AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ
TV9 Web
| Edited By: |

Updated on:Nov 16, 2022 | 8:02 PM

Share

ನಿಖಿಲ್ ಕುಮಾರ್​ (Nikhil Kumar) ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಅವರು ರಾಜಕೀಯ ಕೆಲಸಗಳ ಜತೆ ಕುಟುಂಬಕ್ಕಾಗಿ ಸಮಯ ನೀಡುತ್ತಿದ್ದಾರೆ. ಈಗ ನಿಖಿಲ್ ಕುಮಾರ್ ಅವರು ಮಗನ ಫೋಟೋ ಹಂಚಿಕೊಂಡಿದ್ದಾರೆ. ಮಗ ಅವ್ಯಾನ್​ ಹಾಗೂ ಪತ್ನಿ ರೇವತಿ (Revathi Nikhil) ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ. ಅವರು ಮಗ ಅವ್ಯಾನ್​ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಮಕ್ಕಳ ದಿನಾಚರಣೆ (ನವೆಂಬರ್ 14) ಆಚರಿಸಲಾಗಿದೆ. ಈ ಸಂದರ್ಭದಲ್ಲಿ ನಿಖಿಲ್ ತಮ್ಮ ಮಗನ ಫೋಟೋ ಶೇರ್ ಮಾಡಿಕೊಂಡು ಸಂಭ್ರಮಿಸಿದ್ದರು.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ 2021ರ ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತು. ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಈ ಬಗ್ಗೆ ಸಂತಸ ಹೊರಹಾಕಿದ್ದರು. ಜೂನ್ 8ರಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲರೂ ಭಾಗಿಯಾಗಿದ್ದರು. ನಿಖಿಲ್​ ತಮ್ಮ ಪುತ್ರನಿಗೆ ಅವ್ಯಾನ್​​ ದೇವ್ ಎಂದು ಹೆಸರು ಇಟ್ಟಿದ್ದಾರೆ. ಅವ್ಯಾನ್ ಎಂದರೆ ನಾಶ ಇಲ್ಲದವನು ಎಂಬರ್ಥ ಇದೆ.

ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಸಿನಿಮಾ ವಿಚಾರಕ್ಕೆ ಬರೋದಾದರೆ ನಿಖಿಲ್ ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಕಳೆದ ವರ್ಷ ರಿಲೀಸ್ ಆದ ‘ರೈಡರ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಸದ್ಯ ‘ಯದುವೀರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ರಾಜಕೀಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಜೆಡಿಎಸ್ ಪಕ್ಷವನ್ನು ಬೆಳೆಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Published On - 7:58 pm, Wed, 16 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ