AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೈಸ್ ರೋಡ್’ ಸಿನಿಮಾಗೆ ಕಂಟಕ, ಹೆಸರು ಬದಲಾಯಿಸುವಂತೆ ನೊಟೀಸ್

‘ನೈಸ್ ರೋಡ್’ ಕನ್ನಡ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ. ಸಿನಿಮಾ ಇನ್ನೇನು ಬಿಡುಗಡೆ ಹಂತ ತಲುಪಿದ್ದು, ಸೆನ್ಸಾರ್ ಸಹ ಆಗಿದೆ. ಆದರೆ ಈ ಸಮಯದಲ್ಲಿ ಸಿನಿಮಾದ ಹೆಸರು ಬದಲಾವಣೆ ಮಾಡುವಂತೆ ನೈಸ್ ರೋಡ್ ಸಂಸ್ಥೆಯವರು ನೊಟೀಸ್ ನೀಡಿದ್ದಾರೆ.

‘ನೈಸ್ ರೋಡ್’ ಸಿನಿಮಾಗೆ ಕಂಟಕ, ಹೆಸರು ಬದಲಾಯಿಸುವಂತೆ ನೊಟೀಸ್
ಮಂಜುನಾಥ ಸಿ.
|

Updated on: Jul 30, 2024 | 7:14 PM

Share

ಕನ್ನಡ ಸಿನಿಮಾದ ಹೆಸರುಗಳ ಕುರಿತು ಇತ್ತೀಚೆಗೆ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಮೊದಲಿಗೆ ‘ಉರಿಗೌಡ-ನಂಜೇಗೌಡ’ ಹೆಸರನ್ನು ರಿಜಿಸ್ಟರ್ ಮಾಡಲು ಪ್ರಯತ್ನ ನಡೆಸಿತ್ತು. ಬಳಿಕ ಅದು ವಿಫಲವಾಯ್ತು. ಇತ್ತೀಚೆಗೆ ದರ್ಶನ್ ಪ್ರಕರಣದ ಹಿನ್ನೆಲೆಯಲ್ಲಿ ಹಲವು ಹೆಸರುಗಳ ನೊಂದಣಿಗೆ ಪ್ರಯತ್ನಿಸಲಾಯ್ತು ಆದರೆ ಅದಕ್ಕೆ ಫಿಲಂ ಚೇಂಬರ್ ಅವಕಾಶ ಕೊಟ್ಟಿರಲಿಲ್ಲ. ಇದೀಗ ಕನ್ನಡದ ಒಂದು ಹೊಸ ಸಿನಿಮಾಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡುವಂತೆ ಸಂಸ್ಥೆಯೊಂದು ನೊಟೀಸ್ ಕಳಿಸಿದೆ.

ಕನ್ನಡದಲ್ಲಿ ‘ನೈಸ್ ರೋಡ್’ ಹೆಸರಿನ ಥ್ರಿಲ್ಲರ್ ಸಿನಿಮಾ ಒಂದು ನಿರ್ಮಾಣವಾಗಿದೆ. ಈ ಸಿನಿಮಾದ ಹೆಸರು ಬದಲು ಮಾಡುವಂತೆ ನೈಸ್ ರೋಡ್ ಕಂಪನಿಯವರು ನೊಟೀಸ್ ಕಳಿಸಿದ್ದಾರೆ. ಸಿನಿಮಾದ ಹೆಸರನ್ನು ಬದಲಾವಣೆ ಮಾಡದೇ ಇದ್ದರೆ ದೂರು ನೀಡುವುದಾಗಿ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಲಾಗಿದೆ.

ಸಿನಿಮಾ ಈಗ ಬಿಡುಗಡೆ ಹಂತಕ್ಕೆ ಬಂದಿದ್ದು ಏಲ್ಲಾ ಕಡೆ ‘ನೈಸ್ ರೋಡ್’ ಎಂಬ ಹೆಸರಿನಿಂದ ಪ್ರಚಾರ ಮಾಡಲಾಗಿದೆ. ಈ ಹಂತದಲ್ಲಿ ಸಿನಿಮಾದ ಹೆಸರು ಬದಲಾವಣೆ ಮಾಡಲು ಬಹಳ ಖರ್ಚು ವೆಚ್ಚಗಳಾಗುತ್ತದೆ. ಅಲ್ಲದೆ ತುಂಬಾ ಸಮಯವು ಬೇಕಾಗುತ್ತದೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ನೈಸ್ ರೋಡ್’ ಎಂಬ ಟೈಟಲ್ ರಿಜಿಸ್ಟರ್ ಆಗಿದ್ದು ಸಿನಿಮಾ ಚಿತ್ರೀಕರಣ ಮುಗಿಸಿ ಈಗಾಗಲೇ ಸಿನಿಮಾ ಸೆನ್ಸಾರ್ ಆಗಿದ್ದು ಸೆನ್ಸಾರ್ ಮಂಡಳಿಯು ಕೂಡ ಸಿನಿಮಾ ನೋಡಿ ನೈಸ್ ರೋಡಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಿರ್ಧರಿಸಿ U/A ಪ್ರಮಾಣ ಪತ್ರ ಕೊಟ್ಟಿದಾರೆ ಆದರೆ ಈ ಹಂತದಲ್ಲಿ ಸಿನಿಮಾದ ಹೆಸರು ಬದಲಾವಣೆಗೆ ನೊಟೀಸ್ ನೀಡಲಾಗಿರುವುದು ಸಮಸ್ಯೆ ತಂದಿದೆ ಎಂದಿದೆ ಚಿತ್ರತಂಡ.

ಇದನ್ನೂ ಓದಿ:ಕನ್ನಡ ಸಿನಿಮಾರಂಗದ ರೂಪಾಂತರದ ಕಾಲದಲ್ಲಿ ಬರುತ್ತಿರುವ ‘ರೂಪಾಂತರ’

ಆದರೆ ಈಗ ‘ನೈಸ್ ರೋಡ್’ ಕಂಪನಿಯವರು ಏಕಾಏಕಿ ಬಂದು ಹೆಸರು ಬದಲಾಯಿಸಲೇ ಬೇಕೆಂದು ನೋಟೀಸ್ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧ ಪಟ್ಟಂತೆ ನಿರ್ಮಾಪಕ ಗೋಪಾಲ್ ಹಳೆಪಾಳ್ಯ ಅವರು. ಈ ಸಿನಿಮಾಕ್ಕೆ ಫೈನಾನ್ಸ್ ಮಾಡಿರುವ ಏನ್ ರಾಜೂಗೌಡ ಮತ್ತು ಈ ಸಿನಿಮಾದ ನಟರಾದ ಧರ್ಮ ಅವರ ಜೊತೆ ಮಾತಾಡಿ ಒಂದು ನಿರ್ಧಾರಕ್ಕೆ ಬರುತ್ತೇನೆ ಎನ್ನುತ್ತಿದ್ದಾರೆ. ಮುಂದೆ ಸಿನಿಮಾ ತಂಡದವರು ಹೆಸರು ಬದಲಾಯಿಸುತ್ತಾರೋ ಇಲ್ಲ ಇದೆ ಹೆಸರಿನಲ್ಲೆ ಸಿನಿಮಾ ಬಿಡುಗಡೆ ಮಾಡುತರೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ