AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು

ಹಿಂದಿ ಬಿಗ್​ ಬಾಸ್​ನವರು ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಒಂದು ಕಾರಣವಿದೆ. ಈ ಬಾರಿ ಹಿಂದಿಯಲ್ಲಿ ಬಿಗ್​ ಬಾಸ್​ ಬೇರೆ ರೀತಿಯಲ್ಲಿ ಪ್ರಸಾರವಾಗಲಿದೆ. ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ.

ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು
ಬಿಗ್​ ಬಾಸ್
TV9 Web
| Edited By: |

Updated on:Jul 17, 2021 | 9:55 PM

Share

ಹಿಂದಿ, ಕನ್ನಡ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಯ ಪ್ರೇಕ್ಷಕರ ವರ್ಗದಲ್ಲಿ ಬಿಗ್​​ ಬಾಸ್​ಗೆ ಬೇಡಿಕೆ ಇದೆ. ಈ ಎಲ್ಲಾ ಭಾಷೆಗಳಲ್ಲಿ ವಾಹಿನಿಯವರು ವೀಕ್ಷಕರನ್ನು ಸೆಳೆಯಲು ಹೊಸಹೊಸ ಪ್ರಯೋಗ ಮಾಡುತ್ತಲೇ ಬರುತ್ತಿದ್ದಾರೆ. ಈಗ ಹಿಂದಿ ಬಿಗ್​ ಬಾಸ್​ ಸೀಸನ್​ 15ರ ಆರಂಭಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಈ ರಿಯಾಲಿಟಿ ಶೋನಲ್ಲಿ ಎರಡು ನಿರೂಪಕರು ಇರಲಿದ್ದಾರಂತೆ!

ಹಿಂದಿ ಬಿಗ್​ ಬಾಸ್​ನವರು ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಒಂದು ಕಾರಣವಿದೆ. ಈ ಬಾರಿ ಹಿಂದಿಯಲ್ಲಿ ಬಿಗ್​ ಬಾಸ್​ ಬೇರೆ ರೀತಿಯಲ್ಲಿ ಪ್ರಸಾರವಾಗಲಿದೆ. ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ.

ಟಿವಿಯಲ್ಲಿ ಪ್ರಸಾರವಾಗುವ ಶೋಅನ್ನು ಸಲ್ಮಾನ್​ ಖಾನ್​ ಅವರೇ ನಡೆಸಿಕೊಡಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆಯನ್ನು ವಾಹಿನಿ ಮಾಡುತ್ತಿಲ್ಲ. ಆದರೆ, ಒಟಿಟಿ ವರ್ಷನ್​ಗೆ ಬೇರೆ ನಿರೂಪಕರನ್ನು ಹುಡುಕಬೇಕು ಎನ್ನುವ ಆಲೋಚನೆ ವಾಹಿನಿಯದ್ದು. ಈಗಾಗಲೇ ಇಬ್ಬರನ್ನು ವಾಹಿನಿ ಫೈನಲ್​ ಮಾಡಿದೆ ಎನ್ನಲಾಗುತ್ತಿದೆ!

ಮೂಲಗಳ ಪ್ರಕಾರ ಸಿದ್ಧಾರ್ಥ್​ ಶುಕ್ಲಾ ಹಾಗೂ ಅವರ  ಪ್ರೇಯಸಿ ಶೆಹ್ನಾಜ್​ ಗಿಲ್​ ಒಟಿಟಿ ಅವತರಣಿಕೆಯಲ್ಲಿ ನಿರೂಪಣೆ ಮಾಡಲಿದ್ದಾರಂತೆ. ಇಬ್ಬರೂ ಹಿಂದಿ ಬಿಗ್​ ಬಾಸ್​ ಸೀಸನ್​ 13ರಲ್ಲಿ ಕಾಣಿಸಿಕೊಂಡಿದ್ದರು. ಇವರ ಫೇಮ್​ ದೊಡ್ಡಮಟ್ಟದಲ್ಲಿದೆ.  ಈ ಕಾರಣಕ್ಕೆ ಒಟಿಟಿ ನಿರೂಪಣೆಗೆ ಇವರನ್ನುಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ವಾಹಿನಿ ಇದೆ.

ಸಾಮಾನ್ಯವಾಗಿ ಬಿಗ್​ ಬಾಸ್ ಪ್ರತೀ ಸೀಸನ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಆದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ. ‘ಹಿಂದಿ ಬಿಗ್​ ಬಾಸ್​ ಸೀಸನ್ 14’ ಉತ್ತಮ ಟಿಆರ್​ಪಿ ತಂದುಕೊಟ್ಟಿತ್ತು. ಪ್ರೇಕ್ಷಕರು ಇದನ್ನು ಇಷ್ಟಪಟ್ಟಿದ್ದರು. ಈ ಕಾರಣಕ್ಕೆ ಈ ಸೀಸನ್​ 180 ದಿನಗಳ ಕಾಲ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು. ಇದು ತುಂಬಾನೇ ದೀರ್ಘ ಎನಿಸಿರುವುದರಿಂದ ಮೊದಲ ಆರು ವಾರ ಈ ಶೋ ಅನ್ನು ಒಟಿಟಿಯಲ್ಲಿ ಪ್ರಸಾರ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ದರ್ಶನ್​ ವಿಚಲಿತರಾಗಿದ್ದಾರೆ, ಅವರು ಚಿಕಿತ್ಸೆ ಪಡೆದುಕೊಳ್ಳಲಿ; ಇಂದ್ರಜಿತ್​ ಲಂಕೇಶ್​

Published On - 8:13 pm, Sat, 17 July 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ