AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ
TV9 Web
| Edited By: |

Updated on:Nov 16, 2022 | 8:02 PM

Share

ನಿಖಿಲ್ ಕುಮಾರ್​ (Nikhil Kumar) ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಅವರು ರಾಜಕೀಯ ಕೆಲಸಗಳ ಜತೆ ಕುಟುಂಬಕ್ಕಾಗಿ ಸಮಯ ನೀಡುತ್ತಿದ್ದಾರೆ. ಈಗ ನಿಖಿಲ್ ಕುಮಾರ್ ಅವರು ಮಗನ ಫೋಟೋ ಹಂಚಿಕೊಂಡಿದ್ದಾರೆ. ಮಗ ಅವ್ಯಾನ್​ ಹಾಗೂ ಪತ್ನಿ ರೇವತಿ (Revathi Nikhil) ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ. ಅವರು ಮಗ ಅವ್ಯಾನ್​ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಮಕ್ಕಳ ದಿನಾಚರಣೆ (ನವೆಂಬರ್ 14) ಆಚರಿಸಲಾಗಿದೆ. ಈ ಸಂದರ್ಭದಲ್ಲಿ ನಿಖಿಲ್ ತಮ್ಮ ಮಗನ ಫೋಟೋ ಶೇರ್ ಮಾಡಿಕೊಂಡು ಸಂಭ್ರಮಿಸಿದ್ದರು.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ 2021ರ ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತು. ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಈ ಬಗ್ಗೆ ಸಂತಸ ಹೊರಹಾಕಿದ್ದರು. ಜೂನ್ 8ರಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲರೂ ಭಾಗಿಯಾಗಿದ್ದರು. ನಿಖಿಲ್​ ತಮ್ಮ ಪುತ್ರನಿಗೆ ಅವ್ಯಾನ್​​ ದೇವ್ ಎಂದು ಹೆಸರು ಇಟ್ಟಿದ್ದಾರೆ. ಅವ್ಯಾನ್ ಎಂದರೆ ನಾಶ ಇಲ್ಲದವನು ಎಂಬರ್ಥ ಇದೆ.

ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಸಿನಿಮಾ ವಿಚಾರಕ್ಕೆ ಬರೋದಾದರೆ ನಿಖಿಲ್ ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಕಳೆದ ವರ್ಷ ರಿಲೀಸ್ ಆದ ‘ರೈಡರ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಸದ್ಯ ‘ಯದುವೀರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ರಾಜಕೀಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಜೆಡಿಎಸ್ ಪಕ್ಷವನ್ನು ಬೆಳೆಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Published On - 7:58 pm, Wed, 16 November 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?