AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nikhil Kumar: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ನಿಖಿಲ್ ಕುಮಾರ್​ಗೆ ಆಹ್ವಾನ

ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಈ ಫೋಟೋ ವೈರಲ್ ಆಗಿದೆ. ನಿಖಿಲ್​ಗೆ ನೀಡಿದ ಆಮಂತ್ರಣ ಪತ್ರದ ಫೋಟೋಗಳು ವೈರಲ್ ಆಗಿವೆ.

Nikhil Kumar: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ನಿಖಿಲ್ ಕುಮಾರ್​ಗೆ ಆಹ್ವಾನ
ರಾಮ ಮಂದಿರ ಸಮಾರಂಭಕ್ಕೆ ಆಹ್ವಾನ ಪಡೆದ ನಿಖಿಲ್
ರಾಜೇಶ್ ದುಗ್ಗುಮನೆ
|

Updated on:Jan 10, 2024 | 12:34 PM

Share

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭ ಆಗಿದೆ. ಜನವರಿ 22ರಂದು ವಿಜೃಂಭಣೆಯಿಂದ ಕಾರ್ಯಕ್ರಮಗಳು ನಡೆಯಲಿವೆ. ಇದಕ್ಕೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಜನವರಿ 22ರಂದು ನಡೆಯಲಿರುವ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ (Nikhil Kumar)​ ಅವರಿಗೆ ಆಹ್ವಾನ ನೀಡಲಾಗಿದೆ.

ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಈ ಫೋಟೋ ವೈರಲ್ ಆಗಿದೆ. ನಿಖಿಲ್​ಗೆ ನೀಡಿದ ಆಮಂತ್ರಣ ಪತ್ರದ ಫೋಟೋಗಳು ವೈರಲ್ ಆಗಿವೆ. ನಿಖಿಲ್ ಕುಮಾರ್ ಅವರು ಕೂಡ ಈ ಕಾರ್ಯಕ್ರಮ ನೋಡಲು ಅಯೋಧ್ಯೆಗೆ ತೆರಳುತ್ತಾರಾ ಎನ್ನುವ ಕೌತುಕ ಮೂಡಿದೆ.

2016ರಲ್ಲಿ ರಿಲೀಸ್ ಆದ ‘ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ‘ಸೀತಾರಾಮ ಕಲ್ಯಾಣ’ ಸಿನಿಮಾ ರಿಲೀಸ್ ಆಯಿತು. ಅದೇ ವರ್ಷ ಬಿಡುಗಡೆ ಆದ ‘ಕುರುಕ್ಷೇತ್ರ’ ಸಿನಿಮಾದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ ನಿಖಿಲ್ ನಟಿಸಿದರು. 2021ರಲ್ಲಿ ‘ರೈಡರ್’ ಸಿನಿಮಾ ರಿಲೀಸ್ ಆಯಿತು.

ಇದನ್ನೂ ಓದಿ: ಎರಡು ಬಾರಿ ಸೀತೆ ಪಾತ್ರ ಮಾಡಿದ ಈ ನಟಿಗೆ ಅಯೋಧ್ಯೆಯಲ್ಲಿ ರಾಮನ ನೋಡುವ ಕಾತುರ

ಈಗ ನಿಖಿಲ್ ಕುಮಾರ್​ ಅವರ ಮುಂದಿನ ಚಿತ್ರಕ್ಕೆ ದಕ್ಷಿಣದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. ವಿಕ್ರಂ, ಐಶ್ವರ್ಯಾ ರೈ, ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ ಸೇರಿ ಹಲವು ಸ್ಟಾರ್ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಲೈಕಾ ಪ್ರೊಡಕ್ಷನ್ ಹೌಸ್​ಗೆ ಇದೆ. ನಿಖಿಲ್ ಕುಮಾರ್​ ಚಿತ್ರದ ಮೂಲಕ ಈ ನಿರ್ಮಾಣ ಸಂಸ್ಥೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:20 pm, Wed, 10 January 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ