AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಕರ್ಫ್ಯೂ ಎಫೆಕ್ಟ್: ಚಿತ್ರಮಂದಿರಗಳಲ್ಲಿ ಇಂದಿನಿಂದ 4 ಶೋ ಮಾತ್ರ ಪ್ರದರ್ಶನ, 7 ಗಂಟೆ ಶೋ ಲಾಸ್ಟ್

ನಿನ್ನೆಯವರೆಗೆ 5 ಶೋ ಪ್ರದರ್ಶನ ನಡೆಯುತ್ತಿತ್ತು. ಆದ್ರೆ ಇಂದಿನಿಂದ 4 ಶೋ ಮಾತ್ರ ಪ್ರದರ್ಶನಗೊಳ್ಳಲಿದೆ. ರಾಜ್ಯದ ಶೇ.80ರಷ್ಟು ಚಿತ್ರಮಂದಿರಗಳಲ್ಲಿ 7 ಗಂಟೆ ಶೋ ಲಾಸ್ಟ್ ಆಗಲಿದೆ. ನೈಟ್ ಶೋ ಸ್ಥಗಿತದಿಂದ ಶೇ.30ರಷ್ಟು ಆದಾಯಕ್ಕೆ ಕತ್ತರಿ ಬಿದ್ದಿದೆ.

ನೈಟ್ ಕರ್ಫ್ಯೂ ಎಫೆಕ್ಟ್: ಚಿತ್ರಮಂದಿರಗಳಲ್ಲಿ ಇಂದಿನಿಂದ 4 ಶೋ ಮಾತ್ರ ಪ್ರದರ್ಶನ, 7 ಗಂಟೆ ಶೋ ಲಾಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 28, 2021 | 9:36 AM

Share

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಹೆಚ್ಚಾಗುವ ಸಾಧ್ಯತೆ ಇರುವ ಮಹಾಮಾರಿ ಕೊರೊನಾ ಹಾಗೂ ಒಮಿಕ್ರಾನ್ ಕಟ್ಟಿ ಹಾಕಲು ರಾಜ್ಯ ಸರ್ಕಾರ ನೈಟ್‌ ಕರ್ಫ್ಯೂ ಜಾರಿಗೆ ತಂದಿದೆ. ಇಂದಿನಿಂದ(ಡಿಸೆಂಬರ್ 28) 2022ರ ಜನವರಿ 7ರವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಇಂದಿನಿಂದ 4 ಶೋ ಮಾತ್ರ ಪ್ರದರ್ಶನಗೊಳ್ಳಲಿದೆ. ನಿನ್ನೆಯವರೆಗೆ 5 ಶೋ ಪ್ರದರ್ಶನ ನಡೆಯುತ್ತಿತ್ತು. ಆದ್ರೆ ಇಂದಿನಿಂದ 4 ಶೋ ಮಾತ್ರ ಪ್ರದರ್ಶನಗೊಳ್ಳಲಿದೆ. ರಾಜ್ಯದ ಶೇ.80ರಷ್ಟು ಚಿತ್ರಮಂದಿರಗಳಲ್ಲಿ 7 ಗಂಟೆ ಶೋ ಲಾಸ್ಟ್ ಆಗಲಿದೆ. ನೈಟ್ ಶೋ ಸ್ಥಗಿತದಿಂದ ಶೇ.30ರಷ್ಟು ಆದಾಯಕ್ಕೆ ಕತ್ತರಿ ಬಿದ್ದಿದೆ. ನೈಟ್ ಕರ್ಫ್ಯೂ ವಿಸ್ತರಣೆಯಾದ್ರೆ ಸಮಯ ಬದಲಾವಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

ಥಿಯೇಟರ್ಗಳಿಗೆ ತಟ್ಟಿದ ನೈಟ್ ಕರ್ಫ್ಯೂ ಎಫೆಕ್ಟ್ ಸರ್ಕಾರ ಘೋಷಿಸಿದ 10 ದಿನಗಳ ನೈಟ್ ಕರ್ಫ್ಯೂಗೆ ಒಂದು ಶೋ ಬಂದ್ ಮಾಡಲಾಗಿದೆ. ರಾಜ್ಯಾದ್ಯಂತ 630 ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಿವೆ. ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ಒಟ್ಟು 150 ಸಿಂಗಲ್ ಸ್ಕ್ರೀನ್ ಇವೆ. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ (PVR) 45. ರಾಜ್ಯಾದ್ಯಂತ ಒಟ್ಟು 60 ಮಲ್ಟಿಪ್ಲೆಕ್ಸ್ ಗಳಿವೆ. ರಾಜ್ಯದ ಶೇ.80 ಥಿಯೇಟರ್ ಗಳಲ್ಲಿ ಸಂಜೆ 7 ಗಂಟೆ ಶೋ ಲಾಸ್ಟ್ ಮಾಡಲಾಗುತ್ತಿದೆ.

ನೈಟ್ ಶೋ ಸ್ಥಗಿತದಿಂದ ಶೇ.30 ರಷ್ಟು ಕಲೆಕ್ಷನ್ಗೆ ಕತ್ತರಿ ಬೀಳಲಿದೆ. ಸದ್ಯ ಕೇವಲ ನೈಟ್ ಕರ್ಫ್ಯೂ 10 ದಿನಕ್ಕೆ ಮಾತ್ರ ಇರುವುದರಿಂದ ಕೊಂಚ ನಿರಾಳವಾಗಿದೆ. ಆದ್ರೆ ಒಂದು ವೇಳೆ ನೈಟ್ ಕರ್ಫ್ಯೂ ಮುಂದುವರಿದ್ರೆ ಸಮಯ ಬದಲಾವಣೆ ಮಾಡಬೇಕಾಗುತ್ತೆ. ಬೇರೆ ಸಮಯ ಬದಲಿಸಿದ್ರೆ ಜನ ಬರೋದು ಡೌಟ್. ಹೀಗಾಗಿ ಕರ್ಫ್ಯೂ ವಿಸ್ತರಣೆಯಾದರೆ ಸಮಯ ಬದಲಾವಣೆಗೆ ಬಗ್ಗೆ ಚಿಂತನೆ ಮಾಡುವುದಾಗಿ ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ಕೊರೊನಾ ಮುಗೀತು. ಅಚ್ಚೆ ದಿನ್ ಬಂದ್ವು, ಸಂಪೂರ್ಣ ಥಿಯೇಟರ್ ಓಪನ್ಗೆ ಅವಕಾಶ ಸಿಕ್ತು ಎಂದು ಖುಷಿ ಪಡುವಷ್ಟರಲ್ಲಿ ಈಗ ಮತ್ತೆ ಆತಂಕದ ಸೂಚನೆಗಳು ಸಿಗುತ್ತಿವೆ.

ಇದನ್ನೂ ಓದಿ: Israel Defence Forces: ಇದು ಇಸ್ರೇಲ್​ ರಕ್ಷಣಾ ಪಡೆಗಳ ನಿಜವಾದ ಸ್ಟೋರಿ, ಒಮ್ಮೆ ಈ ಫೋಟೋ ನೋಡಿ!

Published On - 9:10 am, Tue, 28 December 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ