AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ತ.ನಾಡು ವಿಧಾನಸಭೆ ಚುನಾವಣೆ: ರಾಜಕೀಯ ಎಂಟ್ರಿ ಘೋಷಿಸಿದ ರಜಿನಿಕಾಂತ್!

ಚೆನ್ನೈ: ರಜಿನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ 15 ವರ್ಷಗಳಿಂದಲೂ ಎದ್ದಿದ್ದ ಊಹಾಪೋಹದ ಸುದ್ದಿ ಇಂದು ತೆರೆಬಿದ್ದಿದೆ. ಚೆನ್ನೈನ ಲೀಲಾ ಪ್ಯಾಲೇಸ್​ ಐಶಾರಾಮಿ ಹೋಟೆಲ್‌ನಲ್ಲಿ ಇದೀಗ ತಾನೇ ಸುದ್ದಿಗೋಷ್ಠಿ ನಡೆಸಿದ ಸೂಪರ್​ಸ್ಟಾರ್​, ತಮಿಳು ಚಿತ್ರಪ್ರೇಮಿಗಳ ಆರಾಧ್ಯದೈವ ರಜಿನಿಕಾಂತ್ ಅಧಿಕೃತವಾಗಿ ಖುದ್ದಾಗಿ ತಾವು ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ಘೋಷಿಸಿದರು. ಆದ್ರೆ ಇಂದೂ ಪಕ್ಷದ ಹೆಸರು ಘೋಷಿಸದ ರಜಿನಿಕಾಂತ್, ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ತಿಳಿಸಿದರು. 1996ರಿಂದಲೂ ನನ್ನ ಹೆಸರು ರಾಜಕಾರಣದ ಜತೆ ಸೇರಿತ್ತು. 2017ರಲ್ಲಿ ನಾನು ರಾಜಕೀಯ ಪ್ರವೇಶದ ಬಗ್ಗೆ […]

2021 ತ.ನಾಡು ವಿಧಾನಸಭೆ ಚುನಾವಣೆ: ರಾಜಕೀಯ ಎಂಟ್ರಿ ಘೋಷಿಸಿದ ರಜಿನಿಕಾಂತ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 12, 2020 | 1:10 PM

Share

ಚೆನ್ನೈ: ರಜಿನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ 15 ವರ್ಷಗಳಿಂದಲೂ ಎದ್ದಿದ್ದ ಊಹಾಪೋಹದ ಸುದ್ದಿ ಇಂದು ತೆರೆಬಿದ್ದಿದೆ. ಚೆನ್ನೈನ ಲೀಲಾ ಪ್ಯಾಲೇಸ್​ ಐಶಾರಾಮಿ ಹೋಟೆಲ್‌ನಲ್ಲಿ ಇದೀಗ ತಾನೇ ಸುದ್ದಿಗೋಷ್ಠಿ ನಡೆಸಿದ ಸೂಪರ್​ಸ್ಟಾರ್​, ತಮಿಳು ಚಿತ್ರಪ್ರೇಮಿಗಳ ಆರಾಧ್ಯದೈವ ರಜಿನಿಕಾಂತ್ ಅಧಿಕೃತವಾಗಿ ಖುದ್ದಾಗಿ ತಾವು ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ಘೋಷಿಸಿದರು.

ಆದ್ರೆ ಇಂದೂ ಪಕ್ಷದ ಹೆಸರು ಘೋಷಿಸದ ರಜಿನಿಕಾಂತ್, ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ತಿಳಿಸಿದರು. 1996ರಿಂದಲೂ ನನ್ನ ಹೆಸರು ರಾಜಕಾರಣದ ಜತೆ ಸೇರಿತ್ತು. 2017ರಲ್ಲಿ ನಾನು ರಾಜಕೀಯ ಪ್ರವೇಶದ ಬಗ್ಗೆ ಹೇಳಿದ್ದೆ. ಇದೀಗ ಅಧಿಕೃತವಾಗಿ ಜನರ ಸಮ್ಮುಖದಲ್ಲಿ ನನ್ನ ರಾಜಕೀಯ ಪ್ರವೇಶವನ್ನು ಘೋಷಿಸುತ್ತಿರುವುದಾಗಿ ನಟ ರಜಿನಿಕಾಂತ್​ ಪ್ರಕಟಿಸಿದರು.

ಸಿಎಂ ಪದವಿಗಾಗಿ ಅಲ್ಲ, ಜನರ ಸೇವೆಗಾಗಿ ರಾಜಕೀಯಕ್ಕೆ ಎಂಟ್ರಿ: 48ನೇ ವಯಸ್ಸಿನಲ್ಲೇ ನಾನು ಪದವಿಗೆ ಆಸೆ ಪಡಲಿಲ್ಲ. ಇನ್ನು ಈಗ 70ನೇ ವಯಸ್ಸಿನಲ್ಲಿ ಪದವಿ ಬಯಸುತ್ತೀನಿ ಅಂದುಕೊಂಡಿದ್ದೀರಾ? ಎಂದು ತಾವು ಮುಖ್ಯಮಂತ್ರಿ ಪದವಿಗಾಗಿ ಅಲ್ಲ ಜನರ ಸೇವೆಗಾಗಿ ರಾಜಕೀಯಕ್ಕೆ ಬರುವುದಾಗಿ ರಜಿನಿ ತಮ್ಮ ವ್ಯಕ್ತಿತ್ವಕ್ಕೆ ಅನುಗುಣವಾಗಿ ಹೇಳಿದರು.

ವ್ಯಕ್ತಿ ಕೇಂದ್ರಿತ ಸರ್ಕಾರ, ಪಕ್ಷದ ಪದ್ಧತಿ ಸರಿಯಿಲ್ಲ. ಸರ್ಕಾರದ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ. ಈ ವ್ಯವಸ್ಥೆಯನ್ನು ಬದಲಾಯಿಸುವುದೇ ನಮ್ಮ ಉದ್ದೇಶವಾಗಿದೆ. ನನ್ನ ಪಕ್ಷದಲ್ಲಿ ಅನಗತ್ಯವಾಗಿ ಸಂಪನ್ಮೂಲ ವ್ಯರ್ಥ ಮಾಡುವುದಿಲ್ಲ. ಪಕ್ಷದಲ್ಲಿ ಯುವಕರ ಹೆಚ್ಚಿನ ಪಾಲ್ಗೊಳ್ಳುವಿಕೆಯ ಅಗತ್ಯವಿದೆ ಎಂದರು.

ನನಗೆ, ನಾನು, ನನ್ನದು ಎಂಬುದಕ್ಕೆ ಶಕ್ತಿ ಇರುವುದಿಲ್ಲ. ಆದ್ರೆ ನಿಸ್ವಾರ್ಥಸೇವೆಗೆ ಎಲ್ಲಾ ಅಧಿಕಾರವೂ ಕೂಡಿ ಬರುತ್ತದೆ ಎಂದು ರಜಿನಿ ಮಾರ್ಮಿಕವಾಗಿ ಹೇಳಿದರು. ಇದು ಜನಾಂದೋಲನವಾಗಿ ಪರಿವರ್ತನೆಯಾಗಬೇಕು. ಚಳವಳಿಯಾಗಿ ರೂಪುಗೊಳ್ಳಬೇಕು, ಆಗಲೇ ಜನ ಚೆನ್ನಾಗಿ ಇರಬಲ್ಲರು ಎಂದರು. 2021ರ ಮೇ ನಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಹೀಗಾಗಿ ತಮಿಳು ಚಿತ್ರಪ್ರೇಮಿಗಳ ಆರಾಧ್ಯದೈವ ರಜಿನಿಕಾಂತ್ ಕೊನೆಗೂ, ರಾಜಕೀಯ ಎಂಟ್ರಿ ಘೋಷಿಸಿದರು.

Published On - 11:19 am, Thu, 12 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್