AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್​ ಮೂಲಕ ಎಂಟ್ರಿ ಕೊಟ್ಟ ‘ರೈಡರ್​; ಕುಮಾರಸ್ವಾಮಿ ಜನ್ಮದಿನಕ್ಕೆ ವಿಶೇಷ ಗಿಫ್ಟ್

Rider Trailer: ಇಂದು (ಡಿಸೆಂಬರ್​ 16) ಎಚ್​.ಡಿ. ಕುಮಾರಸ್ವಾಮಿ ಜನ್ಮದಿನ. ಇದರ ಪ್ರಯುಕ್ತ ‘ರೈಡರ್​’ ಟ್ರೇಲರ್ ರಿಲೀಸ್​ ಆಗಿದೆ. ಈ ಟ್ರೇಲರ್​ನಲ್ಲಿ ನಿಖಿಲ್​ ಸಖತ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ. ವಿಲನ್​ ಆಗಿ ಗರುಡ ರಾಮ್​ ಕಾಣಿಸಿಕೊಂಡಿದ್ದಾರೆ.

ಆ್ಯಕ್ಷನ್​ ಮೂಲಕ ಎಂಟ್ರಿ ಕೊಟ್ಟ ‘ರೈಡರ್​; ಕುಮಾರಸ್ವಾಮಿ ಜನ್ಮದಿನಕ್ಕೆ ವಿಶೇಷ ಗಿಫ್ಟ್
ನಿಖಿಲ್​
TV9 Web
| Edited By: |

Updated on:Dec 16, 2021 | 8:22 PM

Share

‘ಸೀತಾರಾಮ ಕಲ್ಯಾಣ’ ತೆರೆಗೆ ಬಂದ ನಂತರದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಕೊವಿಡ್ ಕಾರಣದಿಂದ ಅವರು ಒಪ್ಪಿಕೊಂಡಿದ್ದ ‘ರೈಡರ್​’ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಕೊವಿಡ್​ ಮುಗಿದು ಚಿತ್ರಮಂದಿರಗಳು ಓಪನ್​ ಆಗಿವೆ. ಜನರು ಮತ್ತೆ ಥಿಯೇಟರ್​ನತ್ತ ಹೆಜ್ಜೆ ಹಾಕುತ್ತಿದ್ದಾರೆ. ಈ ಕಾರಣಕ್ಕೆ ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಕ್ರಿಸ್​ಮಸ್​ ನಿಮಿತ್ತ ಸಿನಿಮಾ ಡಿಸೆಂಬರ್​ 24ರಂದು ‘ರೈಡರ್​’ ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ.

ಇಂದು (ಡಿಸೆಂಬರ್​ 16) ಎಚ್​.ಡಿ. ಕುಮಾರಸ್ವಾಮಿ ಜನ್ಮದಿನ. ಇದರ ಪ್ರಯುಕ್ತ ‘ರೈಡರ್​’ ಟ್ರೇಲರ್ ರಿಲೀಸ್​ ಆಗಿದೆ. ಈ ಟ್ರೇಲರ್​ನಲ್ಲಿ ನಿಖಿಲ್​ ಸಖತ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ. ವಿಲನ್​ ಆಗಿ ಗರುಡ ರಾಮ್​ ಕಾಣಿಸಿಕೊಂಡಿದ್ದಾರೆ. ವಿಜಯ್​ ಕುಮಾರ್​ ಕೊಂಡ ಅವರು ‘ರೈಡರ್​’ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ನಿಖಿಲ್‌ ಕುಮಾರ್‌ ಆಪ್ತ ಸುನೀಲ್‌ ಗೌಡ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಲಹರಿ ಫಿಲ್ಮ್ಸ್​​ ಕೂಡ ನಿರ್ಮಾಣದಲ್ಲಿ ಪಾಲುದಾರಿಕೆ ಹಂಚಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನವೆಂಬರ್​ ತಿಂಗಳಲ್ಲೇ ‘ರೈಡರ್​’ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ಕೆಲಸಗಳು ಪೂರ್ಣಗೊಳ್ಳದ ಕಾರಣ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು.

ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಹಿರಿಯ ನಟ ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ನಿಹಾರಿಕ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ. ನಟಿ ಕಾಶ್ಮೀರಿ ಪರ್ದೇಸಿ ಈ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ‘ಡವ ಡವಢ..’ ಸಿನಿಮಾದ ಹಾಡು ಇತ್ತೀಚೆಗೆ ರಿಲೀಸ್ ಆಗಿ ಜನ ಮನ್ನಣೆ ಪಡೆದುಕೊಂಡಿತ್ತು.

‘ರೈಡರ್​’ ಸಿನಿಮಾ ದೊಡ್ಡ ಸ್ಪರ್ಧೆ ಎದುರಿಸಲಿದೆ. ಡಿಸೆಂಬರ್​ ತಿಂಗಳಲ್ಲಿ ದೊಡ್ಡ ಬಜೆಟ್​ನ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ. ಜನವರಿಯಲ್ಲೂ ಹಲವು ಚಿತ್ರಗಳು ರಿಲೀಸ್​ ಆಗುತ್ತಿವೆ. ‘ಪುಷ್ಪ’, ‘ಆರ್​ಆರ್​ಆರ್​’, ‘ರಾಧೆ ಶ್ಯಾಮ್​’, ‘ಸರ್ಕಾರಿ ವಾರು ಪಾಟ’ ಚಿತ್ರಗಳು ‘ರೈಡರ್​’ ಸಿನಿಮಾದ ಆಸುಪಾಸಿನ ಡೇಟ್​ನಲ್ಲಿಯೇ ತೆರೆಗೆ ಬರುತ್ತಿವೆ. ಈ ಮೂಲಕ ನಿಖಿಲ್​ ಸಿನಿಮಾ ದೊಡ್ಡ ಸಿನಿಮಾಗಳ ಜತೆ ಸ್ಪರ್ಧೆಗೆ ಇಳಿದಿದೆ.

ಇದನ್ನೂ ಓದಿ: ‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

ನಾನು ಇನ್ಮುಂದೆ ಕಣ್ಣೀರು ಹಾಕಲ್ಲ: ಮಂಡ್ಯದಲ್ಲಿ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿಕೆ

Published On - 8:22 pm, Thu, 16 December 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!