ಕನ್ನಡದಲ್ಲಿ ಹೊಸ ಸಿನಿಮಾ ‘ಯಾಕೆ’; ತೆಲುಗಿನಲ್ಲಿ ‘ಸಂಸ್ಥಾನಂ’

ಶೀಘ್ರದಲ್ಲೇ ಶೂಟಿಂಗ್ ಆರಂಭಿಸಲಿರುವ ‘ಯಾಕೆ’ ಸಿನಿಮಾಗೆ ಸೀತಾ ಹರ್ಷವರ್ಧನ್ ನಿರ್ಮಾಣ, ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ಲಾಂಚ್ ಮಾಡಲಾಗಿದೆ. ಈ ಸಮಾರಂಭಕ್ಕೆ ‘ಒರಟ’ ಪ್ರಶಾಂತ್, ಟಿ.ಪಿ. ಸಿದ್ದರಾಜು, ಶ್ರೀನಗರ ಕಿಟ್ಟಿ, ಅಂಬುಜಾ ಸೇರಿದಂತೆ ಹಲವರು ಬಂದು ವಿಶ್ ಮಾಡಿದ್ದಾರೆ. ತೆಲುಗಿನಲ್ಲೂ ಈ ಚಿತ್ರ ನಿರ್ಮಾಣ ಆಗಲಿದೆ.

ಕನ್ನಡದಲ್ಲಿ ಹೊಸ ಸಿನಿಮಾ ‘ಯಾಕೆ’; ತೆಲುಗಿನಲ್ಲಿ ‘ಸಂಸ್ಥಾನಂ’
‘ಯಾಕೆ’ ಸಿನಿಮಾ ತಂಡ
Follow us
|

Updated on: Oct 21, 2024 | 4:49 PM

ಚಿತ್ರರಂಗದಲ್ಲಿ ಭಾಷೆಗಳ ನಡುವೆ ಗಡಿ ಸಣ್ಣದಾಗಿದೆ. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಚಾಲ್ತಿಗೆ ಬಂದ ಬಳಿಕ ಅಂಥ ಪ್ರಯತ್ನಗಳು ಜಾಸ್ತಿ ಆಗಿವೆ. ಈಗ ಕನ್ನಡ ಮತ್ತು ತೆಲುಗಿನಲ್ಲಿ ಒಂದು ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಚಿತ್ರಕ್ಕೆ ಕನ್ನಡದಲ್ಲಿ ‘ಯಾಕೆ’ ಎಂದು ಶೀರ್ಷಿಕೆ ಇಡಲಾಗಿದೆ. ತೆಲುಗಿನಲ್ಲಿ ಇದೇ ಸಿನಿಮಾಗೆ ‘ಸಂಸ್ಥಾನಂ’ ಎಂದು ಟೈಟಲ್ ಇಡಲಾಗಿದೆ. ಪ್ರೇಮ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸೀತಾ ಹರ್ಷವರ್ಧನ್ ಅವರು ಎರಡೂ ಭಾಷೆಗಳಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು.

ಶೀರ್ಷಿಕೆ ಅನಾವರಣದ ಜೊತೆ ‘ಸಿರಿ ಸಿನಿಮಾಸ್’ ಪ್ರೊಡಕ್ಷನ್ ಹೌಸ್ ಉದ್ಘಾಟನೆ ಕೂಡ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಈ ಕಾರ್ಯಕ್ರಮ ಮಾಡಲಾಯಿತು. ಒರಟ ಪ್ರಶಾಂತ್, ನಿರ್ಮಾಪಕ ಟಿಪಿ ಸಿದ್ದರಾಜು, ಶ್ರೀನಗರ ಕಿಟ್ಟಿ, ಅಂಬುಜಾ ಮುಂತಾದವರು ಬಂದು ಟೈಟಲ್​ ಅನಾವರಣ ಮಾಡಿದರು. ಅಲ್ಲದೇ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್​ ಎಂದರು.

ಕಾರ್ಯಕ್ರಮದಲ್ಲಿ ನಿರ್ಮಾಪಕಿ ಸೀತಾ ಹರ್ಷವರ್ಧನ್ ಅವರು ಮಾತನಾಡಿದರು. ‘ನಾನು ಕನ್ನಡದ ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದೇನೆ. ತೆಲುಗು ಸೀರಿಯಲ್​ಗಳಲ್ಲೂ ನಟಿಸಿದ್ದೇನೆ. ನಿರ್ದೇಶಕ ಪ್ರೇಮ್ ಅವರು ಒಮ್ಮೆ ಹೇಳಿದ ಈ ಕಥೆ ನನಗೆ ಇಷ್ಟವಾಯ್ತು. ಆದ್ದರಿಂದ ನಿರ್ಮಾಣ ಮಾಡಲು ಮುಂದಾಗಿದ್ದೇನೆ. ನಮ್ಮ ಪ್ರಯತ್ನಕ್ಕೆ ಅಮೇಜಾನ್ ಮತ್ತು ಹೈದರಾಬಾದ್​ನ ಖುಷಿ ಸಿನಿಮಾ ಸಂಸ್ಥೆ ಸಾಥ್ ನೀಡಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ:  ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚು ದಿನ ನಡೆಯಲ್ಲ: ಹೀಗೆಂದರೇಕೆ ಅಲ್ಲು ಅರ್ಜುನ್ ತಂದೆ

ನವೆಂಬರ್​ನಲ್ಲಿ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. 2025ರ ಏಪ್ರಿಲ್​ ತಿಂಗಳಲ್ಲಿ ಬಿಡುಗಡೆ ಮಾಡಬೇಕು ಎಂದು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ‘ಯಾಕೆ’ ಸಿನಿಮಾದ ಡೈರೆಕ್ಟರ್ ಪ್ರೇಮ್ ಮಾತನಾಡಿ, ‘ಕನ್ನಡದಲ್ಲಿ ಇದು ನನ್ನ ಮೊದಲ ಸಿನಿಮಾ. ಇದರಲ್ಲಿ ಉತ್ತಮವಾದ ಕಥಾವಸ್ತು ಇದೆ. ಅದು ಎಲ್ಲರಿಗೂ ಇಷ್ಟ ಆಗುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು. ಈ ವೇಳೆ ‘ಖುಷಿ ಸಿನಿಮಾಸ್’ ಸಂಸ್ಥೆಯ ಪಾಲುದಾರರು ಈ ಪ್ರಾಜೆಕ್ಟ್ ಬಗ್ಗೆ ಮಾಹಿತಿ ಹಂಚಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ