AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ
TV9 Web
| Edited By: |

Updated on:Nov 16, 2022 | 8:02 PM

Share

ನಿಖಿಲ್ ಕುಮಾರ್​ (Nikhil Kumar) ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಅವರು ರಾಜಕೀಯ ಕೆಲಸಗಳ ಜತೆ ಕುಟುಂಬಕ್ಕಾಗಿ ಸಮಯ ನೀಡುತ್ತಿದ್ದಾರೆ. ಈಗ ನಿಖಿಲ್ ಕುಮಾರ್ ಅವರು ಮಗನ ಫೋಟೋ ಹಂಚಿಕೊಂಡಿದ್ದಾರೆ. ಮಗ ಅವ್ಯಾನ್​ ಹಾಗೂ ಪತ್ನಿ ರೇವತಿ (Revathi Nikhil) ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ. ಅವರು ಮಗ ಅವ್ಯಾನ್​ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಮಕ್ಕಳ ದಿನಾಚರಣೆ (ನವೆಂಬರ್ 14) ಆಚರಿಸಲಾಗಿದೆ. ಈ ಸಂದರ್ಭದಲ್ಲಿ ನಿಖಿಲ್ ತಮ್ಮ ಮಗನ ಫೋಟೋ ಶೇರ್ ಮಾಡಿಕೊಂಡು ಸಂಭ್ರಮಿಸಿದ್ದರು.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ 2021ರ ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತು. ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಈ ಬಗ್ಗೆ ಸಂತಸ ಹೊರಹಾಕಿದ್ದರು. ಜೂನ್ 8ರಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲರೂ ಭಾಗಿಯಾಗಿದ್ದರು. ನಿಖಿಲ್​ ತಮ್ಮ ಪುತ್ರನಿಗೆ ಅವ್ಯಾನ್​​ ದೇವ್ ಎಂದು ಹೆಸರು ಇಟ್ಟಿದ್ದಾರೆ. ಅವ್ಯಾನ್ ಎಂದರೆ ನಾಶ ಇಲ್ಲದವನು ಎಂಬರ್ಥ ಇದೆ.

ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಸಿನಿಮಾ ವಿಚಾರಕ್ಕೆ ಬರೋದಾದರೆ ನಿಖಿಲ್ ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಕಳೆದ ವರ್ಷ ರಿಲೀಸ್ ಆದ ‘ರೈಡರ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಸದ್ಯ ‘ಯದುವೀರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ರಾಜಕೀಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಜೆಡಿಎಸ್ ಪಕ್ಷವನ್ನು ಬೆಳೆಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Published On - 7:58 pm, Wed, 16 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ