AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ದುನಿಯಾ ವಿಜಯ್ ಮೇಲೆ ಹಲ್ಲೆ ಪ್ರಕರಣ; ಪಾನಿಪುರಿ ಕಿಟ್ಟಿ ವಿರುದ್ಧ ಹೊಸ ಎಫ್​ಐಆರ್​

FIR on Panipuri Kitty: 2018ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುನಿಯಾ ವಿಜಯ್​ ಅವರು ಪ್ರತಿದೂರು ನೀಡಿದ್ದಾರೆ. ಕೋರ್ಟ್​ ಆದೇಶದ ಮೇರೆಗೆ ಹೊಸದಾಗಿ ಎಫ್​ಐಆರ್​ ದಾಖಲಿಸಲಾಗಿದೆ.

Duniya Vijay: ದುನಿಯಾ ವಿಜಯ್ ಮೇಲೆ ಹಲ್ಲೆ ಪ್ರಕರಣ; ಪಾನಿಪುರಿ ಕಿಟ್ಟಿ ವಿರುದ್ಧ ಹೊಸ ಎಫ್​ಐಆರ್​
ಪಾನಿಪುರಿ ಕಿಟ್ಟಿ, ದುನಿಯಾ ವಿಜಯ್
TV9 Web
| Edited By: |

Updated on:Dec 13, 2022 | 3:15 PM

Share

ನಟ ದುನಿಯಾ ವಿಜಯ್​ ಮತ್ತು ಪಾನಿಪುರಿ ಕಿಟ್ಟಿ (Panipuri Kitty) ನಡುವಿನ ಕಿರಿಕ್​ ಈಗ ಹೊಸ ತಿರುವು ಪಡೆದುಕೊಂಡಿದೆ. 2018ರಲ್ಲಿ ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆದಿತ್ತು. ಈ ವೇಳೆ ದುನಿಯಾ ವಿಜಯ್​ ಮಗನ ಮೇಲೆ ಪಾನಿಪುರಿ ಕಿಟ್ಟಿ ತಂಡದವರು ಹಲ್ಲೆ ಮಾಡಿದ್ದರು ಎಂಬ ಆರೋಪ ಎದುರಾಗಿತ್ತು. ನಂತರ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ದುನಿಯಾ ವಿಜಯ್​ (Duniya Vijay) ಹಲ್ಲೆ ಮಾಡಿದ್ದರು ಎಂದು ದೂರು ದಾಖಲಾಗಿತ್ತು. ಸಾಕ್ಷ್ಯದ ಕೊರತೆಯಿಂದ ಪ್ರಕರಣ ಕ್ಲೋಸ್​ ಆಗಿತ್ತು. ಆದರೆ ಈಗ ದುನಿಯಾ ವಿಜಯ್​ ಅವರು ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ದಾಖಲಿಸಿದ್ದಾರೆ. ಕೋರ್ಟ್​ ಆದೇಶದ ಮೇರೆಗೆ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್​ಐಆರ್​ (FIR) ದಾಖಲಿಸಲಾಗಿದೆ.

ಪಾನಿಪುರಿ ಕಿಟ್ಟಿ ಪ್ರತಿಕ್ರಿಯೆ:

ಹೊಸದಾಗಿ ಎಫ್​ಐಆರ್​ ದಾಖಲಾಗಿರುವುದಕ್ಕೆ ಪಾನಿಪುರಿ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ಹಿಂದೆ ಕೂಡ ನ್ಯಾಯಾಲಕ್ಕೆ ಹೋಗಿದ್ದೆವು. ಈಗ ಮತ್ತೆ ಎಫ್​ಐಆರ್​ ಆಗಿದೆ. ಕೋರ್ಟ್​ನಲ್ಲಿ ನಮಗೆ ನಂಬಿಕೆ ಇದೆ. ಅಲ್ಲಿ ಯಾವ ರೀತಿಯ ತೀರ್ಪು ಬರುತ್ತೋ ಅದರಂತೆ ನಡೆದುಕೊಳ್ಳುತ್ತೇವೆ’ ಎಂದು ಪಾನಿಪುರಿ ಕಿಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
Duniya Vijay: ‘ಭೀಮ’ ಸೆಟ್​ಗೆ ಭೇಟಿ ನೀಡಿ ದುನಿಯಾ ವಿಜಯ್​ಗೆ ವಿಶ್​ ಮಾಡಿದ ಶಿವಣ್ಣ-ಗೀತಾ ದಂಪತಿ
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಚಿತ್ರಕ್ಕೆ ಸಿಕ್ತು ಚಾಲನೆ; ಸೆಲೆಬ್ರಿಟಿಗಳ ಸಾಥ್
Image
ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

ಇದನ್ನೂ ಓದಿ: ಆಟೋದಲ್ಲಿ ಪ್ರಯಾಣಿಸಿದ ನಟ ದುನಿಯಾ ವಿಜಯ್; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ

ರಾಜಿ ಆಗಲು ಸಿದ್ಧವಿಲ್ಲ:

ಹಳೇ ಪ್ರಕರಣ ಆಗಿದ್ದರಿಂದ ರಾಜಿ ಮಾಡಿಕೊಳ್ಳುತ್ತಾರಾ ಎಂಬ ಪ್ರಶ್ನೆ ಎದುರಾಗುವುದು ಸಹಜ. ಆದರೆ ರಾಜಿ ಆಗಲು ಸಾಧ್ಯವಿಲ್ಲ ಎಂದು ಪಾನಿಪುರಿ ಕಿಟ್ಟಿ ಹೇಳಿದ್ದಾರೆ. ‘ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಸರಿ ಮಾಡಿರುವವರಿಗೆ ಒಳ್ಳೆಯದು ಆಗಲೇಬೇಕು. ಕೋರ್ಟ್​ ಏನು ಹೇಳುತ್ತೋ ಅದರಂತೆ ನಡೆದುಕೊಳ್ಳುತ್ತೇವೆ. ಯಾರೂ ಕೂಡ ನಮ್ಮನ್ನು ರಾಜಿಗೆ ಕರೆದಿಲ್ಲ. ಕರೆದರೂ ನಾವು ರಾಜಿಗೆ ಹೋಗುವುದಿಲ್ಲ’ ಎಂದಿದ್ದಾರೆ ಪಾನಿ ಪುರಿ ಕಿಟ್ಟಿ.

ಇದನ್ನೂ ಓದಿ: Duniya Vijay: ‘ಭೀಮ’ ಸೆಟ್​ಗೆ ಭೇಟಿ ನೀಡಿ ದುನಿಯಾ ವಿಜಯ್​ಗೆ ವಿಶ್​ ಮಾಡಿದ ಶಿವಣ್ಣ-ಗೀತಾ ದಂಪತಿ

ಹೈದರಾಬಾದ್​ನಲ್ಲಿ ದುನಿಯಾ ವಿಜಯ್​:

ಸಿನಿಮಾ ಕೆಲಸಗಳ ಸಲುವಾಗಿ ದುನಿಯಾ ವಿಜಯ್​ ಅವರು ಹೈದರಾಬಾದ್​ನಲ್ಲಿ ಇದ್ದಾರೆ. ಹೊಸ ಎಫ್​ಐಆರ್​ ಕುರಿತಂತೆ ಅವರ ಕಡೆಯಿಂದ ಸ್ಯದಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ. ತೆಲುಗಿನ ‘ವೀರ ಸಿಂಹ ರೆಡ್ಡಿ’ ಚಿತ್ರದಲ್ಲಿ ದುನಿಯಾ ವಿಜಯ್​ ಅವರು ನಂದಮೂರಿ ಬಾಲಕೃಷ್ಣ ಜೊತೆ ನಟಿಸಿದ್ದಾರೆ. ಈ ಚಿತ್ರ 2023ರ ಜನವರಿ 12ರಂದು ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:50 pm, Tue, 13 December 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ