AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಬರ್ತಿದೆ ‘ಧಮ್​’ ಸಿನಿಮಾ; ಅಂದು ಸುದೀಪ್​, ಇಂದು ಹೊಸಬರು

Dhum Kannada Movie: ‘ಧಮ್​’ ಸಿನಿಮಾಗೆ ಶ್ರೀಜಿತ್ ಹೀರೋ ಆಗಿದ್ದಾರೆ. ಅವರ ಜೊತೆ ನಟಿ ಎರೀನ್​ ಅಧಿಕಾರಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟ್ರೇಲರ್​ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ.

ಮತ್ತೊಮ್ಮೆ ಬರ್ತಿದೆ ‘ಧಮ್​’ ಸಿನಿಮಾ; ಅಂದು ಸುದೀಪ್​, ಇಂದು ಹೊಸಬರು
ಶ್ರೀಜಿತ್, ಎರೀನ್ ಅಧಿಕಾರಿ
TV9 Web
| Edited By: |

Updated on: Aug 11, 2022 | 7:15 AM

Share

2002ರಲ್ಲಿ ಕಿಚ್ಚ ಸುದೀಪ್ (Kichcha Sudeep)​ ನಟನೆಯ ‘ಧಮ್​’ ಸಿನಿಮಾ ನೋಡಿ ಅಭಿಮಾನಿಗಳು ಎಂಜಾಯ್​ ಮಾಡಿದ್ದರು. ಈಗ ಮತ್ತೆ ಅದೇ ಹೆಸರಿನಲ್ಲಿ ಇನ್ನೊಂದು ಸಿನಿಮಾ ಬರುತ್ತಿದೆ. ಆದರೆ ಈ ಚಿತ್ರಕ್ಕೆ ಸುದೀಪ್​ ಹೀರೋ ಅಲ್ಲ. ಬದಲಿಗೆ ಹೊಸಬರ ತಂಡ ಈ ಸಿನಿಮಾ ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪ್ರತಿಭಾವಂತ ನಟ ಸಂಚಾರಿ ವಿಜಯ್​  (Sanchari Vijay) ಅವರು ಈ ಸಿನಿಮಾಗೆ ಹೀರೋ ಆಗಬೇಕಿತ್ತು. ಆದರೆ ಅವರ ನಿಧನದಿಂದ ಅದು ಸಾಧ್ಯವಾಗಲಿಲ್ಲ. ಈಗ ಈ ಹೊಸ ‘ಧಮ್​’ ಸಿನಿಮಾಗೆ ಶ್ರೀಜಿತ್​ ಅವರು ನಾಯಕನಾಗಿ ನಟಿಸಿದ್ದಾರೆ. ವಿಆರ್​ಆರ್​ ಅವರು ನಿರ್ದೇಶನ ಮಾಡಿದ್ದಾರೆ. ಶ್ರೀಜಿತ್​ಗೆ ಜೋಡಿಯಾಗಿ ಎರೀನ್​ ಅಧಿಕಾರಿ ನಟಿಸಿದ್ದಾರೆ. ಟ್ರೇಲರ್​ ಮತ್ತು ಹಾಡುಗಳ ಮೂಲಕ ‘ಧಮ್​’ ಸಿನಿಮಾ (Dhum Kannada Movie) ಗಮನ ಸೆಳೆಯುತ್ತಿದೆ. ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

‘ಧಮ್​’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಹಾಗೂ ನಟ, ನಿರ್ದೇಶಕ ರವಿಕಿರಣ್ ಮುಖ್ಯ ಅತಿಥಿಗಳಾಗಿ ಬಂದು ಶುಭ ಹಾರೈಸಿದ್ದಾರೆ. ‘ವಿಆರ್​ಆರ್ ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದಕ್ಕೆ ಖುಷಿ ಇದೆ. ನಾನು ಈ ಮೊದಲು ‘ರಂಗ್ ಬಿ ರಂಗಿ’ ಚಿತ್ರದಲ್ಲಿ ಹೀರೋ ಆಗಿದ್ದೆ. ಇದು ನನ್ನ 2ನೇ ಸಿನಿಮಾ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಸೇರಿದಂತೆ ಎಲ್ಲ ಅಂಶಗಳು ನಮ್ಮ ಸಿನಿಮಾದಲ್ಲಿ ಇವೆ’ ಎಂದು ಶ್ರೀಜಿತ್​ ಹೇಳಿದ್ದಾರೆ.

‘ಧಮ್​’ ಚಿತ್ರದ ನಾಯಕಿ ಎರೀನ್ ಅಧಿಕಾರಿ ಮೂಲತಃ ಬಂಗಾಳದವರು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಕನ್ನಡದಲ್ಲಿ ಇದು ಅವರಿಗೆ ಮೊದಲ ಚಿತ್ರ. ಈ ಸಿನಿಮಾ ಕನ್ನಡ ಮತ್ತು ತಮಿಳಿನಲ್ಲಿ ಮೂಡಿಬರುತ್ತಿದೆ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್  ಮುಂತಾದವರು ನಟಿಸಿದ್ದಾರೆ. ರಿಹಾನ್ ಅಹಮದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜೀವ ವರ್ಷಿಣಿ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ
Image
Rachita Ram: ಡಾಲಿ ಧನಂಜಯ್​ ಅಣ್ಣನ ಮಗಳಿಗೆ ರಚಿತಾ ಹೆಸರು; ಆ ಘಟನೆ ನೆನೆದ ‘ಡಿಂಪಲ್​ ಕ್ವೀನ್​’
Image
Gaalipata 2: ಅಕ್ಷಯ್​ ಕುಮಾರ್​ ಚಿತ್ರವನ್ನೇ ಮೀರಿಸಿದ ‘ಗಾಳಿಪಟ 2’; ಬುಕ್​ ಮೈ ಶೋನಲ್ಲಿ ಭರ್ಜರಿ ಹವಾ
Image
Appu Rakhi: ಹೇಗಿದೆ ನೋಡಿ ಅಪ್ಪು ರಾಖಿ; ‘ರಕ್ಷಾ ಬಂಧನ’ಕ್ಕೆ ಹೊಸ ಕಳೆ ತಂದ ‘ಪವರ್​ ಸ್ಟಾರ್’​ ಮೇಲಿನ ಅಭಿಮಾನ
Image
ಹಾಡು-ಡ್ಯಾನ್ಸ್​ ಮೂಲಕ ‘ಧಮಾಕಾ’ ಮಾಡ್ತಿದ್ದಾರೆ ‘ವಿಕ್ರಾಂತ್​ ರೋಣ’ ನಟ ಸಿದ್ದು ಮೂಲಿಮನಿ

‘ನಾನು ಬಾಲನಟನಾಗಿ ‘ಹಾತಿ ಮೇರೆ ಸಾತಿ’ ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು‌. ಅವರಿಗೆ ನಾನು ಕನ್ನಡ ಚಿತ್ರವೊಂದಕ್ಕೆ ನಿರ್ದೇಶನ ಮಾಡಬೇಕು ಎಂಬ ಆಸೆಯಿತ್ತು. ಅದು ‘ಧಮ್​’ ಮೂಲಕ ಈಡೇರಿದೆ’ ಎಂದು ನಿರ್ದೇಶಕ ವಿಆರ್​ಆರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!