AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಬರಲಿದೆ ‘ರಣ ರಾಕ್ಷಸ’ ಸಿನಿಮಾ; ಪೋಸ್ಟರ್​ ಬಿಡುಗಡೆ ಮಾಡಿದ ಚಿತ್ರತಂಡ

‘ರಣ ರಾಕ್ಷಸ’ ಚಿತ್ರಕ್ಕೆ ಮುರಳಿಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತದ ಜವಾಬ್ದಾರಿ ಕೂಡ ಅವರದ್ದೇ. ಈ ಸಿನಿಮಾದಲ್ಲಿ ಹೆಚ್.ಪಿ. ನರಸಿಂಹಸ್ವಾಮಿ ಅವರು ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಸಿನಿಮಾವನ್ನು ರಿಲೀಸ್​ ಮಾಡಲು ಚಿತ್ರತಂಡ ಸಜ್ಜಾಗಿದೆ. ಪೋಸ್ಟರ್​ ಅನಾವರಣದ ಮೂಲಕ ಪ್ರಚಾರ ಕಾರ್ಯ ಶುರುಮಾಡಲಾಗಿದೆ.

ಶೀಘ್ರದಲ್ಲೇ ಬರಲಿದೆ ‘ರಣ ರಾಕ್ಷಸ’ ಸಿನಿಮಾ; ಪೋಸ್ಟರ್​ ಬಿಡುಗಡೆ ಮಾಡಿದ ಚಿತ್ರತಂಡ
‘ರಣ ರಾಕ್ಷಸ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 03, 2024 | 7:56 PM

Share

ಯಾರು ಬಂದರೂ ಚಿತ್ರರಂಗ (Kannada Film Industry) ಬೇಡ ಎನ್ನುವುದಿಲ್ಲ. ಸಿನಿಮಾ ಕ್ಷೇತ್ರ ಎಲ್ಲರನ್ನೂ ಆಕರ್ಷಿಸುತ್ತದೆ. ಅದೇ ಕಾರಣದಿಂದ ಗಾಂಧಿನಗರಕ್ಕೆ ಪ್ರತಿದಿನ ಹೊಸಬರ ಎಂಟ್ರಿ ಆಗುತ್ತಲೇ ಇರುತ್ತದೆ. ಈಗ ಹೊಸಬರೇ ಸೇರಿಕೊಂಡು ಮಾಡಿರುವ ‘ರಣ ರಾಕ್ಷಸ’ ಸಿನಿಮಾ (Rana Rakshasa) ಸಿದ್ಧಗೊಂಡಿದೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡಿವೆ. ಅಲ್ಲದೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿದಿದೆ. ಈ ಹಿನ್ನೆಲೆಯಲ್ಲಿ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಿತ್ರತಂಡದವರು ಚಾಲನೆ ನೀಡಿದ್ದಾರೆ. ಈ ಸಿನಿಮಾ (Kannada Cinema) ಶೀಘ್ರದಲ್ಲೇ ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದೆ.

‘ರಣ ರಾಕ್ಷಸ’ ಸಿನಿಮಾದಲ್ಲಿ ಹೆಚ್.ಪಿ. ನರಸಿಂಹಸ್ವಾಮಿ ಅವರು ಹೀರೋ ಆಗಿ ನಟಿಸಿದ್ದಾರೆ. ನಿರ್ಮಾಣ ಕೂಡ ಅವರದ್ದೇ. ನಾಯಕ ಹಾಗೂ ನಿರ್ಮಾಪಕನಾಗಿರುವ ಅವರ ಜನ್ಮದಿನದ ಪ್ರಯುಕ್ತ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ಇದರೊಂದಿಗೆ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಗಿದೆ. ಈ ವೇಳೆ ತಮ್ಮ ಸಿನಿಮಾದ ಜರ್ನಿ ಬಗ್ಗೆ ಹೆಚ್.ಪಿ. ನರಸಿಂಹಸ್ವಾಮಿ ಅವರು ಮಾತನಾಡಿದ್ದಾರೆ.

‘ನಮ್ಮ ತಂದೆ ರಂಗಭೂಮಿ ಕಲಾವಿದರು ಆದ್ದರಿಂದ ಅವರ ಬಳುವಳಿಯಿಂದ ನನಗೆ ಚಿಕ್ಕ ವಯಸ್ಸಲ್ಲೇ ನಟನೆಯ ಗೀಳು ಶುರುವಾಯಿತು. ಬಳಿಕ ಉದ್ಯಮದಲ್ಲಿ ಯಶಸ್ಸು ಪಡೆದೆ. ಬಿಸ್ನೆಸ್​ ಕೈ ಹಿಡಿದು ಚಿತ್ರಮಂದಿರದ ಮಾಲೀಕನಾದೆ. ಆ ಎಲ್ಲ ಅನುಭವಗಳನ್ನು ಇಟ್ಟುಕೊಂಡು 4 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ಈಗ ನಾಯಕನಾಗಿ ಅಭಿನಯಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬಡವ್ರ ಮಕ್ಳು ಬೆಳಿಬೇಕು ಕಣ್ರಯ್ಯ’ ಎನ್ನುತ್ತ ಮತ್ತೆ ಚಿತ್ರರಂಗಕ್ಕೆ ಬಂದ ‘ಫ್ರೆಂಡ್ಸ್​’ ಸಿನಿಮಾ ವಾಸು

ಮುರಳಿಪ್ರಸಾದ್ ಅವರು ‘ರಣ ರಾಕ್ಷಸ’ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂಗೀತ ಮತ್ತು ನಿರ್ದೇಶನದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ. ಪುಣ್ಯ ಗೌಡ, ದಿಲೀಪ್, ದತ್ತ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಭಾರ್ಗವ ಅವರು ಸಂಕಲನ ಮಾಡಿದ್ದಾರೆ. ಹೆಸರುಘಟ್ಟ, ಬೆಂಗಳೂರು ಸುತ್ತಮುತ್ತ ಶೂಟಿಂಗ್​ ಮಾಡಲಾಗಿದೆ. ‘ಶ್ರೀಲಕ್ಷೀ ನರಸಿಂಹಸ್ವಾಮಿ ಎಂಟರ್‌ಟೈನ್‌ಮೆಂಟ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ.

ಚಿತ್ರತಂಡ ಹೇಳಿಕೊಂಡಿರುವಂತೆ ‘ರಣ ರಾಕ್ಷಸ’ ಸಿನಿಮಾದಲ್ಲಿ ತಂದೆ ಹಾಗೂ ಮಗಳ ಬಾಂಧವ್ಯದ ಕತೆ ಇದೆ. ತಮ್ಮ ಎಲ್ಲ ಸಿನಿಮಾಗಳಲ್ಲಿ ಹೊಸಬರಿಗೆ ಅವಕಾಶ ನೀಡಿರುವುದಾಗಿ ನಿರ್ಮಾಪಕರು ಹೇಳಿದ್ದಾರೆ. ತಮ್ಮ ನಿರ್ಮಾಣದ ಇನ್ನುಳಿದ ಸಿನಿಮಾಗಳ ವಿವಿಧ ವಿಭಾಗಗಳಲ್ಲೂ ಅವರು ತೊಡಗಿಕೊಂಡಿದ್ದಾರೆ. ‘ರಣ ರಾಕ್ಷಸ’ ಸಿನಿಮಾದ ಬಿಡುಗಡೆ ಸಿದ್ಧತೆಯಲ್ಲಿ ಅವರು ನಿರತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ