AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಫ್​ಎಸ್​ಎಲ್ ಪರೀಕ್ಷೆ ಆಗಲಿ’: ಮಡೆನೂರು ಮನುವಿನ ಇನ್ನೊಂದು ಆಡಿಯೋ ಬಹಿರಂಗ

Madenuru Manu: ಅತ್ಯಾಚಾರ ಆರೋಪಿ ಮಡೆನೂರು ಮನು ಜೈಲುವಾಸ ಅನುಭವಿಸಿ ಇತ್ತೀಚೆಗಷ್ಟೆ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಮಡೆನೂರು ಮನುವಿನದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಶಿವಣ್ಣ, ದರ್ಶನ್, ಧ್ರುವ ಸರ್ಜಾ ಅಭಿಮಾನಿಗಳು ತೀವ್ರ ಸಿಟ್ಟಿನಲ್ಲಿದ್ದಾರೆ. ಆದರೆ ಆ ಆಡಿಯೋ ನನ್ನದಲ್ಲ ಎಂದು ಮನು ಹೇಳಿದ್ದಾರೆ. ಇದೀಗ ಅದೇ ಆಡಿಯೋದ ಮುಂದುವರೆದ ಭಾಗ ಬಿಡುಗಡೆ ಆಗಿದೆ.

‘ಎಫ್​ಎಸ್​ಎಲ್ ಪರೀಕ್ಷೆ ಆಗಲಿ’: ಮಡೆನೂರು ಮನುವಿನ ಇನ್ನೊಂದು ಆಡಿಯೋ ಬಹಿರಂಗ
Madenuru Manu
ಮಂಜುನಾಥ ಸಿ.
|

Updated on: Jun 08, 2025 | 9:47 PM

Share

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅತ್ಯಾಚಾರ ಆರೋಪದಲ್ಲಿ ಜೈಲು ಪಾಲಾಗಿ ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅತ್ಯಾಚಾರ ಆರೋಪದ ಬೆನ್ನಲ್ಲೆ ಮಡೆನೂರು ಮನುವಿನದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಆಡಿಯೋನಲ್ಲಿ ಮನು, ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಬಗ್ಗೆ ಅವಾಚ್ಯವಾಗಿ ಮಾತನಾಡಿರುವುದು ದಾಖಲಾಗಿದೆ. ಜಾಮೀನಿನ ಮೇಲೆ ಹೊರ ಬಂದ ಬಳಿಕ ಮಡೆನೂರು ಮನು, ಆ ಆಡಿಯೋ ನಂದಲ್ಲ ಎಂದಿದ್ದರು. ಇದೀಗ ಮಡೆನೂರು ಮನುವಿನ ಮೇಲೆ ಆರೋಪ ಮಾಡಿದ ಯುವತಿ, ಮನುವಿನದ್ದು ಎನ್ನಲಾದ ಆಡಿಯೋನ ಪೂರ್ಣಭಾಗವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಬಿಡುಗಡೆ ಆಗಿದ್ದ ಆಡಿಯೋನಲ್ಲಿ ಮನು, ಶಿವರಾಜ್ ಕುಮಾರ್ ಸತ್ತು ಹೋಗ್ತಾರೆ, ದರ್ಶನ್ ಈಗಾಗಲೇ ಸತ್ತು ಹೋಗಿದ್ದಾನೆ, ಧ್ರುವ ಇನ್ನೊಂದೆರಡು ವರ್ಷ, ಇವರ ಮಧ್ಯೆ ನಾನು ಎಲ್ಲರಿಗೂ ಫೈಟ್ ಕೊಡುತ್ತಿರುವ ಗಂಡುಗಲಿ ಎಂದಿದ್ದ. ಇದೀಗ ಬಿಡುಗಡೆ ಆಗಿರುವ ಆಡಿಯೋನಲ್ಲಿ ನಾನು ಮಹಿಳೆಯೊಬ್ಬಳಿಗೆ ಮೋಸ ಮಾಡಿದ್ದೀನಿ, ಅದನ್ನು ಮರೆಯಲು ಕುಡಿಯುತ್ತಿದ್ದೀನಿ ಎಂದಿದ್ದಾನೆ. ಅದೇ ಆಡಿಯೋನಲ್ಲಿ ಮಹಿಳೆಯೊಬ್ಬರ ದನಿಯೂ ಇದೆ.

ಇದನ್ನೂ ಓದಿ:ಅತ್ಯಾಚಾರ ಪ್ರಕರಣದ ಆರೋಪಿ ನಟ ಮಡೆನೂರು ಮನುಗೆ ಜಾಮೀನು ಮಂಜೂರು

ಆಡಿಯೋ ಬಿಡುಗಡೆ ಮಾಡಿರುವ ಯುವತಿ, ‘ಬರೀ ಸುಳ್ಳು , ನಂಬಿಕೆ ದ್ರೋಹ, ಅಹಂಕಾರ, ದೌರ್ಜನ್ಯ. ಸತ್ಯನ ನಂಬಿರೋರಿಗೆ ದೇವರೇ ಕಾವಲು ಅಷ್ಟೇ. ತುಂಬಾ ಜನ ಇವನ ಧ್ವನಿ ಅಲ್ಲ ಅಂತ ಅನ್ಕೊಳ್ತಿರುವವರು ಧ್ವನಿ ಪರೀಕ್ಷೆ ಮಾಡಿಸಿ FSL ಗೆ ಕಳುಹಿಸಿ ಯಾವ ದಿನ ಯಾವ ಟೈಮ್ ಎಲ್ಲಿ ಎಂದು ಪರೀಕ್ಷೆಯಾಗಲಿ, ಎಷ್ಟೋ ದಾಖಲೆಗಳನ್ನು ಸೋಶಿಯಲ್ ಮೀಡಿಯಾಗೆ ಬಿಟ್ಟಿಲ್ಲ ಅಂದರೆ ಅದಕ್ಕೆ ಕಾರಣ ಅವನ ಹೊಲಸು ಮಾತುಗಳು ಬಟ್ ಇದು ಅವನ ಮಾತುಗಳಲ್ಲ ಅನ್ನೋ ಸಂದೇಹ ಬಂದಿರುವ ಕಾರಣದಿಂದ ಅದರ ಕಂಟಿನ್ಯೂಏಷನ್ ಬಿಟ್ಟಿದ್ದೀನಿ ಹೆಚ್ಚು ಮಾಹಿತಿ ಇನ್ನೂ ಬೇಕು ಅಂದರೆ ಅದು ಪರೀಕ್ಷೆಯಾಗಲಿ ಗೊತ್ತಾಗುತ್ತೆ ಎಷ್ಟು ನಾಟಕಗಳನ್ನು ಆಡಿ ನನಗೆ ಮೋಸ ಮಾಡಿದ್ದಾನೆ ಎಂದು ಗೊತ್ತಾಗಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಮಡೆನೂರು ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಿದ್ದಾಗ ಅವನೊಟ್ಟಿಗೆ ರಿಯಾಲಿಟಿ ಶೋನಲ್ಲಿ ಸಹನಟಿಯಾಗಿದ್ದ ಯುವತಿಯೊಬ್ಬರು ಅತ್ಯಾಚಾರ ಆರೋಪ ಮಾಡಿದರು. ಅತ್ಯಾಚಾರ, ಕೊಲೆ ಬೆದರಿಕೆ, ದೌರ್ಜನ್ಯ ಪ್ರಕರಣಗಳು ಮನುವಿನ ಮೇಲೆ ದಾಖಲಾಗಿ, ಆತನ ಬಂಧನವೂ ಆಯ್ತು. ಕೆಲ ದಿನದ ಹಿಂದಷ್ಟೆ ಮನು, ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದು, ಇದೀಗ ಆತನ ಮೇಲೆ ಆರೋಪವನ್ನು ಸಂತ್ರಸ್ತೆ ಮುಂದುವರೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!