AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರ್ ಹೊಸ ಚಿತ್ರಕ್ಕೆ ಸಿಕ್ತು ಚಾಲನೆ; ಯಶ್​ ಚಿತ್ರದಲ್ಲಿ ಕೆಲಸ ಮಾಡಿದವರೇ  ಈಗ ಡೈರೆಕ್ಟರ್​

ನಿಖಿಲ್ ಹಾಗೂ ಮಂಜು ಅಥರ್ವ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಕುಮಾರ್​ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈ ಬಗ್ಗೆ ಚಿತ್ರತಂಡ ಅಪ್​​ಡೇಟ್ ನೀಡಿದೆ.‌

ನಿಖಿಲ್​ ಕುಮಾರ್ ಹೊಸ ಚಿತ್ರಕ್ಕೆ ಸಿಕ್ತು ಚಾಲನೆ; ಯಶ್​ ಚಿತ್ರದಲ್ಲಿ ಕೆಲಸ ಮಾಡಿದವರೇ  ಈಗ ಡೈರೆಕ್ಟರ್​
ಹೊಸ ಚಿತ್ರ ತಂಡದೊಂದಿಗೆ ನಿಖಿಲ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 15, 2022 | 1:58 PM

Share

ನಿಖಿಲ್​ ಕುಮಾರ್ (Nikhil Kumar) ನಟನೆಯ ‘ರೈಡರ್​’ ಸಿನಿಮಾ (Rider Movie) ಕಳೆದ ವರ್ಷಾಂತ್ಯಕ್ಕೆ ತೆರೆಕಂಡಿತ್ತು. ಈ ಸಿನಿಮಾ ರಿಲೀಸ್​ ಆಗಿ ಒಂದು ತಿಂಗಳು ಪೂರ್ಣಗೊಂಡಿಲ್ಲ. ಆಗಲೇ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ ನಿಖಿಲ್​ ಕುಮಾರ್​. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ. ಸಂಕ್ರಾಂತಿ ಹಬ್ಬದಂದು ಈ ಬಗ್ಗೆ ಅಪ್​ಡೇಟ್​ ನೀಡಲಾಗಿದೆ. ಇನ್ನೂ ಶೀರ್ಷಿಕೆ​ ಇಡದ ಈ ಚಿತ್ರದಲ್ಲಿ ನಿಖಿಲ್​ ಬಣ್ಣ ಹಚ್ಚುತ್ತಿದ್ದಾರೆ. ಕೆವಿಎನ್​ ಪ್ರೊಡಕ್ಷನ್ (KVN Production)​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಶೀಘ್ರದಲ್ಲೇ ಚಿತ್ರದ ಟೈಟಲ್​ ಘೋಷಣೆ ಆಗಲಿದೆ. ಹಾಗಾದರೆ, ಈ ಸಿನಿಮಾ ನಿರ್ದೇಶನ ಮಾಡುತ್ತಿರುವವರು ಯಾರು? ಆ ಪ್ರಶ್ನೆಗೆ ಉತ್ತರ ಈ ಸ್ಟೋರಿಯಲ್ಲಿದೆ.

ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್​ಗೆ ಇಳಿದಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಇದ್ದಾರೆ. ಯಶ್​ ನಟನೆಯ ‘ಮಾಸ್ಟರ್‌ ಪೀಸ್‌’, ಶಿವರಾಜ್​ಕುಮಾರ್​ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ.

ನಿಖಿಲ್ ಹಾಗೂ ಮಂಜು ಅಥರ್ವ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಕುಮಾರ್​ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈ ಬಗ್ಗೆ ಚಿತ್ರತಂಡ ಅಪ್​​ಡೇಟ್ ನೀಡಿದೆ.‌ ಈ ಸಿನಿಮಾದಲ್ಲಿ ಆ್ಯಕ್ಷನ್ ಇರಲಿದ್ದು, ಇದರ ಜತೆಗೆ ಫ್ಯಾಮಿಲಿ ಆಡಿಯನ್ಸ್​ಗೆ ಇಷ್ಟ ಆಗುವ​ ವಿಚಾರವೂ ಇರಲಿದೆ. ಈ ಚಿತ್ರಕ್ಕೆ ಸದ್ಯಕ್ಕೆ ಟೈಟಲ್ ಫಿಕ್ಸ್ ಆಗಿಲ್ಲ. ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾವನ್ನು ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಮೊದಲ ಹಂತದ ಶೂಟಿಂಗ್​ನಲ್ಲಿ ಬ್ಯುಸಿ ಇರುವ ಚಿತ್ರತಂಡ ಸದ್ಯದಲ್ಲಿಯೇ ಟೈಟಲ್ ಅನೌನ್ಸ್​ ಮಾಡಲಿದೆ. ಜತೆಗೆ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

ಇದನ್ನೂ ಓದಿ: ‘ಚಿತ್ರರಂಗಕ್ಕೆ ಪುನೀತ್​ ರೀತಿಯ ನಟ ಬೇಕು; ನಿಖಿಲ್​ ಹೆಚ್ಚು ಸಿನಿಮಾ ಮಾಡಲಿ’: ಎಚ್​​.ಡಿ. ಕುಮಾರಸ್ವಾಮಿ

‘ರೈಡರ್​’ ಚಿತ್ರ ನೋಡಿ ಜನ ಹೇಗೆ ಕಮೆಂಟ್​ ಮಾಡಿದಾರೆ? ಅಸಲಿ ವಿಚಾರ ತೆರೆದಿಟ್ಟ ನಿಖಿಲ್​

ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್