್ಲ’ ಎಂದು ಹೇಳಿದ್ದಾರೆ. ರಮೇಶ್ ಇಂದಿಯಾ ‘ಸ್ಪಾರ್ಕ್’ ಸಿನಿಮಾದಲ್ಲಿ ನಟಿಸಲಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ, ಅಲ್ಲದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ನೆನಪಿರಲಿ ಪ್ರೇಮ್, ‘ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ, ನಮ್ ನಿರ್ದೇಶಕರ ಜೊತೆ ಮಾತಾಡ್ತಿನಿ, ವಿಷಯ ಏನು ಅಂತಾ ತಿಳ್ಕೊಂಡು ಆ ಬಳಿಕ ಪ್ರತಿಕ್ರಿಯೆ ನೀಡುತ್ತೀನಿ, ನಾನು ಬರ್ತ್ ಡೇಯಲ್ಲಿ ಬ್ಯುಸಿ ಇದ್ದ ಕಾರಣ ಡೈರೆಕ್ಟರ್ ಜೊತೆನೂ ಮಾತಾಡೋಕೆ ಆಗಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ