AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಕಾ ಪ್ರೊಡಕ್ಷನ್ಸ್​’ ನಿರ್ಮಾಣದ ಸಿನಿಮಾ ಮೂಲಕ ನಿಖಿಲ್​ ಕುಮಾರ್​ ಕಮ್​ಬ್ಯಾಕ್​; ಆ.23ಕ್ಕೆ ಸಿಹಿ ಸುದ್ದಿ

ಕಾಲಿವುಡ್​ನಲ್ಲಿ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ತನ್ನದೇ ಛಾಪು ಮೂಡಿಸಿದೆ. ನಿಖಿಲ್​ ಕುಮಾರ್​ ನಟನೆಯ ಹೊಸ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಈ ಸಂಸ್ಥೆ ಕಾಲಿಡುತ್ತಿದೆ. ಆಗಸ್ಟ್​ 23ರಂದು ಈ ಸಿನಿಮಾ ಸೆಟ್ಟೇರಲಿದೆ. ಈ ಪ್ರಾಜೆಕ್ಟ್​ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

‘ಲೈಕಾ ಪ್ರೊಡಕ್ಷನ್ಸ್​’ ನಿರ್ಮಾಣದ ಸಿನಿಮಾ ಮೂಲಕ ನಿಖಿಲ್​ ಕುಮಾರ್​ ಕಮ್​ಬ್ಯಾಕ್​; ಆ.23ಕ್ಕೆ ಸಿಹಿ ಸುದ್ದಿ
ನಿಖಿಲ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Aug 21, 2023 | 9:11 PM

ನಟ ಕಮ್​ ರಾಜಕಾರಣಿ ನಿಖಿಲ್​ ಕುಮಾರ್​ (Nikhil Kumar) ಅವರು ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. 2016ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ರಾಜಕೀಯದ ಚಟುವಟಿಕೆಗಳಲ್ಲೂ ಬ್ಯುಸಿ ಆಗಿದ್ದರು. ಆದರೆ ಚುನಾವಣೆಯ ಕಾರ್ಯಗಳ ನಿಮಿತ್ತ ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ಕಡೆಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಿರಲಿಲ್ಲ. ಈಗ ಮತ್ತೆ ಬಣ್ಣ ಹಚ್ಚಲು ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಸಜ್ಜಾಗುತ್ತಿದ್ದಾರೆ. ಅವರ ಕಮ್​ಬ್ಯಾಕ್​ ಪ್ರಾಜೆಕ್ಟ್​ ಬಗ್ಗೆ ಈಗ ಹೊಸ ಅಪ್​ಡೇಟ್​ ಕೇಳಿಬಂದಿದೆ. ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್​’ (Lyca Production) ಮೂಲಕ ನಿರ್ಮಾಣ ಆಗಲಿರುವ ಹೊಸ ಸಿನಿಮಾದಲ್ಲಿ ನಿಖಿಲ್​ ಕುಮಾರ್​ ನಟಿಸಲಿದ್ದಾರೆ. ಅದು ಅವರ ಕಮ್​ಬ್ಯಾಕ್​ ಸಿನಿಮಾ ಆಗಲಿದೆ. ಆಗಸ್ಟ್​ 23ರಂದು ಈ ಸಿನಿಮಾ ಸೆಟ್ಟೇರಲಿದೆ. ಅಂದು ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.

‘ಜಾಗ್ವಾರ್’, ‘ಸೀತಾರಾಮ ಕಲ್ಯಾಣ’, ‘ಕುರುಕ್ಷೇತ್ರ’, ‘ರೈಡರ್​’ ಸಿನಿಮಾಗಳಲ್ಲಿ ನಿಖಿಲ್​ ಕುಮಾರ್​ ನಟಿಸಿದ್ದಾರೆ. ಆದರೆ ರಾಜಕೀಯದ ಕಾರಣದಿಂದ ಅವರು ಸಿನಿಮಾ ಕೆಲಸಗಳಿಗೆ ದೀರ್ಘವಾದ ಬ್ರೇಕ್​ ನೀಡಿದ್ದರು. ಈಗ ಮತ್ತೆ ಬಣ್ಣದ ಲೋಕದ ಕಡೆಗೆ ಅವರು ಆಸಕ್ತಿ ತೋರಿಸುತ್ತಿದ್ದಾರೆ. ಅವರ ಕಮ್​ಬ್ಯಾಕ್​ ಪ್ರಾಜೆಕ್ಟ್​ಗೆ ‘ಲೈಕಾ ಪ್ರೊಡಕ್ಷನ್​’ ಸಂಸ್ಥೆಯು ಬಂಡವಾಳ ಹೂಡಲು ಮುಂದಾಗಿರುವುದು ವಿಶೇಷ. ಬಿಗ್​ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ.

ಇದನ್ನೂ ಓದಿ: ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ

ನಿಖಿಲ್​ ಕುಮಾರ್​ ಮತ್ತು ‘ಲೈಕಾ ಪ್ರೊಡಕ್ಷನ್ಸ್​’ ಕಾಂಬಿನೇಷನ್​ನಲ್ಲಿ ಸಿನಿಮಾ ಮೂಡಿಬರಲಿದೆ ಎಂಬ ಸುದ್ದಿ 2019ರಲ್ಲೇ ಕೇಳಿಬಂದಿತ್ತು. ಸಂಸ್ಥೆಯ ಮಾಲೀಕರಾದ ಸುಭಾಸ್ಕರನ್​ ಅವರೇ ಆ ವಿಷಯ ತಿಳಿಸಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಸೆಟ್ಟೇರುವುದು ವಿಳಂಬ ಆಯಿತು. ಕೊವಿಡ್​, ನಿಖಿಲ್​ ಕುಮಾರ್​ ವಿವಾಹ, ಕರ್ನಾಟಕ ಲೋಕಸಭೆ ಚುನಾವಣೆ.. ಹೀಗೆ ಅನೇಕ ಕಾರಣಗಳಿಂದ ಆ ಸಿನಿಮಾದ ಕೆಲಸ ಆರಂಭ ಆಗಿರಲಿಲ್ಲ. ಆದರೆ ಈಗ ಆ ಚಿತ್ರಕ್ಕೆ ಚಾಲನೆ ನೀಡುವ ಸಮಯ ಬಂದಿದೆ. ಅದ್ದೂರಿಯಾಗಿ ಸಿನಿಮಾ ಸೆಟ್ಟೇರಲಿದೆ.

ಇದನ್ನೂ ಓದಿ: ‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

ತಮಿಳು ಚಿತ್ರರಂಗದಲ್ಲಿ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ತನ್ನದೇ ಛಾಪು ಮೂಡಿಸಿದೆ. ‘ಕತ್ತಿ,’ ‘2.0’, ‘ಪೊನ್ನಿಯಿನ್​ ಸೆಲ್ವನ್​’ ಮುಂತಾದ ಗಮನಾರ್ಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಖ್ಯಾತಿ ಈ ಸಂಸ್ಥೆಗೆ ಇದೆ. ಈಗ ಇದೇ ಬ್ಯಾನರ್​ನಲ್ಲಿ ‘ಚಂದ್ರಮುಖಿ 2’, ‘ಇಂಡಿಯನ್​ 2’, ‘ಲಾಲ್​ ಸಲಾಂ’ ಮುಂತಾದ ಸಿನಿಮಾಗಳು ಮೂಡಿಬರುತ್ತಿವೆ. ನಿಖಿಲ್​ ಕುಮಾರ್​ ನಟನೆಯ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ‘ಲೈಕಾ ಪ್ರೊಡಕ್ಷನ್ಸ್​’ ಕಾಲಿಡುತ್ತಿದೆ ಎಂಬುದು ವಿಶೇಷ. ಈ ಚಿತ್ರದ ಶೀರ್ಷಿಕೆ ಏನು? ನಿಖಿಲ್​ ಕುಮಾರ್​ಗೆ ಆ್ಯಕ್ಷನ್​-ಕಟ್​ ಹೇಳಲಿರುವ ನಿರ್ದೇಶಕರು ಯಾರು? ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್