AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಪರೇಶನ್​ ಡಿ’ ಸಿನಿಮಾಕ್ಕೆ ವಿಎಫ್​ಎಕ್ಸ್​ ಕಾರ್ಯ ಆರಂಭ; ಶೀಘ್ರದಲ್ಲೇ ಬರಲಿದೆ ಟ್ರೇಲರ್​

‘ಆಪರೇಶನ್​ ಡಿ’ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ವೇದಿಕಾ ಹಾಗೂ ದ್ವೈಪಾಯನ‌ ಸಿಂಗ್ ಅವರು ಸಂಗೀತ ನೀಡಿದ್ದಾರೆ. ಈ ಚಿತ್ರಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕಾರ್ಯ ಪ್ರಗತಿಯಲ್ಲಿದೆ.

‘ಆಪರೇಶನ್​ ಡಿ’ ಸಿನಿಮಾಕ್ಕೆ ವಿಎಫ್​ಎಕ್ಸ್​ ಕಾರ್ಯ ಆರಂಭ; ಶೀಘ್ರದಲ್ಲೇ ಬರಲಿದೆ ಟ್ರೇಲರ್​
ಆಪರೇಷನ್ ಡಿ ಸ್ಟಿಲ್​
ಮದನ್​ ಕುಮಾರ್​
|

Updated on: May 19, 2023 | 7:54 PM

Share

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ. ಅವರು ನಿರ್ಮಿಸಿರುವ ‘ಆಪರೇಶನ್ ಡಿ’ (Operation D) ಚಿತ್ರಕ್ಕೆ ಡಬ್ಬಿಂಗ್ ಕೆಲಸ ಮುಗಿದಿದೆ. ಸಂಗೀತ ಸಂಯೋಜನೆ ಕಾರ್ಯವೂ ಪೂರ್ಣಗೊಂಡಿದೆ. ಈಗ VFX ಕೆಲಸ ಆರಂಭವಾಗಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ (Kannada Movies) ನಟಿಸಿದ್ದ ತಿರುಮಲೇಶ್ ವಿ. ಅವರು ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಹಾಗೂ ಕ್ರಿಯೇಟಿವ್ ಹೆಡ್ ಆಗಿ ಸುರೇಶ್ .ಬಿ. ಕಾರ್ಯ ನಿರ್ವಹಿಸಿದ್ದಾರೆ. ತಿರಮಲೇಶ್ ಅವರು ರಾಜ ರವಿಶಂಕರ್, ಸಿದ್ದರಾಜು, ಪ್ರಶಾಂತ್ ಜೊತೆಗೂಡಿ ಸಂಭಾಷಣೆ ಬರೆದಿದ್ದಾರೆ.

ವೇದಿಕಾ ಹಾಗೂ ದ್ವೈಪಾಯನ‌ ಸಿಂಗ್ ಅವರು ‘ಆಪರೇಶನ್​ ಡಿ’ ಸಿನಿಮಾದ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಕೆಂಪಗಿರಿ ಒಂದು ಹಾಡು ಹಾಗೂ ವೇದಿಕಾ ಅವರು ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದಾರೆ. ಅನಿರುದ್ಧ್ ಶಾಸ್ತ್ರಿ ಮೊದಲ ಬಾರಿಗೆ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ವೇದಿಕಾ ಹಾಗೂ ಪೃಥ್ವಿ ಭಟ್ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: Richiee Movie Song: ‘ರಿಚ್ಚಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಬಂದ ಕುನಾಲ್​ ಗಾಂಜಾವಾಲ

ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರದ ನೃತ್ಯ ನಿರ್ದೇಶಕರು. ಸುಹಾಸ್ ಆತ್ರೇಯ, ರುದ್ರೇಶ್ ಬೂದನೂರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರಾ ಬಿ. ಚನ್ನಪ್ಪ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ಮಹೇಶ್ ಎಸ್. ಕಲಿ, ರಂಗನಾಥ ಬಿ., ಶ್ರೀಧರ್ ಟಿ.ಎಸ್., ಸುರೇಶ್ ಬಿ., ಸಂಚಯ ನಾಗರಾಜ್, ಕಿರಣ್ ಈಡಿಗ, ರವಿಶಂಕರ್, ಶಿವಾನಂದ, ಸೂರ್ಯವಂಶಿ, ನಂಜಪ್ಪ ಎಸ್. ದೊಡ್ಡಮದುರೆ ಆರ್.ಜೆ. ಧೀರಜ್, ಪೃಥ್ವಿ ಬನವಾಸಿ, ಆಶಾ, ರೂಪಾ ಆರ್, ಧನಲಕ್ಷ್ಮೀ, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್, ನಾಗರಾಜ್ ಕೀಲಗೆರೆ, ಖಾದರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ