AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಮಗುವನ್ನು ಹಿಡಿದುಕೊಂಡಿರುವ ನಿಖಿಲ್
TV9 Web
| Edited By: |

Updated on:Sep 24, 2021 | 2:45 PM

Share

ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಮಧ್ಯಾಹ್ನ ಒಂದು ಗಂಟೆಗೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ

ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತದ ಕಲರ್​ಫುಲ್​ ಫೋಟೋ ಗ್ಯಾಲರಿ ಇಲ್ಲಿದೆ..

Published On - 1:37 pm, Fri, 24 September 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ