AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಬರ್ತಿದೆ ‘ಧಮ್​’ ಸಿನಿಮಾ; ಅಂದು ಸುದೀಪ್​, ಇಂದು ಹೊಸಬರು

Dhum Kannada Movie: ‘ಧಮ್​’ ಸಿನಿಮಾಗೆ ಶ್ರೀಜಿತ್ ಹೀರೋ ಆಗಿದ್ದಾರೆ. ಅವರ ಜೊತೆ ನಟಿ ಎರೀನ್​ ಅಧಿಕಾರಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟ್ರೇಲರ್​ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ.

ಮತ್ತೊಮ್ಮೆ ಬರ್ತಿದೆ ‘ಧಮ್​’ ಸಿನಿಮಾ; ಅಂದು ಸುದೀಪ್​, ಇಂದು ಹೊಸಬರು
ಶ್ರೀಜಿತ್, ಎರೀನ್ ಅಧಿಕಾರಿ
TV9 Web
| Edited By: |

Updated on: Aug 11, 2022 | 7:15 AM

Share

2002ರಲ್ಲಿ ಕಿಚ್ಚ ಸುದೀಪ್ (Kichcha Sudeep)​ ನಟನೆಯ ‘ಧಮ್​’ ಸಿನಿಮಾ ನೋಡಿ ಅಭಿಮಾನಿಗಳು ಎಂಜಾಯ್​ ಮಾಡಿದ್ದರು. ಈಗ ಮತ್ತೆ ಅದೇ ಹೆಸರಿನಲ್ಲಿ ಇನ್ನೊಂದು ಸಿನಿಮಾ ಬರುತ್ತಿದೆ. ಆದರೆ ಈ ಚಿತ್ರಕ್ಕೆ ಸುದೀಪ್​ ಹೀರೋ ಅಲ್ಲ. ಬದಲಿಗೆ ಹೊಸಬರ ತಂಡ ಈ ಸಿನಿಮಾ ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪ್ರತಿಭಾವಂತ ನಟ ಸಂಚಾರಿ ವಿಜಯ್​  (Sanchari Vijay) ಅವರು ಈ ಸಿನಿಮಾಗೆ ಹೀರೋ ಆಗಬೇಕಿತ್ತು. ಆದರೆ ಅವರ ನಿಧನದಿಂದ ಅದು ಸಾಧ್ಯವಾಗಲಿಲ್ಲ. ಈಗ ಈ ಹೊಸ ‘ಧಮ್​’ ಸಿನಿಮಾಗೆ ಶ್ರೀಜಿತ್​ ಅವರು ನಾಯಕನಾಗಿ ನಟಿಸಿದ್ದಾರೆ. ವಿಆರ್​ಆರ್​ ಅವರು ನಿರ್ದೇಶನ ಮಾಡಿದ್ದಾರೆ. ಶ್ರೀಜಿತ್​ಗೆ ಜೋಡಿಯಾಗಿ ಎರೀನ್​ ಅಧಿಕಾರಿ ನಟಿಸಿದ್ದಾರೆ. ಟ್ರೇಲರ್​ ಮತ್ತು ಹಾಡುಗಳ ಮೂಲಕ ‘ಧಮ್​’ ಸಿನಿಮಾ (Dhum Kannada Movie) ಗಮನ ಸೆಳೆಯುತ್ತಿದೆ. ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

‘ಧಮ್​’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಹಾಗೂ ನಟ, ನಿರ್ದೇಶಕ ರವಿಕಿರಣ್ ಮುಖ್ಯ ಅತಿಥಿಗಳಾಗಿ ಬಂದು ಶುಭ ಹಾರೈಸಿದ್ದಾರೆ. ‘ವಿಆರ್​ಆರ್ ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದಕ್ಕೆ ಖುಷಿ ಇದೆ. ನಾನು ಈ ಮೊದಲು ‘ರಂಗ್ ಬಿ ರಂಗಿ’ ಚಿತ್ರದಲ್ಲಿ ಹೀರೋ ಆಗಿದ್ದೆ. ಇದು ನನ್ನ 2ನೇ ಸಿನಿಮಾ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಸೇರಿದಂತೆ ಎಲ್ಲ ಅಂಶಗಳು ನಮ್ಮ ಸಿನಿಮಾದಲ್ಲಿ ಇವೆ’ ಎಂದು ಶ್ರೀಜಿತ್​ ಹೇಳಿದ್ದಾರೆ.

‘ಧಮ್​’ ಚಿತ್ರದ ನಾಯಕಿ ಎರೀನ್ ಅಧಿಕಾರಿ ಮೂಲತಃ ಬಂಗಾಳದವರು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಕನ್ನಡದಲ್ಲಿ ಇದು ಅವರಿಗೆ ಮೊದಲ ಚಿತ್ರ. ಈ ಸಿನಿಮಾ ಕನ್ನಡ ಮತ್ತು ತಮಿಳಿನಲ್ಲಿ ಮೂಡಿಬರುತ್ತಿದೆ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್  ಮುಂತಾದವರು ನಟಿಸಿದ್ದಾರೆ. ರಿಹಾನ್ ಅಹಮದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜೀವ ವರ್ಷಿಣಿ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ
Image
Rachita Ram: ಡಾಲಿ ಧನಂಜಯ್​ ಅಣ್ಣನ ಮಗಳಿಗೆ ರಚಿತಾ ಹೆಸರು; ಆ ಘಟನೆ ನೆನೆದ ‘ಡಿಂಪಲ್​ ಕ್ವೀನ್​’
Image
Gaalipata 2: ಅಕ್ಷಯ್​ ಕುಮಾರ್​ ಚಿತ್ರವನ್ನೇ ಮೀರಿಸಿದ ‘ಗಾಳಿಪಟ 2’; ಬುಕ್​ ಮೈ ಶೋನಲ್ಲಿ ಭರ್ಜರಿ ಹವಾ
Image
Appu Rakhi: ಹೇಗಿದೆ ನೋಡಿ ಅಪ್ಪು ರಾಖಿ; ‘ರಕ್ಷಾ ಬಂಧನ’ಕ್ಕೆ ಹೊಸ ಕಳೆ ತಂದ ‘ಪವರ್​ ಸ್ಟಾರ್’​ ಮೇಲಿನ ಅಭಿಮಾನ
Image
ಹಾಡು-ಡ್ಯಾನ್ಸ್​ ಮೂಲಕ ‘ಧಮಾಕಾ’ ಮಾಡ್ತಿದ್ದಾರೆ ‘ವಿಕ್ರಾಂತ್​ ರೋಣ’ ನಟ ಸಿದ್ದು ಮೂಲಿಮನಿ

‘ನಾನು ಬಾಲನಟನಾಗಿ ‘ಹಾತಿ ಮೇರೆ ಸಾತಿ’ ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು‌. ಅವರಿಗೆ ನಾನು ಕನ್ನಡ ಚಿತ್ರವೊಂದಕ್ಕೆ ನಿರ್ದೇಶನ ಮಾಡಬೇಕು ಎಂಬ ಆಸೆಯಿತ್ತು. ಅದು ‘ಧಮ್​’ ಮೂಲಕ ಈಡೇರಿದೆ’ ಎಂದು ನಿರ್ದೇಶಕ ವಿಆರ್​ಆರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು