AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepotism: ಡಾಲಿ ಮೇಲೆ ನೆಪೋಟಿಸಂ ಆರೋಪ; ಪ್ರೇಮ್​ ಪುತ್ರಿಗೆ ಚಾನ್ಸ್​ ನೀಡಿದ್ದಕ್ಕೆ ನೆಟ್ಟಿಗರ ಟೀಕೆ

Amrutha Prem | Daali Dhananjay: ‘ಬಡವರ ಮಕ್ಕಳು ಬೆಳಿಬೇಕ್​ ಕಣ್ರಯ್ಯ’ ಎಂದು ಡಾಲಿ ಹೇಳಿದ್ದ ಮಾತು ಸಖತ್​ ವೈರಲ್​ ಆಗಿತ್ತು. ಆದರೆ ಈಗ ಅವರು ಸ್ಟಾರ್​ ನಟನ ಪುತ್ರಿಗೆ ಅವಕಾಶ ನೀಡಿದ್ದಕ್ಕೆ ಕೆಲವರಿಂದ ಟೀಕೆ ವ್ಯಕ್ತವಾಗುತ್ತಿದೆ.

Nepotism: ಡಾಲಿ ಮೇಲೆ ನೆಪೋಟಿಸಂ ಆರೋಪ; ಪ್ರೇಮ್​ ಪುತ್ರಿಗೆ ಚಾನ್ಸ್​ ನೀಡಿದ್ದಕ್ಕೆ ನೆಟ್ಟಿಗರ ಟೀಕೆ
ಅಮೃತಾ ಪ್ರೇಮ್, ಡಾಲಿ ಧನಂಜಯ್
TV9 Web
| Edited By: |

Updated on: Dec 06, 2022 | 9:54 AM

Share

ಚಿತ್ರರಂಗದಲ್ಲಿ ನೆಪೋಟಿಸಂ (Nepotism) ಕುರಿತು ಪರ-ವಿರೋಧದ ಅಭಿಪ್ರಾಯ ಇದೆ. ಸ್ಟಾರ್​ ಕಲಾವಿದರ ಮಕ್ಕಳಿಗೆ ಸುಲಭವಾಗಿ ಅವಕಾಶ ಸಿಗುತ್ತದೆ ಎಂದು ಕೆಲವರು ತಕರಾರು ತೆಗೆಯುತ್ತಾರೆ. ಅವಕಾಶ ಸಿಕ್ಕ ಮಾತ್ರಕ್ಕೆ ಗೆಲುವು ಪಡೆಯುವುದು ಸುಲಭವಲ್ಲ ಎಂದು ಇನ್ನೂ ಕೆಲವರು ವಾದ ಮಾಡುತ್ತಾರೆ. ಒಟ್ಟಿನಲ್ಲಿ ನೆಪೋಟಿಸಂ ಕುರಿತು ಚರ್ಚೆಯಂತೂ ಜೋರಾಗಿದೆ. ಈಗ ಕನ್ನಡದ ಖ್ಯಾತ ನಟ ಡಾಲಿ ಧನಂಜಯ್​ (Daali Dhananjay) ಅವರ ಮೇಲೆ ನೆಪೋಟಿಸಂ ಆರೋಪ ಕೇಳಿಬಂದಿದೆ. ಫಿಲ್ಮಿ ಕುಟುಂಬದ ಯಾವುದೇ ಹಿನ್ನೆಲೆ ಇಲ್ಲದೇ ಬಣ್ಣದ ಲೋಕಕ್ಕೆ ಬಂದು ಹೆಸರು ಮಾಡಿದ ಧನಂಜಯ್​ ಅವರು ಅನೇಕರಿಗೆ ಸ್ಫೂರ್ತಿ. ಆದರೆ ಇಂದು ಅವರು ನೆಪೋಟಿಸಂ ಮಾಡುತ್ತಿದ್ದಾರೆ ಎಂದು ಕೆಲವು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ. ತಮ್ಮ ನಿರ್ಮಾಣದ ‘ಟಗರು ಪಲ್ಯ’ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್​ ಪುತ್ರಿ ಅಮೃತಾಗೆ (Amrutha Prem) ಡಾಲಿ ಧನಂಜಯ್​ ಅವಕಾಶ ನೀಡಿರುವುದೇ ಈ ಆರೋಪ ಎದುರಾಗಲು ಕಾರಣ ಆಗಿದೆ.

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಧನಂಜಯ್​ ಸಕ್ರಿಯರಾಗಿದ್ದಾರೆ. ಅವರು ಈ ಹಂತಕ್ಕೆ ಬೆಳೆದಿರುವುದು ಸಾಧನೆಯೇ ಸರಿ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಹೆಮ್ಮೆ ಇದೆ. ಅವರ ‘ಡಾಲಿ ಪಿಕ್ಚರ್ಸ್​’ ಬ್ಯಾನರ್​ ಮೂಲಕ ‘ಟಗರು ಪಲ್ಯ’ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ನಾಯಕಿಯಾಗಿ ‘ಲವ್ಲಿ ಸ್ಟಾರ್​’ ಪ್ರೇಮ್​ ಪುತ್ರಿ ಅಮೃತಾ ಆಯ್ಕೆ ಆಗಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಳ್ಳಲು ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಕಮೆಂಟ್​ ಮಾಡಿರುವ ಅನೇಕರು ನೆಪೋಟಿಸಂ ವಿಚಾರ ಎತ್ತಿದ್ದಾರೆ.

ಧನಂಜಯ್​ ನಟನೆಯ ‘ಹೆಡ್​ ಬುಷ್​’ ಸಿನಿಮಾ ಇತ್ತೀಚೆಗೆ ಒಂದಷ್ಟು ವಿವಾದ ಮಾಡಿಕೊಂಡಿತ್ತು. ‘ಬಡವರ ಮಕ್ಕಳು ಬೆಳಿಬೇಕ್​ ಕಣ್ರಯ್ಯ’ ಎಂದು ಡಾಲಿ ಹೇಳಿದ್ದ ಮಾತು ಸಖತ್​ ವೈರಲ್​ ಆಗಿತ್ತು. ಆದರೆ ಈಗ ಬಡವರ ಮಕ್ಕಳ ಬದಲಿಗೆ ಸ್ಟಾರ್​ ನಟನ ಪುತ್ರಿಗೆ ಅವರು ಅವಕಾಶ ನೀಡಿದ್ದಾರೆ ಎಂದು ಕೆಲವು ಮಂದಿ ಟೀಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Nenapirali Prem: ‘ನಾನು ಟ್ರೆಂಡ್​ನಲ್ಲಿ ಇರುವಾಗ ಮಗಳು ಹೀರೋಯಿನ್​ ಆಗಿದ್ದು ಖುಷಿ ನೀಡಿದೆ’: ‘ನೆನಪಿರಲಿ’ ಪ್ರೇಮ್​
Image
Amrutha Prem: ಚಿತ್ರರಂಗಕ್ಕೆ ‘ನೆನಪಿರಲಿ’ ಪ್ರೇಮ್​ ಪುತ್ರಿ ಎಂಟ್ರಿ; ಡಾಲಿ ನಿರ್ಮಾಣದ ಸಿನಿಮಾದಲ್ಲಿ ಅಮೃತಾ ನಟನೆ
Image
Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ

ಇದನ್ನೂ ಓದಿ: Nenapirali Prem: ‘ನಾನು ಟ್ರೆಂಡ್​ನಲ್ಲಿ ಇರುವಾಗ ಮಗಳು ಹೀರೋಯಿನ್​ ಆಗಿದ್ದು ಖುಷಿ ನೀಡಿದೆ’: ‘ನೆನಪಿರಲಿ’ ಪ್ರೇಮ್​

ಏಕಾಏಕಿ ನೆಪೋಟಿಸಂ ಆರೋಪ ಮಾಡುತ್ತಿರುವವರು ಎಲ್ಲ ಆಯಾಮದಿಂದಲೂ ಆಲೋಚನೆ ಮಾಡುತ್ತಿಲ್ಲ. ‘ಟಗರು ಪಲ್ಯ’ ಚಿತ್ರದಲ್ಲಿ ಧನಂಜಯ್ ಅವರು ಅವಕಾಶ ನೀಡಿರುವುದು ಅಮೃತಾ ಪ್ರೇಮ್​ಗೆ ಮಾತ್ರವಲ್ಲ. ಅನೇಕರಿಗೆ ಈ ಚಿತ್ರದಿಂದ ಚಾನ್ಸ್​ ಸಿಕ್ಕಿದೆ. ಹೀರೋ ಆಗಿ ನಾಗಭೂಷಣ್​ ನಟಿಸುತ್ತಿದ್ದಾರೆ. ನಿರ್ದೇಶಕ ಉಮೇಶ್​ ಕೆ. ಕೃಪ ಕೂಡ ಯಾವುದೇ ಫಿಲ್ಮಿ ಕುಟುಂಬದ ಹಿನ್ನೆಲೆಯಿಂದ ಬಂದವರಲ್ಲ. ಅವರಿಗೆ ಧನಂಜಯ್​ ಚಾನ್ಸ್​ ನೀಡಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ

ನಟನೆಯಲ್ಲಿ ಡಾಲಿ ಧನಂಜಯ್​ ಬ್ಯುಸಿ ಆಗಿದ್ದಾರೆ. ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿ ರಮ್ಯಾ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರು ನಟಿಸಿರುವ ‘ಒನ್ಸ್​ ಅಪಾನ್​ ಎ ಟೈಮ್​ ಇನ್ ಜಮಾಲಿ ಗುಡ್ಡ’ ಸಿನಿಮಾದ ಟೀಸರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್