AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ. ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ […]

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ
KUSHAL V
| Edited By: |

Updated on:Jul 26, 2020 | 2:11 AM

Share

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ.

ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ತಾಯಿಗೆ ಚಿಕಿತ್ಸೆ ನೀಡಿದ ಮತ್ತು ಚಿಕಿತ್ಸೆ ನೀಡಲು ನೆರವಾದ ವೈದ್ಯರಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಪ್ರೇಮ್ ಧನ್ಯವಾದ ಹೇಳಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ನೆನಪಿರಲಿ ಪ್ರೇಮ್ ತಾಯಿ ಚಿಕಿತ್ಸೆ ನೀಡಿದ ವೈದ್ಯೆ ಡಾ.ವೇದಾವತಿ, ಸಹಾಯ ಮಾಡಿದ ವೈದ್ಯರಾದ ವಿಕ್ಟೋರಿಯಾ ಆಸ್ಪತ್ರೆಯ ಡಾ. ಶಂಕ್ರಪ್ಪ, ಡಾ.ಬಾಲಾಜಿ ಪೈ, ಡಾ.ಸ್ಮಿತಾ, ಡಾ. ಅಸಿಮಾ ಬಾನು ಅವರಿಗೆ ಧನ್ಯವಾದಗಳನ್ನ ಹೇಳಿದ್ದಾರೆ.

ಇಷ್ಟೇ ಅಲ್ಲ.. ಕಿರಿಯರಿಗೆ ಕೊರೊನಾ ಸೋಂಕು ತಗುಲಿದ್ರೆ, ಅವರು ಬದುಕೋದು ಕಷ್ಟ ಅನ್ನೋ ಆತಂಕ ಜನರಲ್ಲಿದೆ. ಇಂತಹವ್ರಿಗೆ ಪ್ರೇಮ್ ಧೈರ್ಯ ತುಂಬುವ ಕೆಲಸ ಕೂಡ ಮಾಡಿದ್ದಾರೆ. ತನ್ನ ತಾಯಿಗೆ ಬಿಪಿ, ಶುಗರ್ ಇದೆ. ಆದ್ರೂ, ತಮ್ಮ ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದು ಬಂದಿದ್ದಾರೆ. ಹೀಗಾಗಿ ಆತ್ಮಸ್ಥೆರ್ಯ ಹೆಚ್ಚಿಸಿಕೊಳ್ಳಲು ಹಿರಿಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Published On - 4:12 pm, Sat, 25 July 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ