AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ. ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ […]

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ
KUSHAL V
| Updated By: |

Updated on:Jul 26, 2020 | 2:11 AM

Share

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ.

ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ತಾಯಿಗೆ ಚಿಕಿತ್ಸೆ ನೀಡಿದ ಮತ್ತು ಚಿಕಿತ್ಸೆ ನೀಡಲು ನೆರವಾದ ವೈದ್ಯರಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಪ್ರೇಮ್ ಧನ್ಯವಾದ ಹೇಳಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ನೆನಪಿರಲಿ ಪ್ರೇಮ್ ತಾಯಿ ಚಿಕಿತ್ಸೆ ನೀಡಿದ ವೈದ್ಯೆ ಡಾ.ವೇದಾವತಿ, ಸಹಾಯ ಮಾಡಿದ ವೈದ್ಯರಾದ ವಿಕ್ಟೋರಿಯಾ ಆಸ್ಪತ್ರೆಯ ಡಾ. ಶಂಕ್ರಪ್ಪ, ಡಾ.ಬಾಲಾಜಿ ಪೈ, ಡಾ.ಸ್ಮಿತಾ, ಡಾ. ಅಸಿಮಾ ಬಾನು ಅವರಿಗೆ ಧನ್ಯವಾದಗಳನ್ನ ಹೇಳಿದ್ದಾರೆ.

ಇಷ್ಟೇ ಅಲ್ಲ.. ಕಿರಿಯರಿಗೆ ಕೊರೊನಾ ಸೋಂಕು ತಗುಲಿದ್ರೆ, ಅವರು ಬದುಕೋದು ಕಷ್ಟ ಅನ್ನೋ ಆತಂಕ ಜನರಲ್ಲಿದೆ. ಇಂತಹವ್ರಿಗೆ ಪ್ರೇಮ್ ಧೈರ್ಯ ತುಂಬುವ ಕೆಲಸ ಕೂಡ ಮಾಡಿದ್ದಾರೆ. ತನ್ನ ತಾಯಿಗೆ ಬಿಪಿ, ಶುಗರ್ ಇದೆ. ಆದ್ರೂ, ತಮ್ಮ ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದು ಬಂದಿದ್ದಾರೆ. ಹೀಗಾಗಿ ಆತ್ಮಸ್ಥೆರ್ಯ ಹೆಚ್ಚಿಸಿಕೊಳ್ಳಲು ಹಿರಿಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Published On - 4:12 pm, Sat, 25 July 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್