AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ. ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ […]

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ
KUSHAL V
| Edited By: |

Updated on:Jul 26, 2020 | 2:11 AM

Share

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ.

ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ತಾಯಿಗೆ ಚಿಕಿತ್ಸೆ ನೀಡಿದ ಮತ್ತು ಚಿಕಿತ್ಸೆ ನೀಡಲು ನೆರವಾದ ವೈದ್ಯರಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಪ್ರೇಮ್ ಧನ್ಯವಾದ ಹೇಳಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ನೆನಪಿರಲಿ ಪ್ರೇಮ್ ತಾಯಿ ಚಿಕಿತ್ಸೆ ನೀಡಿದ ವೈದ್ಯೆ ಡಾ.ವೇದಾವತಿ, ಸಹಾಯ ಮಾಡಿದ ವೈದ್ಯರಾದ ವಿಕ್ಟೋರಿಯಾ ಆಸ್ಪತ್ರೆಯ ಡಾ. ಶಂಕ್ರಪ್ಪ, ಡಾ.ಬಾಲಾಜಿ ಪೈ, ಡಾ.ಸ್ಮಿತಾ, ಡಾ. ಅಸಿಮಾ ಬಾನು ಅವರಿಗೆ ಧನ್ಯವಾದಗಳನ್ನ ಹೇಳಿದ್ದಾರೆ.

ಇಷ್ಟೇ ಅಲ್ಲ.. ಕಿರಿಯರಿಗೆ ಕೊರೊನಾ ಸೋಂಕು ತಗುಲಿದ್ರೆ, ಅವರು ಬದುಕೋದು ಕಷ್ಟ ಅನ್ನೋ ಆತಂಕ ಜನರಲ್ಲಿದೆ. ಇಂತಹವ್ರಿಗೆ ಪ್ರೇಮ್ ಧೈರ್ಯ ತುಂಬುವ ಕೆಲಸ ಕೂಡ ಮಾಡಿದ್ದಾರೆ. ತನ್ನ ತಾಯಿಗೆ ಬಿಪಿ, ಶುಗರ್ ಇದೆ. ಆದ್ರೂ, ತಮ್ಮ ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದು ಬಂದಿದ್ದಾರೆ. ಹೀಗಾಗಿ ಆತ್ಮಸ್ಥೆರ್ಯ ಹೆಚ್ಚಿಸಿಕೊಳ್ಳಲು ಹಿರಿಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Published On - 4:12 pm, Sat, 25 July 20

Follow Us
KUSHAL V
KUSHAL V
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!