AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 24ಕ್ಕೆ ಬಿಡುಗಡೆ ಆಗಲಿದೆ ‘ಎಲೆಕ್ಟ್ರಾನಿಕ್​ ಸಿಟಿ’ ಸಿನಿಮಾ; ಇದು ಐಟಿ ಜನರ ಕಹಾನಿ

ಮಹಾನಗರ ಬೆಂಗಳೂರಿನಲ್ಲಿ ಲೆಕ್ಕವಿಲ್ಲದಷ್ಟು ಐಟಿ ಕಂಪನಿಗಳು ಕಾರ್ಯನಿರತವಾಗಿವೆ. ಲಕ್ಷಾಂತರ ಜನರಿಗೆ ಇದರಿಂದ ಉದ್ಯೋಗ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿ ಭಾಗದಲ್ಲಿ ಅನೇಕ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಕೆಲಸ ಮಾಡುವ ಐಟಿ ಉದ್ಯೋಗಿಗಳ ಕಥೆಯನ್ನೇ ಇಟ್ಟುಕೊಂಡು ‘ಎಲೆಕ್ಟ್ರಾನಿಕ್​ ಸಿಟಿ’ ಸಿನಿಮಾ ಮಾಡಲಾಗಿದೆ.

ನವೆಂಬರ್ 24ಕ್ಕೆ ಬಿಡುಗಡೆ ಆಗಲಿದೆ ‘ಎಲೆಕ್ಟ್ರಾನಿಕ್​ ಸಿಟಿ’ ಸಿನಿಮಾ; ಇದು ಐಟಿ ಜನರ ಕಹಾನಿ
‘ಎಲೆಕ್ಟ್ರಾನಿಕ್ ಸಿಟಿ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Nov 22, 2023 | 12:13 PM

Share

ಕನ್ನಡ ಚಿತ್ರರಂಗದಲ್ಲಿ (Sandalwood) ಸಿನಿಮಾಗಳ ಶೀರ್ಷಿಕೆಗಳ ಮೂಲಕ ಹಲವು ಪ್ರಯೋಗಗಳು ನಡೆದಿವೆ. ಬೆಂಗಳೂರಿನ ಪ್ರಮುಖ ಏರಿಯಾಗಳ ಹೆಸರನ್ನು ಇಟ್ಟುಕೊಂಡು ಬಂದ ಸಿನಿಮಾಗಳು ಸಾಕಷ್ಟಿವೆ. ‘ಮೆಜೆಸ್ಟಿಕ್​’, ‘ಕಲಾಸಿಪಾಳ್ಯ’, ‘ಜಯನಗರ 4ನೇ ಬ್ಲಾಕ್​’.. ಹೀಗೆ ಡಿಫರೆಂಟ್​ ಪ್ರಯತ್ನಗಳಾಗಿವೆ. ಈಗ ಇನ್ನೊಂದು ಏರಿಯಾದ ಹೆಸರು ಕನ್ನಡ ಚಿತ್ರಕ್ಕೆ ಶೀರ್ಷಿಕೆ ಆಗಿದೆ. ಎಲೆಕ್ಟ್ರಾನಿಕ್​ ಸಿಟಿ’ (Electronic City) ಎಂಬುದೇ ಆ ಸಿನಿಮಾ. ಶೀರ್ಷಿಕೆ ನೋಡಿದ ತಕ್ಷಣ ಈ ಸಿನಿಮಾದ ಕಹಾನಿ ಏನು ಎಂಬುದನ್ನು ಊಹಿಸಬಹುದು. ಹೌದು, ಐಟಿ ಮಂದಿಯ ಕಥೆ ಈ ಸಿನಿಮಾದಲ್ಲಿದೆ. ಈ ಚಿತ್ರ ನವೆಂಬರ್​ 24ರಂದು ಬಿಡುಗಡೆ ಆಗುತ್ತಿದೆ.

ಮಹಾನಗರ ಬೆಂಗಳೂರಿನಲ್ಲಿ ಲೆಕ್ಕವಿಲ್ಲದಷ್ಟು ಐಟಿ ಕಂಪನಿಗಳು ಕಾರ್ಯನಿರತವಾಗಿವೆ. ಲಕ್ಷಾಂತರ ಜನರಿಗೆ ಇದರಿಂದ ಉದ್ಯೋಗ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿ ಭಾಗದಲ್ಲೂ ಅನೇಕ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಇದೊಂದು ಪ್ರತಿಷ್ಠಿತ ಏರಿಯಾ. ಇಲ್ಲಿ ಕೆಲಸ ಮಾಡುವ ಐಟಿ ಉದ್ಯೋಗಿಗಳ ಕಥೆಯನ್ನೇ ಇಟ್ಟುಕೊಂಡು ‘ಎಲೆಕ್ಟ್ರಾನಿಕ್​ ಸಿಟಿ’ ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಯಿತು. ಶಿಕ್ಷಣ ತಜ್ಞ ಕೃಷ್ಣ, ಕೆಪಿಸಿಸಿ ಜನರಲ್ ಸೆಕ್ರೆಟರಿ ಶಿವಣ್ಣ, ನಿರ್ದೇಶಕ ಲಿಂಗದೇವರು ಅವರು ಮುಖ್ಯ ಅತಿಥಿಗಳಾಗಿ ಬಂದು ಟ್ರೇಲರ್ ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ‘ಫಸ್ಟ್ ನೈಟ್ ವಿತ್ ದೆವ್ವ’ ಸಿನಿಮಾಗೆ ಪ್ರಥಮ್​ ಹೀರೋ; ಬೆಂಗಳೂರಿನಲ್ಲಿ ಶುರುವಾಯ್ತು ಶೂಟಿಂಗ್​

‘ಎಲೆಕ್ಟ್ರಾನಿಕ್ ಸಿಟಿ’ ಸಿನಿಮಾವನ್ನು ಆರ್. ಚಿಕ್ಕಣ್ಣ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. ‘ನಾನು 16 ವರ್ಷಗಳಿಂದ ಐಟಿ ಕ್ಷೇತ್ರದಲ್ಲಿದ್ದೇನೆ‌. ಈ ಕ್ಷೇತ್ರದ ಉದ್ಯೋಗಿಗಳ ಜೀವನದ ಬಗ್ಗೆ ಸಿನಿಮಾ ಮಾಡುವ ಆಸೆ ಉಂಟಾಯಿತು‌. 5 ವರ್ಷದ ಹಿಂದೆ ಈ ಕಥೆ ಬರೆದಕೊಂಡೆ. ಚಿತ್ರರಂಗದ ಹಲವರ ಬಳಿ ಈ ಕಥೆಯ ಕುರಿತು ಚರ್ಚಿಸಿದೆ. 2021ರಲ್ಲಿ ಶೂಟಿಂಗ್​ ಆರಂಭ ಮಾಡಿದೆ‌’ ಎಂದು ಚಿಕ್ಕಣ್ಣ ಹೇಳಿದ್ದಾರೆ,

ಇದನ್ನೂ ಓದಿ: ಅಭಿಷೇಕ್​ ಅಂಬರೀಷ್​ ನಟನೆಯ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ನೋಡಿ 5ಕ್ಕೆ 5 ಸ್ಟಾರ್ ನೀಡಿದ ದರ್ಶನ್​

‘2022ರಲ್ಲಿ ಸಿನಿಮಾ ಸಿದ್ಧವಾಯಿತು. ಇಲ್ಲಿಯವರೆಗೆ 42ಕ್ಕೂ ಹೆಚ್ಚು ಚಿತ್ರೋತ್ಸವಗಳಲ್ಲಿ ಆಯ್ಕೆ ಆಗಿದೆ. 30ಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿದೆ’ ಎಂದು ‘ಎಲೆಕ್ಟ್ರಾನಿಕ್​ ಸಿಟಿ’ ಚಿತ್ರತಂಡದವರು ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಆರ್ಯನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿದ್ದಾರೆ. ‘ಈ ಸಿನಿಮಾದಲ್ಲಿ ನಾನು ಐಟಿ ಉದ್ಯೋಗಿಯ ಪಾತ್ರ ಮಾಡಿದ್ದೇನೆ. ಚಿಕ್ಕಣ್ಣ ಅವರ ಡೈರೆಕ್ಷನ್​ನಲ್ಲಿ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರದಿಂದ ನನಗೆ ‘ಘೋಸ್ಟ್’ ಸಿನಿಮಾದಲ್ಲಿ ಅಭಿನಯಿಸುವ ಚಾನ್ಸ್​ ಸಿಕ್ಕಿತು’ ಎಂದು ಆರ್ಯನ್ ಶೆಟ್ಟಿ ಹೇಳಿದ್ದಾರೆ. ದಿಯಾ ಆಶ್ಲೇಶಾ, ರಕ್ಷಿತಾ ಕೆರೆಮನೆ, ರಶ್ಮಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಕಲಾ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ