AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಮಗುವನ್ನು ಹಿಡಿದುಕೊಂಡಿರುವ ನಿಖಿಲ್
TV9 Web
| Edited By: |

Updated on:Sep 24, 2021 | 2:45 PM

Share

ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಮಧ್ಯಾಹ್ನ ಒಂದು ಗಂಟೆಗೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ

ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತದ ಕಲರ್​ಫುಲ್​ ಫೋಟೋ ಗ್ಯಾಲರಿ ಇಲ್ಲಿದೆ..

Published On - 1:37 pm, Fri, 24 September 21

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​